ಮರಳಿಗ ಗ್ರಾಪಂ ಕಚೇರಿ ಪೀಠೋಪಕರಣ ಜಪ್ತಿ, ಹರಾಜು

KannadaprabhaNewsNetwork |  
Published : Feb 24, 2026, 02:30 AM IST
23ಕೆಎಂಎನ್‌ಡಿ-12ಮದ್ದೂರು ನ್ಯಾಯಾಲಯದಲ್ಲಿ ಮರಳಿಗ ಗ್ರಾಮ ಪಂಚಾಯಿತಿ ವಸ್ತುಗಳನ್ನು ಹರಾಜು ಮಾಡಲಾಯಿತು. | Kannada Prabha

ಸಾರಾಂಶ

ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ಮರಳಿಗ ಗ್ರಾಮ ಪಂಚಾಯ್ತಿಯಲ್ಲಿ ಕಳೆದ 26 ವರ್ಷಗಳ ಹಿಂದೆ ಕರ್ತವ್ಯ ನಿರ್ವಹಿಸುವಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ನೌಕರನಿಗೆ ಪರಿಹಾರ ನೀಡದೆನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾಗಿದ್ದ ಗ್ರಾಮ ಪಂಚಾಯ್ತಿ ಆಸ್ತಿಯನ್ನು ಶನಿವಾರ ಹರಾಜು ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಕೊಪ್ಪ ಹೋಬಳಿ ಮರಳಿಗ ಗ್ರಾಮ ಪಂಚಾಯ್ತಿಯಲ್ಲಿ ಕಳೆದ 26 ವರ್ಷಗಳ ಹಿಂದೆ ಕರ್ತವ್ಯ ನಿರ್ವಹಿಸುವಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ನೌಕರನಿಗೆ ಪರಿಹಾರ ನೀಡದೆನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾಗಿದ್ದ ಗ್ರಾಮ ಪಂಚಾಯ್ತಿ ಆಸ್ತಿಯನ್ನು ಶನಿವಾರ ಹರಾಜು ಮಾಡಲಾಯಿತು.

ಪಟ್ಟಣದ ಜೆಎಂಎಫ್‌ಸಿನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಹರಿಣಿ ಅವರ ಸಮ್ಮುಖದಲ್ಲಿ ನ್ಯಾಯಾಲಯದ ಜಾರಿದಾರರಾದ ಎಂ.ಪಿ.ತ್ರಿವೇಣಿ, ವಿ.ಶಿವರಾಂ, ರವಿ, ಸಿಬ್ಬಂದಿ ವರ್ಗ ಮತ್ತು ಪ್ರಕರಣದ ವಕಾಲತ್ತು ವಹಿಸಿದ್ದ ಹಿರಿಯ ವಕೀಲ ಬಿ.ರಾಮಕೃಷ್ಣೇಗೌಡ, ಸಹಾಯಕ ಟಿ. ಜೆ.ಸುನಿಲ್ ಕುಮಾರ್ ಅವರುಗಳ ಸಮ್ಮುಖದಲ್ಲಿ ಮರಳಿಗ ಗ್ರಾಮ ಕಚೇರಿಯಿಂದ ಜಪ್ತಿ ಮಾಡಲಾಗಿದ್ದ ಕಂಪ್ಯೂಟರ್, ಪೀಠೋಪಕರಣ, ಫ್ಯಾನ್ ಸೇರಿದಂತೆ ಹಲವು ವಸ್ತುಗಳನ್ನು 46, 960 ರು. ಹರಾಜು ಮಾಡಲಾಯಿತು.

ಮೊದಲ ಹಂತದಲ್ಲಿ ನ್ಯಾಯಾಲಯದ ಆದೇಶದಂತೆ ಪಾವತಿಸಬೇಕಾಗಿದ್ದ 4,24,840 ರು.ಗಳಲ್ಲಿ ಪೀಠೋಪಕರಣಗಳ ಹರಾಜಿನಿಂದ ಬಂದ ಹಣವನ್ನು ಪರಿಹಾರ ಮೊತ್ತಕ್ಕೆ ಜಮಾ ತೆಗೆದುಕೊಂಡು ಉಳಿದ ಬಾಕಿ ವಸೂಲಾತಿಗೆ ಮುಂದಿನ ಕಾನೂನು ಕ್ರಮ ಜರುಗಿಸಲು ನ್ಯಾಯಾಲಯ ಆದೇಶ ನೀಡಿದೆ.

ಮರಳಿಗ ಗ್ರಾಮ ಪಂಚಾಯತಿಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ರವಿ ಕಳೆದ 2009ರ ನವೆಂಬರ್ 21ರಂದು ಲೈನ್ ದುರಸ್ತಿ ಮಾಡುವಾಗ ವಿದ್ಯುತ್ ಸ್ಪರ್ಶದಿಂದ ಅಸು ನೀಗಿದ್ದರು. ತಮ್ಮ ಪತಿ ರವಿ ಸಾವಿಗೆ ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಹಾಗೂ ಸದಸ್ಯರ ನಿರ್ಲಕ್ಷ ಕಾರಣ ಎಂದು ಆರೋಪಿಸಿ ಆತನ ಪತ್ನಿ ಸುಜಾತ ಪರಿಹಾರ ಕೋರಿ ಹಿಂದೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಪಿಡಿಒ ಹಾಗೂ ಜನಪ್ರತಿನಿಧಿಗಳು ಸುಜಾತಾಳಿಗೆ ಪರಿಹಾರ ನೀಡಲು ನಿರಾಕರಿಸಿದ್ದರು.

ಇದರಿಂದ ಬೇಸತ್ತ ಸುಜಾತ ತಮ್ಮ ಪರ ವಕೀಲ ಬಿ. ರಾಮಕೃಷ್ಣೇಗೌಡ, ಸಹಾಯಕ ಟಿ.ಜೆ.ಸುನಿಲ್ ಕುಮಾರ್ ಮೂಲಕ ಮದ್ದೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಅಂತಿಮವಾಗಿ ಸತತ ಹದಿನಾರು ವರ್ಷಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯ ಮೊದಲ ಹಂತದಲ್ಲಿ ಮೃತ ರವಿ ಕುಟುಂಬಕ್ಕೆ 4,24,840 ರು. ಪರಿಹಾರ ನೀಡುವಂತೆ ತೀರ್ಪು ನೀಡಿತ್ತು. ನ್ಯಾಯಾಲಯದ ಆದೇಶಕ್ಕೆ ಕಿಂಚೆತ್ತು ಮನ್ನಣೆ ನೀಡದ ಗ್ರಾಪಂ, ಪಿಡಿಒ ಸುಜಾತ ತಮ್ಮ ಪರ ವಕೀಲರ ಮೂಲಕ ಅರ್ಜಿ ಸಲ್ಲಿಸಿ ಪರಿಹಾರದ ಹಣ ಕಟ್ಟಲು ನಿರಾಕರಿಸಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದರು. ಅಂತಿಮವಾಗಿ ಪಿಡಿಒ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಧೀಶ ಎಂ.ಎಸ್.ಹರಿಣಿ ಅವರು ಗ್ರಾಮ ಪಂಚಾಯ್ತಿ ಎಲ್ಲಾ ಆಸ್ತಿಯನ್ನು ಜಪ್ತಿ ಮಾಡಲು ಆದೇಶ ಹೊರಡಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಯಕರ್ತರು ಒಪ್ಪಿದ್ದಲ್ಲಿ ಜೆಡಿಎಸ್‌ ಸೇರ್ಪಡೆ: ಹೂಡಿ ವಿಜಯಕುಮಾರ್‌
ಬೇಡನ್ ಪಾವೆಲ್ ಆದರ್ಶಗಳು ವ್ಯಕ್ತಿತ್ವ ನಿರ್ಮಾಣಕ್ಕೆ ದಾರಿದೀಪ