ಕನ್ನಡಪ್ರಭ ವಾರ್ತೆ ಲೋಕಾಪುರ
ಗುರುವಾರ ಪಟ್ಟಣದ ಎಪಿಎಂಸಿ ಆವರಣದ ಉದಪುಡಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕಾರ್ಖಾನೆ ಪುನಶ್ಚೇತನಕ್ಕೆ ಮುತುವರ್ಜಿ ವಹಿಸುವ ಮೂಲಕ, ರೈತರು ಹಾಗೂ ಕಾರ್ಮಿಕರ ಹಿತ ಕಾಪಾಡಿದ್ದಾರೆ. ಇಬ್ಬರಿಗೂ ಕೃತಜ್ಞತೆ ಸಲ್ಲಿಸಲಾಗುವುದಾಗಿ ಹೇಳಿದರು.
20 ವರ್ಷಗಳ ಕಾಲ ಮುಧೋಳ ಶಾಸಕರಾಗಿ ಹಾಗೂ ಉಪಮುಖ್ಯಮಂತ್ರಿಯಾಗಿದ್ದ ಗೋವಿಂದ ಕಾರಜೋಳ ಅವರು ಕಾರ್ಖಾನೆ ಪ್ರಾರಂಭಿಸಲು ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ದುರದೃಷ್ಟಕರ ಸಂಗತಿ. ರೈತರ ಮತ್ತು ಕಾರ್ಮಿಕರ ಹಿತ ಕಾಯುವಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ. ಕೊಟ್ಟ ಮಾತಿನಂತೆ ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಶ್ರಮಿಸಿದೆ ಎಂದರು.ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ ಮಾತನಾಡಿ, 2022-23ರ ಹಂಗಾಮಿನಲ್ಲಿ ಮುಂಚಿನ ಆಡಳಿತ ಮಂಡಳಿ ಕಾರ್ಖಾನೆ ಪ್ರಾರಂಭಿಸಿ ರೈತರಿಗೆ ಬಿಲ್ ಕೊಡಲಾಗದೆ ಅಸಹಾಯಕರಾಗಿ ರಾಜೀನಾಮೆ ನೀಡಿದ್ದರು. ಸಚಿವ ಆರ್.ಬಿ.ತಿಮ್ಮಾಪುರ ಅವರು ಮುತುವರ್ಜಿ ವಹಿಸಿ ರೈತರ ಹಿತದೃಷ್ಟಿಯಿಂದ ₹27.60 ಕೋಟಿ ರೈತರಿಗೆ ಬಿಲ್ ಕೊಡುವ ವ್ಯವಸ್ಥೆ ಮಾಡಿ ರೈತರನ್ನು ಸಂಕಷ್ಟದಿಂದ ಪಾರು ಮಾಡಿದರು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ ಕಾಶಿನಾಥ ಹುಡೇದ ಮಾತನಾಡಿ, ಮಾಜಿ ಸಂಸದ ದಿ.ಎಸ್.ಟಿ. ಪಾಟೀಲ, ಆರ್.ಬಿ. ತಿಮ್ಮಾಪುರ, ತಾಲೂಕಿನ ರೈತರು ಸೇರಿ ಸಹಕಾರ ರಂಗದ ಕಾರ್ಖಾನೆ ಕಟ್ಟಿದರು. ಬಿಜೆಪಿಯವರು ಕಾರ್ಖಾನೆಯ ಆಡಳಿತ ವಶಕ್ಕೆ ಪಡೆದು 20 ವರ್ಷಗಳ ಕಾಲ ಅಧಿಕಾರ ನಡೆಸಿ ಸಾಲ ಮಾಡಿ ಕಾರ್ಖಾನೆಯನ್ನು ನಷ್ಟದಲ್ಲಿ ದೂಡಿ ಕಾರ್ಖಾನೆ ಬಂದ್ ಕೆಡೆವಿದರು. ಈಗ ಕಾರ್ಖಾನೆ ಪುನಃ ಪ್ರಾರಂಭಿಸಲು ಮತ್ತೆ ಆರ್.ಬಿ.ತಿಮ್ಮಾಪುರ ಬರಬೇಕಾಯಿತು ಎಂದರು.
-----------------------------ಕೋಟ್....
-ಎಸ್.ಜಿ.ನಂಜಯ್ಯನಮಠ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ
೧೬-ಎಲ್.ಕೆ.ಪಿ-೧ : ಲೋಕಾಪುರ ಪಟ್ಟಣದ ಎಪಿಎಂಸಿ ಆವರಣದ ಉದಪುಡಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಜಿಲ್ಲಾ ಕೆಪಿಸಿಸಿ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮಾತನಾಡಿದರು. ಅಶೋಕ ಕಿವಡಿ, ಶಿವಾನಂದ ಉದಪುಡಿ, ಕಾಶಿನಾಥ ಹುಡೇದ, ಗುರುರಾಜ ಉದಪುಡಿ, ಲಕ್ಷ್ಮಣ ಮಾಲಗಿ, ಆನಂದ ಹಿರೇಮಠ, ಭೀಮನಗೌಡ ಪಾಟೀಲ ಇದ್ದರು.