ಆರ್‌ಎಸ್‌ಎಸ್‌ನ ನೂರು ವರ್ಷಗಳ ವಿಜಯದಶಮಿ

KannadaprabhaNewsNetwork |  
Published : Oct 05, 2025, 01:00 AM IST
ಆರ್‌ಎಸ್‌ಎಸ್‌ನ ನೂರು ವ?ಗಳ ವಿಜಯದಶಮಿ ಉತ್ಸವ ಯಶಸ್ವಿ | Kannada Prabha

ಸಾರಾಂಶ

ತಾಲೂಕಿನ ಕರಡಿ ಗ್ರಾಮ ಪಂಚಾಯತಿ ಮಟ್ಟದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ತುಂಬಿದ ಸಂದರ್ಭದಲ್ಲಿ ವಿಜಯದಶಮಿ ಉತ್ಸವವನ್ನು ಕರಡಿ ರಂಗನಾಥಪುರ ಗ್ರಾಮದಲ್ಲಿ ಯಶಸ್ವಿಯಾಗಿ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ತಿಪಟೂರು

ತಾಲೂಕಿನ ಕರಡಿ ಗ್ರಾಮ ಪಂಚಾಯತಿ ಮಟ್ಟದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ತುಂಬಿದ ಸಂದರ್ಭದಲ್ಲಿ ವಿಜಯದಶಮಿ ಉತ್ಸವವನ್ನು ಕರಡಿ ರಂಗನಾಥಪುರ ಗ್ರಾಮದಲ್ಲಿ ಯಶಸ್ವಿಯಾಗಿ ಆಚರಿಸಲಾಯಿತು.

ಸಂಘದ ಜಿಲ್ಲಾ ಸಂಚಾಲಕರಾದ ಮನೀಶ್ ಹಡಗೂರು ನೇತೃತ್ವದಲ್ಲಿ ನಡೆದ ಈ ಸಮಾರಂಭದಲ್ಲಿ ಸಂಘ ಬೆಳೆದು ಬಂದ ಹಾದಿ, ಸಂಘದ ಉದ್ದೇಶಗಳು, ಚಟುವಟಿಕೆಗಳು, ಹಾಗೂ ಶಿಸ್ತಿನ ಬಗ್ಗೆ ಕಾರ್ಯಕರ್ತರಿಗೆ ತಿಳಿಸಿದರು.

ಕರಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಕೆ.ಆರ್ ದೇವರಾಜು ಮಾತನಾಡಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಪ್ರತಿಗ್ರಾಮ ಮಟ್ಟದಲ್ಲಿ ಸಂಘಟನೆ ಮಾಡಬೇಕು. ಸ್ವಯಂಸೇವಕ ಸಂಘವು ಒಂದು ಶಿಸ್ತುಬದ್ಧ ಸಂಘವಾಗಿದ್ದು ಇದರಿಂದ ಶಿಸ್ತಿನ ಜೀವನ ನಡೆಸಲು ಸಾಧ್ಯ. ಆಗಾಗಿ ಚಿಕ್ಕ ಮಕ್ಕಳಿಂದಲೇ ಈ ಬಗ್ಗೆ ಅರಿವು ಮೂಡಿಸಬೇಕು ಯುವಕರಲ್ಲಿ ಹೆಚ್ಚು ಸಂಘಟಿತರನ್ನಾಗಿಸಬೇಕು ಹಿಂದೂ ಧರ್ಮದ ಉಳಿವಿಗಾಗಿ ಸ್ವಯಂಸೇವಕ ಸಂಘವು ಇನ್ನು ಹೆಚ್ಚು ವಿಸ್ತಾರವಾಗಿ ಬೆಳೆಯಬೇಕೆಂದು ತಿಳಿಸಿದರು.ಸ್ವಯಂಸೇವಕ ಸಂಘದ ಕಿಬ್ಬನಹಳ್ಳಿ ಹೋಬಳಿ ಉಸ್ತುವಾರಿಗಳಾದ ನಗರಸಭೆ ಸದಸ್ಯ ಶಶಿಕಿರಣ್, ಬಳ್ಳೆಕಟ್ಟೆ ಸುರೇಶ್ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ