ಸಮುದಾಯದ ಭವನಕ್ಕೆ 1 ಕೋಟಿ ರು. ಅನುದಾನ: ಸುಧಾಕರ್‌

KannadaprabhaNewsNetwork |  
Published : Jul 02, 2025, 12:21 AM IST
ಚಿತ್ರ 1 | Kannada Prabha

ಸಾರಾಂಶ

ಹಿರಿಯೂರು ನಗರದ ಮೋಕ್ಷಗುಂಡಂ ವಿಶ್ವೇಶ್ವರಯ್ಯ ವಿದ್ಯಾ ಮಂದಿರದಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಾ ಪುರಸ್ಕಾರವನ್ನು ಸಚಿವ ಸುಧಾಕರ್‌ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಹಿರಿಯೂರು

ನಗರದ ಮೋಕ್ಷ ಗುಂಡಂ ವಿಶ್ವೇಶ್ವರಯ್ಯ ವಿದ್ಯಾ ಮಂದಿರದಲ್ಲಿ ತಾಲೂಕು ವೀರಶೈವ ಲಿಂಗಾಯತ ಮಹಾಸಭಾ, ತಾಲೂಕು ವೀರಶೈವ ನೌಕರರ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಮುದಾಯದ ಭವನಕ್ಕೆ ನಿವೇಶನ ನೀಡುವುದರ ಜತೆಗೆ ಭವನ ನಿರ್ಮಾಣಕ್ಕೆ 1 ಕೋಟಿ ರು. ಅನುದಾನ ನೀಡಲಾಗುವುದು ಎಂಬ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷ, ಜಿಲ್ಲಾ ಉಸ್ತುವಾರಿ ಶ್ರೀನಿವಾಸ ರೆಡ್ಡಿ, ರಾಷ್ಟ್ರೀಯ ಸದಸ್ಯ ಅಮೃತೇಶ್ವರಸ್ವಾಮಿ.ಜಿಲ್ಲಾದ್ಯಕ್ಷ ಮಹಡಿ ಶಿವಮೂರ್ತಿ, ತಾಲೂಕು ಅಧ್ಯಕ್ಷ ಉಮೇಶ್ ಗುರಾಣಿಮಠ, ಪ್ರಧಾನ ಕಾರ್ಯದರ್ಶಿ, ವಕೀಲ ಮಹಾಂತೇಶ್, ಜಿಲ್ಲಾ ವೀರಶೈವ ನೌಕರರ ಸಂಘದ ಅಧ್ಯಕ್ಷ ವೀರೇಶ್, ನಗರಸಭಾ ಸದಸ್ಯೆ ರತ್ನಮ್ಮ ತಿಪ್ಪೀರಣ್ಣ, ರಾಜ್ಯ ಮಹಿಳಾ ನಿರ್ದೇಶಕಿ ಶಶಿಕಲಾ, ರೂಪಾ, ಶಶಿಧರಬಾಬು, ರುದ್ರಪ್ಪ ಜಾಲಿಕಟ್ಟೆ, ಕಿರಣ್ ಶಂಕರ್, ರೋಟರಿ ವೀರೇಶ್, ಜೆ.ಎಂ.ಶಿವಾನಂದ್, ಅರುಣ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ