ಯುವ ರೈತರನ್ನು ಮದುವೆ ಆಗುವ ಯುವತಿಯರಿಗೆ 5 ಲಕ್ಷ ರು. ಪ್ರೋತ್ಸಾಹಧನ ನೀಡಿ

KannadaprabhaNewsNetwork |  
Published : Dec 13, 2025, 02:00 AM IST
12ಕೆಎಂಎನ್ ಡಿ11 | Kannada Prabha

ಸಾರಾಂಶ

ಕೃಷಿ ನಂಬಿಕೊಂಡು ಬದುಕು ನಡೆಸುತ್ತಿರುವ ಯುವ ರೈತರಿಗೆ ಹೆಣ್ಣು ಕೊಡುತ್ತಿಲ್ಲ. ಇದರಿಂದ ಯುವ ರೈತರಿಗೆ ಬದುಕಿನ ಗ್ಯಾರಂಟಿ ಇಲ್ಲವಾಗಿದೆ. ಹಾಗಾಗಿ ಸರ್ಕಾರ ಶಾದಿ ಭಾಗ್ಯದ ಮಾದರಿಯಲ್ಲಿ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದಿಂದ 5 ಲಕ್ಷ ರು.ಗಳ ಪ್ರೋತ್ಸಾಹ ಧನವನ್ನು ನೀಡುವ ಮೂಲಕ ರೈತ ಮಕ್ಕಳನ್ನು ಮದುವೆಯಾಗಲು ಪ್ರೋತ್ಸಾಹಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಯುವ ರೈತರನ್ನು ಮದುವೆ ಆಗುವ ಯುವತಿಯರಿಗೆ 5 ಲಕ್ಷ ರು. ಪ್ರೋತ್ಸಾಹ ಧನ ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಕೆಲವರು ಮದುವೆ ಹುಡುಗನ ವೇಷದೊಂದಿಗೆ ಸೇರಿದ ರೈತರು, ಕೃಷಿಯನ್ನೇ ನಂಬಿಕೊಂಡು ಬದುಕು ಕಟ್ಟಿಕೊಳ್ಳಬೇಕೆಂದಿರುವ ಯುವ ರೈತರಿಗೆ ಹೆಣ್ಣು ಸಿಗುತ್ತಿಲ್ಲ. ಹೆಣ್ಣು ಮಕ್ಕಳ ಪೋಷಕರು ಕೃಷಿ ಮಾಡುವ ರೈತನ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ. ಇದರಿಂದ ಯುವ ರೈತರಿಗೆ ಬದುಕಿನ ಗ್ಯಾರಂಟಿ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಒಂದು ಕಡೆ ನಿರುದ್ಯೋಗ ಸಮಸ್ಯೆ, ರಾಜ್ಯ ಸರ್ಕಾರದಿಂದ ಯಾವುದೇ ಸರ್ಕಾರಿ ಕೆಲಸಕ್ಕೆ ನೇಮಕಾತಿಯಾಗಿಲ್ಲ. ಸರ್ಕಾರದ ನೀತಿಯಿಂದಾಗಿ ಖಾಸಗಿ ಕಂಪನಿಗಳು ಕರ್ನಾಟಕಕ್ಕೆ ಉದ್ಯಮ ಸ್ಥಾಪನೆಗಾಗಿ ಬರುತ್ತಿಲ್ಲ. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇಲ್ಲ. ಇತ್ತ ಬೆಳೆ ಬೆಳೆಯಲು ನೀರು ಇಲ್ಲ. ಕೃಷಿಯನ್ನು ನಂಬಿಕೊಂಡವರ ಬದುಕು ಮೂರಾಬಟ್ಟೆಯಾಗಿದೆ ಎಂದು ದೂರಿದರು.

ಕೃಷಿ ನಂಬಿಕೊಂಡು ಬದುಕು ನಡೆಸುತ್ತಿರುವ ಯುವ ರೈತರಿಗೆ ಹೆಣ್ಣು ಕೊಡುತ್ತಿಲ್ಲ. ಇದರಿಂದ ಯುವ ರೈತರಿಗೆ ಬದುಕಿನ ಗ್ಯಾರಂಟಿ ಇಲ್ಲವಾಗಿದೆ. ಹಾಗಾಗಿ ಸರ್ಕಾರ ಶಾದಿ ಭಾಗ್ಯದ ಮಾದರಿಯಲ್ಲಿ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದಿಂದ 5 ಲಕ್ಷ ರು.ಗಳ ಪ್ರೋತ್ಸಾಹ ಧನವನ್ನು ನೀಡುವ ಮೂಲಕ ರೈತ ಮಕ್ಕಳನ್ನು ಮದುವೆಯಾಗಲು ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿದರು.

ಮದುವೆಯಾಗುವ ಯುವಕ-ಯುವತಿಯರಿಗೆ ಸರ್ಕಾರದಿಂದ ಸರಳ ಸಾಮೂಹಿಕ ವಿವಾಹ ಮಾಡಿಕೊಡುವ ವ್ಯವಸ್ಥೆ ಮಾಡಿಕೊಡುವ ಮೂಲಕ ಯುವ ರೈತರ ಬದುಕಿಗೆ ಗ್ಯಾರಂಟಿ ನೀಡಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ, ಉತ್ತರ ಕರ್ನಾಟಕ, ಹಳೆಮೈಸೂರು ಭಾಗ ಎನ್ನುವ ತಾರತಮ್ಯವಿಲ್ಲದೆ ಅಖಂಡ ಕರ್ನಾಟಕಕ್ಕೆ ಈ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ರೈತ ಮಕ್ಕಳಾದ ಆನಂದ, ಗೊರವಾಲೆ ಶಿವಣ್ಣ, ಮುಖಂಡರಾದ ಸಿ.ಟಿ. ಮಂಜುನಾಥ್, ಹೊಸಹಳ್ಳಿ ಶಿವು, ಜಯರಾಮು, ಬಿ.ಟಿ. ಶಿವಲಿಂಗಯ್ಯ, ವೈರಮುಡಿ, ಸಾಗರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ