ಸಾಗರ ಗಂಗೋತ್ರಿ ಕಾಲೇಜು ಪ್ರವೇಶ ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟದ್ದು: ವಿವಿ ಪ್ರಕಟಣೆ

KannadaprabhaNewsNetwork |  
Published : Aug 28, 2026, 01:30 AM IST
ಪೋಟೊ26ಕೆಎಸಟಿ1: ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿರುವ ಅಧಿಸೂಚನೆ ಪ್ರತಿ. 26ಕೆಎಸಟಿ1ಎ: ಕನ್ನಡಪ್ರಭದಲ್ಲಿ ಜು.17ರಂದು ಪ್ರಕಟಗೊಂಡಿರುವ ವರದಿ26ಕೆಎಸಟಿ1ಬಿ:ಕನ್ನಡಪ್ರಭ ವರದಿ ಉಲ್ಲೇಖಿಸಿ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ವೈಷ್ಣವಿ ಅವರು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ಬರೆದಿರುವ ಪತ್ರ. | Kannada Prabha

ಸಾರಾಂಶ

ಸಾಗರದ ಉಳ್ಳೂರಿನಲ್ಲಿರುವ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯಕ್ಕೆ 2023-24ನೇ ಸಾಲಿನಿಂದ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್ ಸಿಟಿಇ) ಯ ಮಾನ್ಯತೆ ರದ್ದಾಗಿದ್ದು, ಮುಂಬರುವ ಶೈಕ್ಷಣಿಕ ಸಾಲಿನ ಬಿಇಡಿ ಕೋರ್ಸ್ ಗೆ ಪ್ರವೇಶ ಪಡೆಯುವುದು ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟದ್ದು ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ತಿಮ್ಮರಾಯಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸಾಗರದ ಉಳ್ಳೂರಿನಲ್ಲಿರುವ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯಕ್ಕೆ 2023-24ನೇ ಸಾಲಿನಿಂದ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್ ಸಿಟಿಇ) ಯ ಮಾನ್ಯತೆ ರದ್ದಾಗಿದ್ದು, ಮುಂಬರುವ ಶೈಕ್ಷಣಿಕ ಸಾಲಿನ ಬಿಇಡಿ ಕೋರ್ಸ್ ಗೆ ಪ್ರವೇಶ ಪಡೆಯುವುದು ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟದ್ದು ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ತಿಮ್ಮರಾಯಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಗರ ಗಂಗೋತ್ರಿ ಕಾಲೇಜು ಸಕಾಲದಲ್ಲಿ ಅರ್ಜಿ ಸಲ್ಲಿಸದೆ ಇರುವುದರಿಂದ 2023-24ರಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸಂಯೋಜನೆ ದೊರೆತಿಲ್ಲ. 2024-24ನೇ ಸಾಲಿನಲ್ಲಿ ಎನ್ ಸಿಟಿಇ ಮಾನ್ಯತೆ ಇಲ್ಲವೆಂಬ ಕಾರಣದಿಂದ ಸಂಯೋಜನೆ ಸಿಕ್ಕಿರುವುದಿಲ್ಲ. ಇನ್ನು 2025-26 ಮತ್ತು 206-27ನೇ ಸಾಲಿನಲ್ಲಿ ಯುಯುಸಿಎಂಎಸ್ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ ಸ್ಥಳೀಯ ತಪಾಸಣಾ ಸಮಿತಿಯ ಮುಖಾಂತರ ನಿಯಮಾನುಸಾರ ಸಂಯೋಜನಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ವಿವಿಯಿಂದ ಸಂಯೋಜನಾ ಆದೇಶ ಪಡೆದಿರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ 2026 ಜೂನ್ 24ರ ಮಧ್ಯಂತರ ಆದೇಶದ (WP. 8665/2025) ಅನ್ವಯ ಕಾಲೇಜಿಗೆ ಪರೀಕ್ಷೆ ಮತ್ತು ಪ್ರವೇಶಾತಿಗೆ ಅನುಮತಿ ಲಭಿಸಿದ್ದರೂ, ಇದು ನ್ಯಾಯಾಲಯದ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ. ಒಂದು ವೇಳೆ ಅಂತಿಮ ತೀರ್ಪಿನಲ್ಲಿ ಮಧ್ಯಂತರ ಆದೇಶ ರದ್ದಾದಲ್ಲಿ ಸಂಸ್ಥೆಯಾಗಲೀ, ವಿದ್ಯಾರ್ಥಿಗಳಾಗಲೀ ಸಮತೆಯ ಹಕ್ಕು ಸಾಧಿಸಲು ಸಾಧ್ಯವಿಲ್ಲ. ಅಂದರೆ ವಿದ್ಯಾರ್ಥಿಗಳು ಪದವಿಯ ಮಾನ್ಯತೆ ಕಳೆದುಕೊಳ್ಳುವ ಭೀತಿ ಎದುರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಗರ ಗಂಗೋತ್ರಿ ಕಾಲೇಜಿಗೆ ಪ್ರವೇಶಾತಿ ಪಡೆಯುವುದು ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟ ವಿಷಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತ್ಯಾವರೆಕೊಪ್ಪಕ್ಕೆ ತೋಳ ಬಂದ್ವು ತೋಳ
ಮಕ್ಕಳ ರಕ್ಷಣೆಗಾಗಿ ನದಿಗೆ ಹಾರಿದ ಮಹಿಳೆ