ಛಲವಾದಿ ನಾರಾಯಣ ಸ್ವಾಮಿ ಎದುರು ಕಾಂಗ್ರೆಸ್ಸಿಗರ ದುರ್ವರ್ತನೆಗೆ ರೂಪಾಲಿ ನಾಯ್ಕ ಖಂಡನೆ

KannadaprabhaNewsNetwork |  
Published : May 23, 2025, 12:03 AM IST
ಸ | Kannada Prabha

ಸಾರಾಂಶ

ರಾಜ್ಯದಲ್ಲಿ ಪ್ರಜಾಪ್ರಭುತ್ವ ಮಾದರಿಯ ಸರ್ಕಾರ ಇದೆಯೇ ಅಥವಾ ಸರ್ವಾಧಿಕಾರಿ ಆಡಳಿತ ಇದೆಯೇ

ಕಾರವಾರ: ಕಾಂಗ್ರೆಸ್ ಪಕ್ಷದ ಗೂಂಡಾಗಳು ವಿಪಕ್ಷ ನಾಯಕನ ಹುದ್ದೆಯಲ್ಲಿದ್ದು, ಶೋಷಿತ ಸಮುದಾಯಗಳ ನಾಯಕರೂ ಆಗಿರುವ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಕಲಬುಗಿಯ ಚಿತ್ತಾಪುರದ ಅತಿಥಿಗೃಹದಲ್ಲಿ ದಿಗ್ಬಂಧನದಲ್ಲಿ ಇಟ್ಟ ಘಟನೆ ದಿಗ್ಭ್ರಮೆ ಉಂಟುಮಾಡಿದೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ ಮಾದರಿಯ ಸರ್ಕಾರ ಇದೆಯೇ ಅಥವಾ ಸರ್ವಾಧಿಕಾರಿ ಆಡಳಿತ ಇದೆಯೇ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಪ್ರಶ್ನಿಸಿದ್ದಾರೆ.

ಛಲವಾದಿ ನಾರಾಯಣ ಸ್ವಾಮಿ ಅವರನ್ನು ದಿಗ್ಬಂಧನದಲ್ಲಿ ಇಟ್ಟು, ಅವರ ವಿರುದ್ಧ ಘೋಷಣೆಗಳನ್ನು ಕೂಗಲಾಗಿದೆ. ಅವರ ಕಾರಿಗೆ ಬಣ್ಣ ಎರಚಲಾಗಿದೆ. ಅವರು ಹೇಳಿಕೆ ನೀಡಿದ್ದಕ್ಕೆ ಪ್ರತ್ಯುತ್ತರ ನೀಡಬೇಕಾದದ್ದು ಸಾಂವಿಧಾನಿಕ ನಡೆ. ಬಾಯಿ ತೆಗೆದರೆ ಸಂವಿಧಾನ ಹೇಳುವ ಕಾಂಗ್ರೆಸ್ಸಿಗರು ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಸಂವಿಧಾನ ವಿರೋಧಿ ನಡವಳಿಕೆ ಪ್ರದರ್ಶಿಸಿದ್ದಾರೆ. ಪ್ರತಿಪಕ್ಷದ ನಾಯಕರನ್ನು ಹತ್ತಿಕ್ಕುವ ಹುನ್ನಾರ ಈ ವರ್ತನೆಯ ಹಿಂದಿದೆ. ಅದಿಲ್ಲ ಅಂತಾದರೆ ಛಲವಾದಿ ನಾಯಕನ ರಕ್ಷಣೆಗೆ ಸರ್ಕಾರ ನಿಲ್ಲಬೇಕು. ಅವರ ವಿರುದ್ಧ ಅನಾಗರಿಕವಾಗಿ ನಡೆದುಕೊಂಡವರ ಮೇಲೆ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟಕ್ಕಿಳಿಯುವುದು ಅನಿವಾರ್ಯ. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ರೂಪಾಲಿ ಎಸ್.ನಾಯ್ಕ ಎಚ್ಚರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!