ಗ್ರಾಮೀಣ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ

KannadaprabhaNewsNetwork |  
Published : Feb 26, 2025, 01:07 AM IST
ತೆಂಕಣಕೇರಿಯ ಶ್ರೀ ಮಹಾಗಣಪತಿ ಸಾಂಸ್ಕೃತಿಕ ಕಲಾ ಸಂಘದ ದ್ವಿತೀಯ ವರ್ಷದ ಸಂಗೀತ,ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಸಾಧಕರನ್ನು ಗೌರವಿಸಲಾಯಿತು. | Kannada Prabha

ಸಾರಾಂಶ

ಹಳ್ಳಿಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದರೆ ಹಳ್ಳಿಯ ಕಲಾವಿದರಿಗೆ ಅವಕಾಶ ಒದಗಿ ಬರುತ್ತದೆ

ಅಂಕೋಲಾ: ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಸಿಕ್ಕರೆ ಪ್ರತಿಭೆಗಳ ಅನಾವರಣ ಸಾಧ್ಯವಿದೆ. ಹೀಗಾಗಿ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಆಗಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಹೇಳಿದರು.

ಅವರು ತೆಂಕಣಕೇರಿಯ ಶ್ರೀವೆಂಕಟರಮಣ ದೇವಸ್ಥಾನದ ಆವಾರದಲ್ಲಿ ಅಂಕೋಲೆಯ ಶ್ರೀಮಹಾಗಣಪತಿ ಸಾಂಸ್ಕೃತಿಕ ಕಲಾ ಸಂಘದ ದ್ವಿತೀಯ ವರ್ಷದ ಸಂಗೀತ, ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ನಿರಂತರ ನಡೆಯಲಿ ಎಂದು ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಜಿಪಂ ಮಾಜಿ ಸದಸ್ಯೆ ಚೈತ್ರಾ ಕೊಠಾರಕರ್ ಮಾತನಾಡಿ, ಹಳ್ಳಿಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದರೆ ಹಳ್ಳಿಯ ಕಲಾವಿದರಿಗೆ ಅವಕಾಶ ಒದಗಿ ಬರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪುರಸಭೆಯ ಅಧ್ಯಕ್ಷ ಸೂರಜ ನಾಯ್ಕ ಮಾತನಾಡಿ, ಒತ್ತಡದಿಂದ ನಾವು ಹೊರ ಬರಲು ಮನರಂಜನಾ ಕಾರ್ಯಕ್ರಮಗಳು ಅಗತ್ಯ ಎಂದರು.

ಸನ್ಮಾನ:

ಇದೇ ಸಂದರ್ಭದಲ್ಲಿ ಸಮಿತಿಯಿಂದ ಶ್ರೀಶಾಂತಾದುರ್ಗಾ ದೇವಸ್ಥಾನದ ಮುಖ್ಯ ಅರ್ಚಕ ವಿಠ್ಠಲ ಶಾಂತಾರಾಮ ಭಟ್ಟ, ಕಲಾವಿದ ಉಮೇಶ ನಾಯ್ಕ, ಗಾಯಕಿ ದೀಕ್ಷಾ ನಾಗರಾಜ, ಸಾಮಾಜಿಕ ಕಾರ್ಯಕರ್ತ ಸಣ್ಣಪ್ಪ ಮಾಸ್ತರ್, ನಿವೃತ್ತ ಮುಖ್ಯಾಧ್ಯಾಪಕಿ ಪಾರ್ವತಿ ಜಿ.ನಾಯಕ, ನಿವೃತ್ತ ಮುಖ್ಯಾಧ್ಯಾಪಕಿ ಸುಶೀಲಾ ಆಗೇರ್, ಮಾಜಿ ಸೈನಿಕ ಗಿರೀಶ ನಾಯಕ, ಕರಾಟೆಪಟು ಸಂಪ್ರೀತ ಪ್ರವೀಣ ನಾಯ್ಕ, ಸಾಮಾಜಿಕ ಕಾರ್ಯಕರ್ತ ಮಹೇಶ ನಾಯ್ಕ ಅವರ್ಸಾ, ಶಿಕ್ಷಕ ಜಿ.ಆರ್. ತಾಂಡೇಲ್, ಕಲಾವಿದ ಹಮೀದ್‌ರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ವರದಿಗಾರ ಮಂಜುನಾಥ ನಾಯ್ಕ ಬೆಳಂಬಾರ, ಸಾಮಾಜಿಕ ಕಾರ್ಯಕರ್ತ ಸಣ್ಣಪ್ಪ ಮಾಸ್ತರ್, ವರದಿಗಾರ ವಿಠ್ಠಲದಾಸ ಕಾಮತ್, ಶ್ರೀ ವೆಂಕಟರಮಣ ಸೇವಾ ಸಂಸ್ಥೆಯ ಅಧ್ಯಕ್ಷ ಆನಂದು ನಾಯ್ಕ ಉಪಸ್ಥಿತರಿದ್ದರು.

ಸೌಮ್ಯ ಶ್ರೀನಿವಾಸ ನಾಯ್ಕ ಪ್ರಾರ್ಥಿಸಿದರು. ಶ್ರೀಮಹಾಗಣಪತಿ ಸಾಂಸ್ಕೃತಿಕ ಕಲಾ ಸಂಘದ ಅಧ್ಯಕ್ಷ ಶ್ರೀಕಾಂತ ಎನ್.ನಾಯ್ಕ ಸ್ವಾಗತಿಸಿದರು. ಪ್ರ.ಕಾರ್ಯದರ್ಶಿ ಪ್ರವೀಣ ಎನ್. ನಾಯಕ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಜಿ.ಆರ್.ತಾಂಡೇಲ್ ಕಾರ್ಯಕ್ರಮ ನಿರ್ವಹಿಸಿದರು. ಸಹ ಕಾರ್ಯದರ್ಶಿ ಮಹೇಶ ಡಿ. ನಾಯ್ಕ ವಂದಿಸಿದರು. ನಂತರ ಕಲಾವಿದ ನಾಗರಾಜ ಜಾಂಬಳೇಕರ್ ತಂಡದಿಂದ ರಸಮಂಜರಿ, ಸ್ಥಳೀಯ ಕಲಾವಿದರಿಂದ ಹಾಡು, ಹಾಸ್ಯ, ನೃತ್ಯ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ