ಗ್ರಾಮೀಣ ಭಾಗದ ರುದ್ರಭೂಮಿ ಸ್ವಚ್ಛವಾಗಿಡಬೇಕು-ಶಾಸಕ ಪಠಾಣ

KannadaprabhaNewsNetwork |  
Published : Jul 27, 2026, 02:30 AM IST
ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಪಂಚಾಯಿತಿ ಅಧಿಕಾರಿಗಳ ಸಭೆ ಉದ್ದೇಶಿಸಿ ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ್ ಮಾತನಾಡಿದರು. | Kannada Prabha

ಸಾರಾಂಶ

ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ರುದ್ರಭೂಮಿಗಳನ್ನು ಸ್ವಚ್ಛವಾಗಿಡಬೇಕು. ಯಾವುದೇ ರುದ್ರಭೂಮಿಗಳ ಕುರಿತು ದೂರುಗಳು ಬಂದರೆ ಆ ಭಾಗದ ಪಿಡಿಓಗಳ ಕುರಿತು ಮೇಲಧಿಕಾರಿಗಳಿಗೆ ಬರೆಯಲಾಗುವುದು ಎಂದು ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಶಿಗ್ಗಾಂವಿ: ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ರುದ್ರಭೂಮಿಗಳನ್ನು ಸ್ವಚ್ಛವಾಗಿಡಬೇಕು. ಯಾವುದೇ ರುದ್ರಭೂಮಿಗಳ ಕುರಿತು ದೂರುಗಳು ಬಂದರೆ ಆ ಭಾಗದ ಪಿಡಿಓಗಳ ಕುರಿತು ಮೇಲಧಿಕಾರಿಗಳಿಗೆ ಬರೆಯಲಾಗುವುದು ಎಂದು ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಪಂಚಾಯಿತಿ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಶಾಲೆಗಳಲ್ಲಿ ಅಡುಗೆ ಕೋಣೆಗಳು, ಕಟ್ಟಡದ ಕೊರತೆಯ ಮಾಹಿತಿ ನೀಡಬೇಕು ಜೊತೆಗೆ ಕ್ಷೇತ್ರಕ್ಕೆ ಮುಂದಿನ ದಿನಗಳಲ್ಲಿ ೬ ಸಾವಿರ ಮನೆಗಳು ಮಂಜೂರು ಆಗಲಿವೆ. ಪ್ರತಿ ಗ್ರಾಮ ಪಂಚಾಯಿತಿಗೆ ನೂರು ಮನೆಗಳನ್ನು ಹಂಚಲಾಗುತ್ತದೆ ಎಂದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಿರಂತರವಾಗಿ ನೀರಾವರಿ ಇಲಾಖೆಯೊಂದಿಗೆ ಸಂಪರ್ಕದಲ್ಲಿ ಇದ್ದು, ಕ್ಷೇತ್ರದ ಕೆರೆಗಳನ್ನು ವರದಾ ನದಿ ನೀರಿನಿಂದ ತುಂಬಿಸಲು ಪ್ರಯತ್ನಿಸಲಾಗುತ್ತಿದೆ. ಪಂಚಾಯಿತಿ ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ಅದರ ಕೆಲಸ ಮಾಡಬೇಕು. ಕ್ಷೇತ್ರದಲ್ಲಿ ಬಾಕಿ ಇರುವ ಕೆಲಸ ಮಾಡುವುದರ ಮೂಲಕ ಜನರಿಗೆ ಅವಶ್ಯವಿರುವ ಕೆಲಸಗಳನ್ನು ಆಧ್ಯತೆಯ ಮೇರೆಗೆ ಮಾಡಲಾಗುತ್ತಿದೆ. ೧೪-೧೫ ಹಣಕಾಸು ಯೋಜನೆಯ ಸಂಪೂರ್ಣ ಕಾಮಗಾರಿಗಳ ಮಾಹಿತಿ ಪರಿಶೀಲಿಸಿದರು.

ತಾಲೂಕಿನ ಗೌಳೆರದಡ್ಡಿ ಗ್ರಾಮದಲ್ಲಿ ಮತದಾರರ ಸಂಖ್ಯೆ ಕಡಿಮೆ ಇರುವುದರಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅಲ್ಲಿನ ಜನರಿಗೆ ಬದಕುವ ಹಕ್ಕು ಇರುವುದರಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮೊದಲ ಆದ್ಯತೆಯ ಮೇರೆಗೆ ಆ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸಿಕೊಡಬೇಕು ಎಂದು ತಾಕೀತು ಮಾಡಿದರು.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರನ್ನು ಒದಗಿಸಲು ವಿದ್ಯುತ್ ಸಂಪರ್ಕಗಳಿಗೆ ಹೆಸ್ಕಾಂ ಇಲಾಖೆ ಸಹಕರಿಸುತ್ತಿಲ್ಲ ಎಂಬ ಪಿಡಿಓಗಳ ದೂರಿನ ಮೇರೆಗೆ ಹೆಸ್ಕಾಂ ಇಲಾಖೆ ಅಧಿಕಾರಿಗಳನ್ನು ಸಭೆಗೆ ಸಭೆಗೆ ಕರೆಯಿಸಿ ಆದ್ಯತೆಗೆ ಅನುಸಾರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಹೆಸ್ಕಾಂ ಎಇಇ ಅವರಿಗೆ ತಾಕೀತು ಮಾಡಿದರು.

ಅತ್ತಿಗೇರಿ ಗ್ರಾಪಂ ಒಂದರಲ್ಲಿಯೇ ೧೫ನೇ ಹಣಕಾಸಿನಲ್ಲಿ ೨೦ ಲಕ್ಷ ಹಣವಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸಿ ಐತಿಹಾಸಿಕ ಗ್ರಾಮವನ್ನು ಸುಂದರವಾಗಿರಿಸಬೇಕು. ತಾಲೂಕಿನ ವಿವಿಧ ಗ್ರಾಪಂಗಳಲ್ಲಿಯೂ ಗ್ರಾಮದ ಅಭಿವೃದ್ಧಿಗೆ ಶ್ರಮಿಸಿ ರಸ್ತೆ, ಚರಂಡಿಗಳನ್ನು ನನ್ನ ಅನುದಾನದಲ್ಲಿ ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಸ್.ಎಫ್. ಮಣಕಟ್ಟಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲದಿ, ಜಿಪಂ ಕೆಡಿಪಿ ಸದಸ್ಯ ಶಂಭುಲಿಂಗಪ್ಪ ಆಜೂರ, ಶಿಗ್ಗಾಂವಿ ತಾಪಂ ಇಓ ಮಂಜುನಾಥ ಸಾಳೊಂಕೆ, ಸವಣೂರ ತಾ.ಪಂ. ಇಓ ಬಸವರಾಜ ಶಿಡೇನೂರ ಸೇರಿದಂತೆ ಶಿಗ್ಗಾಂವಿ-ಸವಣೂರ ತಾಲೂಕಿನ ಪಿಡಿಓಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರ ಮೇಲಿದೆ ಸಮಾಜದ ಭವಿಷ್ಯ ರೂಪಿಸುವ ಹೊಣೆ: ಡಿ.ಕೆ. ಹೊನ್ನಪ್ಪನವರ
ನರಗುಂದ ತಾಲೂಕಿನಲ್ಲಿ ಬೆಳೆ ಉಳಿಸಲು ಟ್ಯಾಂಕರ್‌ ನೀರಿನ ಮೊರೆ