-ಕರ್ನಾಟಕ ಲೋಕಾಯುಕ್ತ ವತಿಯಿಂದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ
ಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ಸ್ಪಂದಿಸಿ ಅನಗತ್ಯ ಕಾಲಹರಣ ಮಾಡದೇ ಪಾರದರ್ಶಕ ಕರ್ತವ್ಯ ನಿರ್ವಹಿಸುವಂತೆ ಹಾಗೂ ಕೆಲಸ ಮಾಡುವ ಪತ್ರಿಯೊಬ್ಬ ಅಧಿಕಾರಿಯು ಸೇವಾ ಮನೋಭಾವದೊಂದಿಗೆ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪಿ.ಕೆ ಉಮೇಶ ತಿಳಿಸಿದ್ದಾರೆ.
ಯಾದಗಿರಿ ತಹಸೀಲ್ದಾರ್ ಕಾರ್ಯಲಯದ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು.2024ರ “Say No To Corruption; Commit to the Nation ಧ್ಯೇಯ ವಾಕ್ಯದೊಂದಿಗೆ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ-2024 ಆಚರಣೆ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಿ ಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಈ ಕಛೇರಿಯು ಜನಸಾಮಾನ್ಯರ ಕಛೇರಿಯಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯು ಒಂದಿಲ್ಲೊಂದು ಕಾರಣಕ್ಕಾಗಿ ತಹಸೀಲ್ದಾರರ ಕಚೇರಿಗೆ ಸಂರ್ಪಕಿಸಬೇಕಾಗುತ್ತದೆ, ಕಾರಣ ಪ್ರತಿ ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ಸ್ಪಂದಿಸಬೇಕು.
ಯಾದಗಿರಿ ತಹಸೀಲ್ದಾರ ಸುರೇಶ ಅಂಕಲಗಿ ಹಾಗೂ ತಹಸೀಲ್ದಾರ್ ಕಾರ್ಯಲಯದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
------30ವೈಡಿಆರ್2: ಯಾದಗಿರಿ ತಹಸೀಲ್ದಾರ ಕಾರ್ಯಲಯದ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು.