ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 900 ಕೋಟಿ ರು.: ನಗರಾಭಿವೃದ್ಧಿ ಇಲಾಖೆಯಿಂದ ಷರತ್ತುಬದ್ಧ ಅನುಮೋದನೆ

KannadaprabhaNewsNetwork |  
Published : Nov 04, 2025, 03:45 AM IST

ಸಾರಾಂಶ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ(ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಿವಿಧ ವಾರ್ಡ್‌ ರಸ್ತೆಗಳು, ಚರಂಡಿ ಅಭಿವೃದ್ಧಿ ಹಾಗೂ ನಿರ್ವಹಣಾ ಮತ್ತು ಮೂಲಸೌಕರ್ಯಗಳ ಕಾಮಗಾರಿ ಕೈಗೊಳ್ಳುವ ಸಂಬಂಧ ಸುಮಾರು 900 ಕೋಟಿ ರು. ವೆಚ್ಚದ ಕಾಮಗಾರಿಗಳ ಕ್ರಿಯಾ ಯೋಜನೆಗೆ ನಗರಾಭಿವೃದ್ಧಿ ಇಲಾಖೆ ಷರತ್ತುಬದ್ಧ ಅನುಮೋದನೆ ನೀಡಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ(ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಿವಿಧ ವಾರ್ಡ್‌ ರಸ್ತೆಗಳು, ಚರಂಡಿ ಅಭಿವೃದ್ಧಿ ಹಾಗೂ ನಿರ್ವಹಣಾ ಮತ್ತು ಮೂಲಸೌಕರ್ಯಗಳ ಕಾಮಗಾರಿ ಕೈಗೊಳ್ಳುವ ಸಂಬಂಧ ಸುಮಾರು 900 ಕೋಟಿ ರು. ವೆಚ್ಚದ ಕಾಮಗಾರಿಗಳ ಕ್ರಿಯಾ ಯೋಜನೆಗೆ ನಗರಾಭಿವೃದ್ಧಿ ಇಲಾಖೆ ಷರತ್ತುಬದ್ಧ ಅನುಮೋದನೆ ನೀಡಿದೆ.

ಷರತ್ತುಗಳು

*ಕಾಮಗಾರಿಗಳನ್ನು 10 ಕೋಟಿ ರು.ಗೆ ಕಡಿಮೆ ಇರದಂತೆ ಪ್ಯಾಕೇಜ್‌ ಮಾಡಿ, ಕೆಟಿಪಿಪಿ ಪೋರ್ಟಲ್‌ ಮುಖಾಂತರ ಅಲ್ಪಾವಧಿ ಟೆಂಡರ್‌ ಕರೆಯಬೇಕು. ಸರ್ಕಾರದ ಆದೇಶದ ಅನ್ವಯ ತಾಂತ್ರಿಕ ಮತ್ತು ಆರ್ಥಿಕ ಪರಿಶೀಲನೆ ನಡೆಸಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸಬೇಕು.

* ಈ ಕಾಮಗಾರಿಗಳು ದೀರ್ಘಾವಧಿ ಬಾಳಿಕೆಯುಳ್ಳ ಆಸ್ತಿ ಸೃಜನೆ ಸ್ವರೂಪದ್ದಾಗಿದ್ದು, ಉತ್ತಮ ಗುಣಮಟ್ಟ ಕಾಯ್ದುಕೊಂಡು ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ದಿಷ್ಟ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಬೇಕು. ಈ ಕಾಮಗಾರಿಗಳನ್ನು 10 ಕೋಟಿ ರು.ಗೆ ಕಡಿಮೆ ಇರದಂತೆ ಪ್ಯಾಕೇಜ್‌ ಮಾಡಿ ಇ-ಟೆಂಡರ್‌ ಮುಖಾಂತರ ಅನುಷ್ಠಾನಗೊಳಿಸಬೇಕು.

* ಜಿಬಿಎ ಮುಖ್ಯ ಆಯುಕ್ತರು ಅನುಮೋದಿತ ಕ್ರಿಯಾ ಯೋಜನೆಯಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಪ್ರಕಾರ ಕಾಮಗಾರಿಗಳನ್ನು ಗುರುತಿಸಿ ಅನುಷ್ಠಾನಗೊಳಿಸಬೇಕು.

* ಕ್ರಿಯಾ ಯೋಜನೆಯ ಕಾಮಗಾರಿ ಬದಲಿಸಿ ಅನುಷ್ಠಾನಗೊಳಿಸುವಾಗ ಜಿಬಿಎ ಮುಖ್ಯ ಆಯುಕ್ತರ ಶಿಫಾರಸ್ಸಿನ ಮೇರೆಗೆ ಇಲಾಖಾ ಸಚಿವರ ಅನುಮೋದನೆ ಪಡೆಯಬೇಕು.

* ಸರ್ಕಾರದ ಆಡಳಿತಾತ್ಮಕ ಅನುಮೋದನೆ ನಿರೀಕ್ಷಿಸಿ ಕೂಡಲೇ ಅಲ್ಪಾವಧಿ ಟೆಂಡರ್‌ ಕರೆದು, ಟೆಂಡರ್‌ ಅನುಮೋದನೆ ಮತ್ತು ಆಡಳಿತಾತ್ಮಕ ಅನುಮೋದನೆಗೆ ಒಂದೇ ಬಾರಿಗೆ ಪ್ರಸ್ತಾವನೆ ಸಲ್ಲಿಸಬೇಕು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ