ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದೇವರಾಜ್
ರಾಜ್ಯದ ಅಭಿವೃದ್ಧಿಗೆ ವಿವಿಧ ರೀತಿ ಕೊಡುಗೆ ನೀಡಿದ ಹಿರಿಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಕಳೆದು ಕೊಂಡಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಎಸ್.ಎಂ.ಕೃಷ್ಣ ಅವರು ಉತ್ತಮ ಸಂಸ್ಕಾರಯುತ ಜೀವನ ನಡೆಸಿದ್ದಾರೆ. ಅವರ ಸಾಮಾಜಿಕ ಕಾರ್ಯಗಳು ಇಂದಿಗೂ ಜೀವಂತ. ಅತ್ಯಂತ ಕಿರಿಯ ವಯಸ್ಸಿನಲ್ಲಿ ವಿವಿಧ ಸ್ಥಾನಮಾನಗಳನ್ನು ಹೊಂದಿದ್ದರು ಎಂದು ಹೇಳಿದರು.ರಾಜಧಾನಿ ಬೆಂಗಳೂರಿಗೆ ಅಭಿವೃದ್ಧಿಯ ಮೂಲಕ ಹೊಸ ರೂಪ ಕೊಡುವುದರೊಂದಿಗೆ ಐಟಿ, ಬಿಟಿ ಕೇಂದ್ರವಾಗಿ ಜಗತ್ತಿನ ಗಮನ ಸೆಳೆಯುವಂತೆ ಮಾಡಿದ ಕೀರ್ತಿಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ ಮಾತನಾಡಿ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ದೂರದೃಷ್ಟಿಯಿಂದ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಯಿತು. ಅವರು ಅಪರೂಪದ ರಾಜಕಾರಣಿ, ಯಾವುದೇ ಕೆಲಸ ಕೈಗೆತ್ತಿಕೊಂಡರೂ ಅದನ್ನು ಪೂರ್ಣಗೊಳಿಸದೇ ವಿರಮಿಸುತ್ತಿರಲಿಲ್ಲ. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಜಾರಿಗೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
11 ಕೆಸಿಕೆಎಂ 3ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಚ್.ಎಚ್. ದೇವರಾಜ್, ಮಂಜೇಗೌಡ, ಎಂ.ಸಿ. ಶಿವಾನಂದಸ್ವಾಮಿ, ಹಿರೇಮಗಳೂರು ರಾಮಚಂದ್ರ, ಪ್ರವೀಣ್ ಇದ್ದರು.