ಕೊಪ್ಪಳ:
ಜಿಲ್ಲಾಡಳಿತ ಭವನದಲ್ಲಿರುವ ಸದಸ್ಯರ ಕಾರ್ಯಾಲಯದಲ್ಲಿ ರೈಲ್ವೆ ಜನಪರ ಹೋರಾಟ ಸಮಿತಿ ಗೌರವಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು, ಅಧ್ಯಕ್ಷ ಎಸ್.ಎ. ಗಫಾರ್, ಪ್ರಧಾನ ಕಾರ್ಯದರ್ಶಿ ಮಖಬೂಲ್ ರಾಯಚೂರು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಬಸವರಾಜ್ ಶೀಲವಂತರ, ನಾಗರಿಕ ಹಕ್ಕುಗಳ ಹೋರಾಟ ಸಮಿತಿ (ಪಿಯುಸಿಎಲ್) ಜಿಲ್ಲಾ ಘಟಕದ ಮುಖಂಡ ಮಹಾಂತೇಶ್ ಕೊತಬಾಳ, ಗೌಸ್ ನೀಲಿ, ಶಿವಪ್ಪ ಹಡಪದ, ಗಾಳೆಪ್ಪ ಮುಂಗೋಲಿ, ಮುತ್ತು ಹಡಪದ ಮುಂತಾದವರ ನಿಯೋಗ ಮನವಿ ಸಲ್ಲಿಸಿತು.
ಬೆಂಗಳೂರು-ಹೊಸಪೇಟೆ-ಬೆಂಗಳೂರು ರೈಲನ್ನು ಹೊಸಪೇಟೆಯಿಂದ ಮುನಿರಾಬಾದ್-ಗಿಣಿಗೇರಾ-ಕೊಪ್ಪಳ-ಭಾಣಾಪುರ-ತಳಕಲ್ ಜಂಕ್ಷನ್ ಮೂಲಕ ಕುಕನೂರು, ಯಲಬುರ್ಗಾ, ಕುಷ್ಟಗಿವರೆಗೆ ವಿಸ್ತರಿಸಬೇಕು. ಹುಬ್ಬಳ್ಳಿಯಿಂದ ಬೀದರಿಗೆ ಇಂಟರ್ ಸಿಟಿ ರೈಲು (ವಾಯ: ಗದಗ, ಕೊಪ್ಪಳ, ಹೊಸಪೇಟೆ, ಬಳ್ಳಾರಿ, ಗುಂತಕಲ್, ಮಂತ್ರಾಲಯ ರೋಡ್, ರಾಯಚೂರು, ಯಾದಗಿರಿ. ಕಲಬುರಗಿ) ಮಾರ್ಗವಾಗಿ ನಿತ್ಯ ಬೀದರಿಗೆ ಹೊಸ ರೈಲು ಪ್ರಾರಂಭಿಸುವುದರಿಂದ ಮುಂಬೈ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವುದು ಸೇರಿದಂತೆ ಹಲವಾರು ರೈಲುಗಳ ಪ್ರಾರಂಭಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.