ಕಾಲ್ತುಳಿತದಲ್ಲಿ ಮೃತ ಯುವಕನ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ಚೆಕ್ ವಿತರಣೆ

KannadaprabhaNewsNetwork |  
Published : Jun 08, 2025, 11:59 PM ISTUpdated : Jun 09, 2025, 12:00 AM IST
8ಕೆಎಂಎನ್ ಡಿ21 | Kannada Prabha

ಸಾರಾಂಶ

ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ದುರ್ಮರಣ ಹೊಂದಿದ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ ಅವರ ಕುಟುಂಬಕ್ಕೆ ಸರ್ಕಾರದಿಂದ ಘೋಷಿಸಲಾಗಿದ್ದ 25 ಲಕ್ಷ ರು. ಪರಿಹಾರದ ಚೆಕ್‌ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿತರಿಸಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ದುರ್ಮರಣ ಹೊಂದಿದ ತಾಲೂಕಿನ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ ಅವರ ಕುಟುಂಬಕ್ಕೆ ಸರ್ಕಾರದಿಂದ ಘೋಷಿಸಲಾಗಿದ್ದ 25 ಲಕ್ಷ ರು. ಪರಿಹಾರದ ಚೆಕ್‌ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿತರಿಸಿದರು.

ಗ್ರಾಮದ ಶಿಕ್ಷಕರಾಗಿರುವ ಆರ್.ಬಿ.ಚಂದ್ರು ಮತ್ತು ಕಾಂತಾಮಣಿ ದಂಪತಿ ಪುತ್ರ ಪೂರ್ಣಚಂದ್ರ (26) ನಿವಾಸಕ್ಕೆ ಆಗಮಿಸಿದ ಸಚಿವರು, ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಿಸಿದರು. ನಂತರ ಮಾತನಾಡಿ, ಕ್ರೀಡಾ ಇತಿಹಾಸದಲ್ಲಿ ಇದೊಂದು ಕಪ್ಪುಚುಕ್ಕೆಯಾಗಿ ಉಳಿಯುಲಿದೆ. ಇಂತಹ ಘಟನೆಯನ್ನು ಯಾರೊಬ್ಬರೂ ಕೂಡಾ ಇದನ್ನು ಊಹೆ ಮಾಡಿರಲಿಲ್ಲ ಎಂದರು.

ಮೃತಪಟ್ಟ ಯುವಕ ಪೂರ್ಣಚಂದ್ರ ಜೀವನದಲ್ಲಿ ಹಲವು ಕನಸುಗಳನ್ನು ಹೊಂದಿದ್ದ ಯುವಕ. ಸರ್ಕಾರ ನೀಡುತ್ತಿರುವ ಪರಿಹಾರ ಅವರ ಸಮಾಧಾನಕ್ಕಷ್ಟೆ. ಕುಟುಂಬದ ನೋವನ್ನು ಹಣದಿಂದ ಭರಿಸಲು ಸಾಧ್ಯವಿಲ್ಲ. ಘಟನೆ ಕುರಿತು ತನಿಖೆ ನಡೆಯುತ್ತಿದೆ. ತಪ್ಪನ್ನು ಯಾರೆ ಮಾಡಿರಲಿ ಅವರಿಗೆ ಶಿಕ್ಷೆಯಾಗುತ್ತದೆ ಎಂದರು.ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರು. ಪರಿಹಾರ ಘೋಷಿಸಿದ್ದ ರಾಜ್ಯ ಸರ್ಕಾರ ಆನಂತರ ಎಲ್ಲರೊಂದಿಗೆ ಚರ್ಚಿಸಿ ಪರಿಹಾರದ ಮೊತ್ತವನ್ನು 25 ಲಕ್ಷ ರು.ಗಳಿಗೆ ಹೆಚ್ಚಿಸಿತು. ಅದನ್ನು ಇಂದು ಕುಟುಂಬಸ್ಥರಿಗೆ ವಿತರಿಸಿದ್ದೇನೆ. ಈ ಪರಿಹಾರದ ಜೊತೆಗೆ ಆರ್‌ಸಿಬಿಯಿಂದ 10 ಲಕ್ಷ, ಕರ್ನಾಟಕ ಕ್ರಿಕೆಟ್ ಅಸೋಷಿಯನ್ 5 ಲಕ್ಷ ಪರಿಹಾರ ಘೋಷಿಸಿದೆ. ಇದರಿಂದ ಪ್ರತಿ ಕುಟುಂಬಕ್ಕೂ ಒಟ್ಟು 40 ಲಕ್ಷ ರು. ಪರಿಹಾರ ದೊರಕಲಿದೆ ಎಂದರು.

ಇಂತಹ ಘಟನೆಗಳು ನಡೆದಾಗ ಎಲ್ಲರೂ ಕೂಡಾ ಸರ್ಕಾರಕ್ಕೆ ಬೆಂಬಲವಾಗಿ ನಿಂತು ಮುಂದೆ ಕರಾಳ ಘಟನೆ ನಡೆಯದ ಹಾಗೆ ಎಚ್ಚರವಹಿಸುವ ಸಲಹೆ ನೀಡಬೇಕು. ಆದರೆ, ವಿಪಕ್ಷಗಳು ದೂರುತ್ತಿರುವುದು ಸರಿಯಲ್ಲ ಎಂದರು.

ಸಿಎಂ ಅಥವಾ ಸಚಿವರಿಗೆ ಈ ಘಟನೆ ನಡೆಯುತ್ತದೆ ಎಂಬ ಕಲ್ಪನೆ ಕೂಡಾ ಇರಲಿಲ್ಲ. ಕ್ರೀಡಾಭಿಮಾನಿಗಳ ಜೊತೆಯಲ್ಲಿ ಸರ್ಕಾರ ನಿಂತಿತ್ತು. ಇದು ತಪ್ಪೆ?, ಅವಕಾಶವನ್ನು ಮಾಡಿಕೊಡದಿದ್ದರೆ ಅದಕ್ಕೂ ಸರ್ಕಾರವನ್ನು ವಿಪಕ್ಷಗಳು ದೂರುತ್ತಿದ್ದವು. ಈಗ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಮೃತ ಪೋಷಕರಿಗೆ ಕ್ಷಮಿಸಪ್ಪಾ. ನಮ್ಮ ಕೈಯಿಂದ ಇಷ್ಟನ್ನೆ ಮಾಡಲಾಗುವುದು. ನಿಮ್ಮ ಅಳಿಯನಿಗೆ ಕೆ.ಆರ್.ಪೇಟೆ ಫುಡ್‌ಪಾರ್ಕ್‌ನಲ್ಲಿ ನೌಕರಿ ಕೊಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಭರವಸೆ ನೀಡಿದರು.

ಈ ವೇಳೆ ಶಾಸಕ ಎಚ್.ಟಿ.ಮಂಜು, ಜಿಲ್ಲಾಧಿಕಾರಿ ಡಾ.ಕುಮಾರ್, ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಜಿಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಷ್, ತಾಪಂ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಕೃಷಿಕ ಸಮಾಜದ ನಿರ್ದೇಶಕ ಹೆತ್ತಗೋನಹಳ್ಳಿ ನಾರಾಯಣಗೌಡ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''