ಕನ್ನಡಪ್ರಭ ವಾರ್ತೆ ಗುಬ್ಬಿ
ನೂತನ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮಾತನಾಡಿ, ಸರ್ಕಾರದಿಂದ ಬರುವ ಸೌಲಭ್ಯಗಳನ್ನ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುತ್ತೇನೆ. ಗ್ರಾಮೀಣ ಭಾಗದ ರೈತರು ಡೈರಿಗಳಿಗೆ ಹೆಚ್ಚು ಹಾಲನ್ನು ಹಾಕುವುದರ ಮೂಲಕ ಪ್ರೋತ್ಸಾಹ ಧನವನ್ನು ಪಡೆಯಬೇಕು. ರೈತರು ಗುಣಮಟ್ಟದ ಹಾಲನ್ನು ಹಾಕಬೇಕು. ರೈತರಿಗೆ ಇಲಾಖೆಯಿಂದ ಬರುವ ಸೌಲಭ್ಯಗಳನ್ನು ತಲುಪಿಸುತ್ತೇನೆ. ಇತ್ತೀಚಿನ ದಿನಗಳಲ್ಲಿ ರಾಸುಗಳ ಸಂಖ್ಯೆ ಕಡಿಮೆ ಆಗ್ತಾ ಇದೆ ರೈತರು ಹಳ್ಳಿಗಾಡಿನಲ್ಲಿ ಹೈನುಗಾರಿಕೆಗೆ ಹೆಚ್ಚು ಒತ್ತುಕೊಟ್ಟು ಪ್ರತಿ ಮನೆಗೊಂದು ಹಸುವನ್ನು ಕಟ್ಟಿಕೊಂಡು ಹಾಲನ್ನು ಹಾಕುವುದರ ಮೂಲಕ ಸವಾಲಂಬಿ ಬದುಕನ್ನು ಕಟ್ಟಿಕೊಳ್ಳಬೇಕೆಂದು ತಿಳಿಸಿದರು.ಇದೇ ಸಂಧರ್ಭದಲ್ಲಿ ನಿರ್ದೇಶಕರಾದ ಬಸವರಾಜು ,ಮಹಾದೇವಯ್ಯ, ಶಿವಕುಮಾರ್, ಶಿವಬಸಪ್ಪ ,ಶಿವನಂಜಯ್ಯ, ರುದ್ರೇಶ್, ದಿನೇಶ್, ನರಸಿಂಗಯ್ಯ, ನಾಗರತ್ನಮ್ಮ , ನಾಗಶ್ರೀ ಕಾರ್ಯದರ್ಶಿ ವಿರುಪಾಕ್ಷಯ್ಯ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.