ಪ್ರತಿ ಗಣೇಶ ಮಹಾಮಂಡಳಿಗೆ 5001 ರು.

KannadaprabhaNewsNetwork |  
Published : Aug 18, 2025, 12:02 AM IST
ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಶಿವಾನುಭವ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ವಿಜಯಪುರ ನಗರದ ಎಲ್ಲ ಗಜಾನನ ಮಹಾಮಂಡಳಿಗಳ ಸಭೆಯ ನಡೆಯಿತು. | Kannada Prabha

ಸಾರಾಂಶ

ನಗರದ ಪ್ರತಿ ಗಣೇಶ ಮಹಾಮಂಡಳಿಗಳಿಗೆ ವೈಯುಕ್ತಿಕವಾಗಿ 5001 ನೀಡಲಾಗುವುದು. ತಮ್ಮ ತಮ್ಮ ಮಹಾಮಂಡಳಿಗಳ ವೇದಿಕೆಗೆ ಆಗಮಿಸಿ ಹಣ ನೀಡಲಾಗುತ್ತದೆ

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಪ್ರತಿ ಗಣೇಶ ಮಹಾಮಂಡಳಿಗಳಿಗೆ ವೈಯುಕ್ತಿಕವಾಗಿ ₹5001 ನೀಡಲಾಗುವುದು. ತಮ್ಮ ತಮ್ಮ ಮಹಾಮಂಡಳಿಗಳ ವೇದಿಕೆಗೆ ಆಗಮಿಸಿ ಹಣ ನೀಡಲಾಗುತ್ತದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಘೋಷಣೆ ಮಾಡಿದರು.

ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಶಿವಾನುಭವ ಸಮುದಾಯ ಭವನದಲ್ಲಿ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳಿಯಿಂದ ಹಮ್ಮಿಕೊಂಡಿದ್ದ ವಿಜಯಪುರ ನಗರದ ಎಲ್ಲ ಗಜಾನನ ಮಹಾಮಂಡಳಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪರಿಸರ ಸಂರಕ್ಷಣೆ ದೃಷ್ಟಿಯಿಂದ ಮಣ್ಣಿನ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಆದ್ಯತೆ ಕೊಡಬೇಕು. ಫೈಬರ್ ಗಣೇಶ ಮೂರ್ತಿಗಳ ಸ್ಥಾಪನೆಗೆ ಮುಂದಾಗಬೇಕು. ನೀರು ಅಮೂಲ್ಯವಾದದ್ದು, ಅದು ಶುದ್ಧ, ಪವಿತ್ರವಾಗಿರಬೇಕು. ಹೀಗಾಗಿ ಬಾವಿಗಳನ್ನು ಹಾಳು ಮಾಡುವ ಕೆಲಸ ಮಾಡಬಾರದು. ಕೃತಕ ಹೊಂಡದಲ್ಲಿಯೇ ಗಣೇಶ ವಿಸರ್ಜನೆ ಮಾಡಬೇಕು. ಅತ್ಯಂತ ಶಿಸ್ತಿನಿಂದ ಹಾಗೂ ಭವ್ಯ ಮೆರವಣಿಗೆ ಮೂಲಕ ಮಾದರಿಯಾಗಿ ನಗರದಲ್ಲಿ ಗಣೇಶ ಹಬ್ಬ ಆಚರಿಸೋಣ ಎಂದರು. ಸನಾತನ ಹಿಂದೂ ಧರ್ಮದ ಪ್ರಕಾರ ಸೂರ್ಯೋದಯದಿಂದಲೇ ನಮ್ಮ ಮೊದಲ ದಿನ ಆರಂಭವಾಗುತ್ತದೆ, ಮಧ್ಯರಾತ್ರಿ ಗಣೇಶನ ವಿಸರ್ಜಿಸಿದರೆ ಒಂದು ದಿನ ಹೆಚ್ಚಾಗುತ್ತದೆ. ಹೀಗಾಗಿ ಸಿದ್ದೇಶ್ವರ ಜಾತ್ರೆಯ ನಂದಿಕೋಲ‌ ಮಾದರಿಯಲ್ಲಿ ಹಗಲು ಹೊತ್ತಿನಲ್ಲೇ ಮೆರವಣಿಗೆ ಆರಂಭಿಸಿ, ರಾತ್ರಿ ವೇಳೆಗೆ ಮುಗಿಸಬೇಕು. ಇದರಿಂದ ಜನರಿಗೆ ಮೆರವಣಿಗೆ ಕಣ್ತುಂಬಿಕೊಳ್ಳಲು ಕೂಡ ಅವಕಾಶ ದೊರೆಯುತ್ತದೆ. ಹೀಗಾಗಿ ಈ ವರ್ಷದಿಂದ ಈ ಪದ್ಧತಿ ಆರಂಭಿಸೋಣ ಎಂದರು.ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಡಿವೈಎಸ್ಪಿ ಬಸವರಾಜ ಯಲಿಗಾರ, ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಹುಲ್ ಜಾಧವ, ಉಪ ಆಯುಕ್ತ ಮಹಾವೀರ ಬೋರಣ್ಣವರ, ಸ್ವಾಮಿ ವಿವೇಕಾನಂದ ಸೇನೆಯ ನೂತನ ಅಧ್ಯಕ್ಷ ಚಂದ್ರು ಚೌದರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನೇಕರು ಸಲಹೆ ಸೂಚನೆಗಳನ್ನು ನೀಡಿದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ರಾಮನಗೌಡ ಪಾಟೀಲ, ಶ್ರೀ ಸಿದ್ದೇಶ್ವರ ಸಂಸ್ಥೆ ನಿರ್ದೇಶಕ ಗುರುಪಾದಯ್ಯ ಗಚ್ಚಿನಮಠ, ಹಿರಿಯರಾದ ಸಿದ್ರಾಮಪ್ಪ ಉಪ್ಪಿನ, ಮಹಾನಗರ ಪಾಲಿಕೆ ಸದಸ್ಯರಾದ ಕಿರಣ ಪಾಟೀಲ, ಜವಾಹರ ಗೋಸಾವಿ, ರಾಜಶೇಖರ ಕುರಿಯವರ, ಸಿಪಿಐ ಮಲ್ಲಯ್ಯ ಮಠಪತಿ, ಮುಖಂಡರಾದ ಸಾಯಿಬಣ್ಣ ಭೋವಿ, ವಿಕ್ರಮ ಗಾಯಕವಾಡ, ಲಕ್ಷ್ಮಣ ಜಾಧವ ಬಾಬು ಶಿರಶ್ಯಾಡ, ಸಂತೋಷ ಪಾಟೀಲ, ರಾಜು ಜಾಧವ, ಸಚಿನ ಕುಮಸಿ ಮತ್ತಿತರರು ಇದ್ದರು. ಶಂಕರ ಹೂಗಾರ ನಿರೂಪಿಸಿದರು.

ಪದಾಧಿಕಾರಿಗಳ ನೇಮಕ:

2026ನೇ ಸಾಲಿನ ಶ್ರೀ ಸ್ವಾಮಿ ವಿವೇಕಾನಂದ ಸೇನೆಯ ಅಧ್ಯಕ್ಷರಾಗಿ ನಂದು ಗಡಗಿ, ಉಪಾಧ್ಯಕ್ಷ ರಾಜಶೇಖರ ಬಜಂತ್ರಿ, ಉಮೇಶ ವೀರಕರ, ಸುಭಾಷ ಚೌಡಾಪುರ, ಬಸವರಾಜ ಗುರಮ್ಮನವರ, ಮನೋಜ ಸುರಪುರ, ವಿನೋದ ಸಾಳುಂಕೆ, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ ಮಾವಿನಗಿಡದ, ಅಮೀತ್ ಗರುಡಕರ, ಕಾರ್ಯದರ್ಶಿಗಳು ನಾಗರಾಜ ಮುಳವಾಡ, ಕಲ್ಲನಗೌಡ ಬಿರಾದಾರ, ಮಲ್ಲನಗೌಡ ಪಾಟೀಲ, ಪರಶುರಾಮ ಜಾಧವ, ರಂಗನಾಥ ಮುಂದಡಾ, ಗೋವಿಂದ ಪವಾರ, ಕುಮಾರಗೌಡ ಅವರು ನೇಮಕವಾಗಿದ್ದಾರೆ.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌