ಅಂಗಡಿ ಧ್ವಂಸ ಬಗ್ಗೆ ದೂರು ನೀಡಿದ್ದಕ್ಕೆ ಮಾಲೀಕನಿಗೆ ರೌಡಿಯಿಂದ ಬೆದರಿಕೆ

KannadaprabhaNewsNetwork |  
Published : Nov 18, 2025, 03:30 AM IST

ಸಾರಾಂಶ

ಪಾನಿಪುರಿ ಅಂಗಡಿಯವನು ಕುಡಿಯಲು ಪಾನಿ ಕೊಡಲಿಲ್ಲ ಎಂಬ ಕಾರಣಕ್ಕೆ ಪೆಟ್ಟಿ ಅಂಗಡಿಯನ್ನು ಧ್ವಂಸ ಮಾಡಿದ ಬಗ್ಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ ಪುಡಿ ರೌಡಿಯೊಬ್ಬ ದೂರು ನೀಡಿದವನ ಮನೆಗೆ ತೆರಳಿ ಡ್ರಾಗಾರ್ ನಿಂದ ಬೆದರಿಸಿ ಕೊಲೆ ಬೆದರಿಕೆವೊಡ್ಡಿದ ಘಟನೆ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ 22 ನೇ ವಾರ್ಡ್‌ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕನ್ನಡಪ್ರಭ ವಾರ್ತೆ, ಆನೇಕಲ್ಪಾನಿಪುರಿ ಅಂಗಡಿಯವನು ಕುಡಿಯಲು ಪಾನಿ ಕೊಡಲಿಲ್ಲ ಎಂಬ ಕಾರಣಕ್ಕೆ ಪೆಟ್ಟಿ ಅಂಗಡಿಯನ್ನು ಧ್ವಂಸ ಮಾಡಿದ ಬಗ್ಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ ಪುಡಿ ರೌಡಿಯೊಬ್ಬ ದೂರು ನೀಡಿದವನ ಮನೆಗೆ ತೆರಳಿ ಡ್ರಾಗಾರ್ ನಿಂದ ಬೆದರಿಸಿ ಕೊಲೆ ಬೆದರಿಕೆವೊಡ್ಡಿದ ಘಟನೆ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ 22 ನೇ ವಾರ್ಡ್‌ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಪ್ರಜ್ವಲ್ ಆಲಿಯಾಸ್‌ ಕೊತ್ವಾಲ್ ಎಂಬ ಪುಡಿರೌಡಿ ಈ ಕೃತ್ಯ ಎಸಗಿದ್ದು ಡ್ರಾಗರ್ ಹಿಡಿದು ಕೊಲೆ ಬೆದರಿಕೆ ಹಾಕುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿವರ: ಇದೇ ನ.4ರಂದು ಸಂಜೆ ಆರೋಪಿ ಇಲೆಕ್ಟ್ರಾನಿಕ್ ಸಿಟಿ ವೃತ್ತದ ಬಳಿ ಪಾನಿ ಪೂರಿ ತಿಂದು ಕುಡಿಯಲು ಪಾನಿ ಕೇಳಿದಾಗ, ಇನ್ನೂ ಕೆಲವರು ಗ್ರಾಹಕರಿದ್ದು ಸ್ವಲ್ಪ ತಡ ಮಾಡಿ ನೀಡುವೆನು ಎಂದಿದ್ದಕ್ಕೆ ಕೋಪಗೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಡಿಯನ್ನು ಧ್ವಂಸಗೊಳಿಸಿ ಗಲಾಟೆ ಮಾಡಿದ್ದನು. ಈ ಬಗ್ಗೆ ಸ್ನೇಹಿತರ ಸಲಹೆ ಮೇರೆಗೆ ಪಾನಿಪುರಿ ಅಂಗಡಿ ಮಾಲೀಕ ಠಾಣೆಗೆ ದೂರು ಕೊಟ್ಟಿದ್ದ.

ದೂರಿನಿಂದ ಕೆರಳಿದ ಆರೋಪಿ ಮಾಲೀಕನ ಮನೆಗೆ ತೆರಳಿ ನನ್ನ ಮೇಲೆ ದೂರು ಕೊಡುವಷ್ಟು ಕೊಬ್ಬಾ ನಿನಗೆ ಎಂದು ನಿಂದಿಸಿ ಡ್ರಾಗಾರ್ ತೋರಿಸಿ ನಿನ್ನನ್ನು ಬಿಡುವುದಿಲ್ಲ ಮತ್ತು ನಿನಗೆ ದೂರು ನೀಡಲು ಪ್ರೇರೇಪಿಸಿದವರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದನು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ಅಕ್ರಮ ಮನೆಗಳ ತೆರವು ಎನ್‌ಐಎ ತನಿಖೆಗೆ ನೀಡಲು ಆಗ್ರಹ
ಒಳ್ಳೆ ರಿಸಲ್ಟ್‌ಗಾಗಿ ಶಿಕ್ಷಕರಿಂದ್ಲೇಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಲೀಕ್