ದತ್ತಾತ್ರೇಯ ಹೊಸಬಾಳೆ ನೇತೃತ್ವದಲ್ಲಿ ಹಂಪಿಗೆ ಆರೆಸ್ಸೆಸ್‌ ಪ್ರಚಾರಕರ ಭೇಟಿ

KannadaprabhaNewsNetwork |  
Published : Jan 01, 2026, 03:30 AM IST
31ಎಚ್‌ಪಿಟಿ14-  ದತ್ತಾತ್ರೇಯ ಹೊಸಬಾಳೆ ಅವರ ನೇತೃತ್ವದಲ್ಲಿ ಬುಧವಾರ ಹಂಪಿಯ ಸ್ಮಾರಕಗಳಿಗೆ ಆರೆಸ್ಸೆಸ್ ಕುರಿತು 23 ದೇಶಗಳಲ್ಲಿ ಪ್ರಚಾರದಲ್ಲಿ ತೊಡಗಿರುವ ಪ್ರಮುಖರು ಭೇಟಿ ನೀಡಿದರು. | Kannada Prabha

ಸಾರಾಂಶ

ಉಗ್ರ ನರಸಿಂಹ, ಕಮಲ ಮಹಲ್‌, ಹಜಾರ ರಾಮ ದೇವಾಲಯ ಸೇರಿದಂತೆ ವಿರೂಪಾಕ್ಷೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.

ಹೊಸಪೇಟೆ: ಆರೆಸ್ಸೆಸ್ ಕುರಿತು 23 ದೇಶಗಳಲ್ಲಿ ಪ್ರಚಾರದಲ್ಲಿ ತೊಡಗಿರುವ ಪ್ರಮುಖ ಪ್ರಚಾರಕರು ಆರ್‌ಎಸ್‌ಎಸ್‌ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ನೇತೃತ್ವದಲ್ಲಿ ಬುಧವಾರ ಹಂಪಿಯ ವಿರೂಪಾಕ್ಷೇಶ್ವರ ದೇವಾಲಯ, ವಿಜಯ ವಿಠಲ ದೇವಸ್ಥಾನ ಸೇರಿದಂತೆ ವಿವಿಧ ಸ್ಮಾರಕಗಳಿಗೆ ಭೇಟಿ ನೀಡಿದರು.

ಹಂಪಿ ವಿಜಯ ವಿಠಲ ದೇವಾಲಯದ ಕಲ್ಲಿನತೇರು ಸ್ಮಾರಕ, ಸಪ್ತಸ್ವರ ಮಂಟಪ, ಬಡವಿ ಲಿಂಗ, ಉಗ್ರ ನರಸಿಂಹ, ಕಮಲ ಮಹಲ್‌, ಹಜಾರ ರಾಮ ದೇವಾಲಯ ಸೇರಿದಂತೆ ವಿರೂಪಾಕ್ಷೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.

ಈ ವೇಳೆ ಆನೆಗೊಂದಿ ರಾಜವಂಶಸ್ಥ ಶ್ರೀಕೃಷ್ಣದೇವರಾಯ ಸೇರಿದಂತೆ ಸ್ಥಳೀಯ ಪ್ರಮುಖ ಕಾರ್ಯಕರ್ತರು ಇದ್ದರು. ಗೈಡ್‌ ಗಂಗಾಧರ ಹಂಪಿ ಸ್ಮಾರಕಗಳ ಕುರಿತು ಮಾಹಿತಿ ನೀಡಿದರು.

ಹಂಪಿ ಸಮೀಪದ ಆನೆಗುಂದಿಯಲ್ಲಿ ಬುಧವಾರದಿಂದ ನಡೆಯುತ್ತಿರುವ ಮೂರು ದಿನಗಳ ಚಿಂತನ ಮಂಥನ ಸಭೆಯಲ್ಲಿ ಪಾಲ್ಗೊಳ್ಳಲು ಆರೆಸ್ಸೆಸ್‌ನ ಪ್ರಮುಖರು ಆಗಮಿಸಿದ್ದಾರೆ. ಹೈದರಾಬಾದ್‌ನ ಶಿಬಿರದ ಬಳಿಕ ಈಗ ಶಿಬಿರ ನಡೆಯುತ್ತಿದೆ. ಅಮೆರಿಕ ಸೇರಿದಂತೆ 23 ದೇಶಗಳಲ್ಲಿ ಇವರು ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದಾರೆ. ಆರೆಸ್ಸೆಸ್‌ ಶತಮಾನೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಶಿಬಿರ ನಡೆಸಲಾಗುತ್ತಿದೆ ಎಂದು ಆರೆಸ್ಸೆಸ್‌ನ ಸ್ಥಳೀಯ ಮುಖಂಡರೊಬ್ಬರು ತಿಳಿಸಿದರು.

ದತ್ತಾತ್ರೇಯ ಹೊಸಬಾಳೆ ನೇತೃತ್ವದಲ್ಲಿ ಬುಧವಾರ ಹಂಪಿಯ ಸ್ಮಾರಕಗಳಿಗೆ ಆರೆಸ್ಸೆಸ್ ಕುರಿತು 23 ದೇಶಗಳಲ್ಲಿ ಪ್ರಚಾರದಲ್ಲಿ ತೊಡಗಿರುವ ಪ್ರಮುಖರು ಭೇಟಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ