ಆರ್‌ಎಸ್‌ಎಸ್‌ ಸ್ವಾತಂತ್ರ‍್ಯ ಸಂಗ್ರಾಮ ವಿರೋಧಿ: ಬಿಕೆ ಹರಿಪ್ರಸಾದ್‌

KannadaprabhaNewsNetwork |  
Published : Aug 23, 2026, 01:45 AM IST
ಚಿತ್ರ 22ಬಿಡಿಆರ್9ಬೀದರ್‌ ವಿಮಾನ ನಿಲ್ದಾಣದ ಆವರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ ಭೇಟಿಯಾದ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. | Kannada Prabha

ಸಾರಾಂಶ

ಆರ್‌ಎಸ್‌ಎಸ್‌ನವರು ದೇಶದ ಸ್ವಾತಂತ್ರ‍್ಯ ಹೋರಾಟದ ವಿರುದ್ಧ ಇದ್ದವರು, ಸ್ವತಂತ್ರ ಹೋರಾಟದಲ್ಲಿ ಯಾರೂ ಪಾಲ್ಗೊಂಡಿರಲಿಲ್ಲ ಅವರನ್ನೇನೂ ತಲೆ ಮೇಲಿಟ್ಟುಕೊಂಡು ಸುತ್ತೋಕಾಗುತ್ತಾ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ ವ್ಯಂಗ್ಯವಾಡಿದರು.

ಕನ್ನಡಪ್ರಭ ವಾರ್ತೆ ಬೀದರ್‌

ಆರ್‌ಎಸ್‌ಎಸ್‌ನವರು ದೇಶದ ಸ್ವಾತಂತ್ರ‍್ಯ ಹೋರಾಟದ ವಿರುದ್ಧ ಇದ್ದವರು, ಸ್ವತಂತ್ರ ಹೋರಾಟದಲ್ಲಿ ಯಾರೂ ಪಾಲ್ಗೊಂಡಿರಲಿಲ್ಲ ಅವರನ್ನೇನೂ ತಲೆ ಮೇಲಿಟ್ಟುಕೊಂಡು ಸುತ್ತೋಕಾಗುತ್ತಾ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ ವ್ಯಂಗ್ಯವಾಡಿದರು.

ಕಲಬುರಗಿಯಲ್ಲಿ ಆಯೋಜಿತವಾಗಿದ್ದ ಕಾರ್ಯಕ್ರಮಕ್ಕೆ ತೆರಳಲು ಶನಿವಾರ ಬೆಳಿಗ್ಗೆ ಬೀದರ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಬಿಕೆ ಹರಿಪ್ರಸಾದ ಅವರು ಮಾಧ್ಯಮದವರಿಗೆ ಆರ್‌ಎಸ್‌ಎಸ್‌ ಕುರಿತು ಪ್ರಿಯಾಂಕ್ ಖರ್ಗೆ ಪದೇಪದೇ ಹೇಳಿಕೆ ನೀಡುತ್ತಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ,

ಆರ್‌ಎಸ್‌ಎಸ್‌ನವರು ಸ್ವಾತಂತ್ರ‍್ಯ ಹೋರಾಟದ ಆಶಯಗಳನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದ್ದಾರೆ. ಸಂವಿಧಾನ, ರಾಷ್ಟ್ರಗೀತೆ, ತ್ರಿವರ್ಣ ಧ್ವಜದ ವಿರೋಧಿಗಳನ್ನ ಪೂಜಿಸೋಕೆ ಆಗುತ್ತಾ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿ ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ ಎಂದು ಖರ್ಗೆ ಅವರ ಸತತ ದಾಳಿಯನ್ನು ಸಮರ್ಥಿಸಿಕೊಂಡರು.

ಒಟ್ಟಾರೆ ರಾಜ್ಯದ ಬಿಜೆಪಿಯವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿಕ್‌ ಶಾ ಅವರನ್ನ ರಕ್ಷಿಸುತ್ತಿದ್ದಾರೆ ಹೊರತು ಬೇರೇನು ಇಲ್ಲ. ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆಗೆ ಸಜ್ಜಾಗಿರುವ ಬಿಜೆಪಿಯವರ ಕುರಿತು ಪ್ರತಿಕ್ರಿಯಿಸಿ ಪಾದಯಾತ್ರೆ ಮಾಡಲಿ ತೊಂದರೆ ಇಲ್ಲ ಎಂದರು. ಈ ಸಂದರ್ಭದಲ್ಲಿ ಸಂಸದ ಸಾಗರ ಖಂಡ್ರೆ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮತ್ತಿತರರು ಇದ್ದಕೇಂದ್ರ ವೈಫಲ್ಯ ಮುಚ್ಚಲು ನಾಗೇಂದ್ರ ಹೆಸರಿನಲ್ಲಿ ಬಿಜೆಪಿಯವರ ಹೋರಾಟ: ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗಾಗಿ ಬಿಜೆಪಿಯ ಹೋರಾಟ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ನಾಗೇಂದ್ರನ ಬಗ್ಗೆ ಕಾಳಜಿ ಇಲ್ಲ. ದೆಹಲಿಯಲ್ಲಿ ಸಂಸದರ ಜೊತೆ ಸಿಎಂ ಸಭೆ ನಡೆಸಿದ್ದರು, ಕರ್ನಾಟಕ ರಾಜ್ಯದ 18 ಜಿಲ್ಲೆಗಳಲ್ಲಿ ಬರ ಇದ್ದು ಗಂಭೀರ ಪರಿಸ್ಥಿತಿಯಿದೆ, ಹೀಗಾಗಿ, ₹10 ಸಾವಿರ ಕೋಟಿ ಪರಿಹಾರ ಜೊತೆಗೆ ರಾಜ್ಯಕ್ಕೆ ಬರ ಅಧ್ಯಯನಕ್ಕೆ ತಂಡ ಕಳುಹಿಸಿಕೊಡಲು ಕೇಂದ್ರದ ಮೇಲೆ ಸಂಸದರ ಮೂಲಕವೂ ಒತ್ತಡವನ್ನು ಮುಖ್ಯಮಂತ್ರಿ ಹೇರಿದ್ದರು ಆದರೆ ಕೇಂದ್ರ ಸರ್ಕಾರ ಇವೆರಡೂ ಮಾಡದಿರುವುದು ಚರ್ಚೆಗೆ ಬರುತ್ತೆ ಎಂಬ ಕಾರಣಕ್ಕೆ ನಾಗೇಂದ್ರ‌ನ ಹೆಸರಿಟ್ಟುಕೊಂಡು ಧರಣಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಲೂಕು ಅಭಿವೃದ್ಧಿಗೆ ತಂದೆಯಕನಸು ಸಾಕಾರವೇ ನನ್ನ ಗುರಿ
ಇಂದು ಬಳಘಟ್ಟ ಗ್ರಾಮಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ: ಸಿ.ಎಸ್.ಪುಟ್ಟರಾಜು