ಮಂಡ್ಯ:
ಮಧ್ಯಾಹ್ನ 12.30ರ ವೇಳೆ ರಥೋತ್ಸವ ಪ್ರಾರಂಭವಾಯಿತು. ಮಂಡ್ಯ-ಬನ್ನೂರು ರಸ್ತೆಯಲ್ಲಿ ಸಾಗಿದ ರಥೋತ್ಸವ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆವರೆವಿಗೂ ಎಳೆದು ತರಲಾಯಿತು. ಮತ್ತೆ ಪುನಃ ದೇವಾಲಯದ ಆವರಣಕ್ಕೆ ತಂದು ನಿಲ್ಲಿಸಲಾಯಿತು.
ಸಹಸ್ರಾರು ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವದ ನಂತರ ಭಕ್ತರು ದೇವಾಲಯದ ಮುಂದಿರುವ ಮಂಡ್ಯ-ಬನ್ನೂರು ರಸ್ತೆಯಲ್ಲಿ ಕೋಳಿಗಳನ್ನು ಬಲಿಕೊಟ್ಟರು.ರಥೋತ್ಸವಕ್ಕೂ ಮುನ್ನ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭರಾಣಿ ಹಾಗೂ ಅಪರ ಪೊಲೀಸ್ ಅಧೀಕ್ಷಕ ಗಂಗಾಧರಸ್ವಾಮಿ ಅವರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಥೋತ್ಸವದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ಅಪರ ಪೊಲೀಸ್ ಅಧೀಕ್ಷಕ ತಿಮ್ಮಯ್ಯ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ನಂತರ ರಥೋತ್ಸವ ಸಾಂಗೋಪ ಸಾಂಗವಾಗಿ ನೆರವೇರಿತು. ರಥೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.ಶ್ರೀ ಲಕ್ಷ್ಮಿನರಸಿಂಹಸ್ವಾಮಿ ವೈರಮುಡಿ ಉತ್ಸವ
ಶ್ರೀಲಕ್ಷ್ಮಿನರಸಿಂಹ ಸ್ವಾಮಿ, ಸಮೇತ ಶ್ರೀದೇವಿ ಮತ್ತು ಭೂದೇವಿ ಪುಷ್ಪಾಲಕೃತ ಉತ್ಸವಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಿದ ನಂತರ ಕೋಟೆ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಭಕ್ತಾದಿಗಳು ಉತ್ಸವ ಮೂರ್ತಿಗಳಿಗೆ ಪೂಜೆ ಸಲ್ಲಿಸಿ ಧನ್ಯತಾ ಭಾವ ಮೆರೆದರು.ಕೀರ್ತಿ ಶೇಷರಾದ ಅವ್ವೇರಹಳ್ಳಿ ಮಾಜಿ ಶಾಸಕ ಎ.ಡಿ.ಬಿಳಿ ಗೌಡ ಹೆಸರಿನಲ್ಲಿ ಮದ್ದೂರು ಬ್ರಹ್ಮರಥೋತ್ಸವದ ಅಂಗವಾಗಿ ಕುಟುಂಬ ವರ್ಗದವರು ಪ್ರತಿ ವರ್ಷ ಪೂಜೆ ಸಲ್ಲಿಸುವುದನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ.