ಶಿಗ್ಗಾವಿ: ಸ್ವಾತಂತ್ರ್ಯ ಭಾರತದ ಶಿಕ್ಷಣ ವ್ಯವಸ್ಥೆಯಿಂದ ಬಜಾರ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಯಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ.ಭಾಸ್ಕರ್ ಹೇಳಿದರು.
೧೨ ನೇ ಶತಮಾನದಲ್ಲಿ ವೈಚಾರಿಕ ಕ್ರಾಂತಿಯ ಮೂಲಕ ಸಮಾನತೆ ಸಂದೇಶ ಸಾರಿದ ಜಗಜ್ಯೋತಿ ಬಸವೇಶ್ವರರು ಕರ್ನಾಟಕದಲ್ಲಿ ಇರುವ ಏಕೈಕ ಸಾಂಸ್ಕೃತಿಕ ನಾಯಕರಾಗಿದ್ದಾರೆ. ಅವರು ಇತ್ತಿಚಿನ ಎಲ್ಲ ಸಮುದಾಯಗಳ ಸಾಂಸ್ಕೃತಿಕ ನಾಯಕರಿಗೆ ಮಾದರಿಯಾಗಿದ್ದಾರೆ.
ಕುಲಸಚಿವ ಪ್ರೊ. ಸಿ.ಟಿ. ಗುರುಪ್ರಸಾದ್ ಮಾತನಾಡಿ, ಬಂಜಾರ ಸಮುದಾಯವಕ್ಕೆ ಸಾಂಸ್ಕೃತಿಕವಾಗಿ ಬಲ ತುಂಬಿದ ನಾಯಕ ಸಂತ ಸೇವಾಲಾಲರು, ಅವರು ಕರ್ನಾಟಕಕ್ಕೆ ಸೀಮಿತವಾಗಿರದೆ ಇಡಿ ಜಗತ್ತಿಗೆ ಪರಿಚಿತವಾದ ಒಬ್ಬ ಸಾಂಸ್ಕೃತಿಕ ನಾಯಕರಾಗಿದ್ದರು. ಅಂತವರ ಜಯಂತಿ ಆಚರಿಸುತ್ತಿರುವುದು ಸಂತೋಷ ತಂದಿದೆ ಎಂದರು.ಹಿರಿಯ ಸಂಶೋಧನಾಧಿಕಾರಿ ಡಾ. ಕೆ. ಪ್ರೇಮಕುಮಾರ ಮಾತನಾಡಿ, ಸಾಂಸ್ಕೃತಿಕ ನಾಯಕರನ್ನು ನೆನೆಸಿಕೊಳ್ಳುವ ಸೌಭಾಗ್ಯ ಇಂದು ನಮಗೆಲ್ಲ ಇದೆ . ಮುಂದಿನ ದಿನಗಳಲ್ಲಿ ಏಕ ಸಂಸ್ಕೃತಿ ಆಚರಣೆ ಮುನ್ನೆಲೆಗೆ ಬಂದರೆ ಇಂತಹ ಅನೇಕ ಸಾಂಸ್ಕೃತಿಕ ನಾಯಕರನ್ನು ನೆನೆಸಿಕೊಳ್ಳಲು ಸಾಧ್ಯವಾಗುವುದಿಲ್ಲ ಈ ಎಲ್ಲ ಸಾಂಸ್ಕೃತಿಕ ನಾಯಕರು ತಳ ಸಮುದಾಯದವರೆ ಎನ್ನುವುದು ಹೆಮ್ಮೆಯ ವಿಷಯ ಹಾಗಾಗಿ ಸಂತ ಸೇವಾಲಾಲರ ಜಯಂತಿ ಆಚರಣೆ ಅರ್ಥಪೂರ್ಣ ಎಂದರು.
ಕಿರಿಯ ಸಹಾಯಕ ಶರೀಫ ಮಾಕಪ್ಪನವರ ಪ್ರಾರ್ಥಿಸಿದರು. ಸಹಾಯಕ ಕುಲಸಚಿವ ಶಹಜಹಾನ್ ಮುದಕವಿ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಚಂದ್ರಪ್ಪ ಸೊಬಟಿ ನಿರೂಪಿಸಿದರು. ಸಹಾಯಕ ಸಂಶೋಧನಾದಿಕಾರಿಗಳು ಹಾಗೂ ಬಂಜಾರ ಭಾಷಾ ಅಕಾಡಮಿಯ ಮಾಜಿ ಸದಸ್ಯ ಡಾ. ಬಸವರಾಜ ಎಸ್ ಜಿ ವಂದಿಸಿದರು.