ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಸಮಾಜ ಪರಿವರ್ತನೆಗೆ ಹೋರಾಟ
ಸಮಾಜದಲ್ಲಿ ಶೋಷಣೆಯ ವಿರುದ್ಧ ದನಿ ಎತ್ತಿ ಹಾಗೂ ಸಮಾಜದಲ್ಲಿ ಬದಲಾವಣೆ ತರುವಲ್ಲಿ ನಾರಾಯಣಗುರುಗಳ ಪಾತ್ರ ಬಹು ಮುಖ್ಯ. ಒಂದೇ ಜಾತಿ, ಒಂದೇ ಧರ್ಮ, ಒಬ್ಬ ಮಾನವ ಎಂಬ ಘೋಷವಾಕ್ಯದೊಂದಿಗೆ ಸಮಾಜವನ್ನು ಪರಿವರ್ತನೆ ಮಾಡಲು ಶ್ರಮಿಸಿದರು. ಆಧ್ಯಾತ್ಮಿಕ ಜ್ಞಾನೋದಯ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೆಜಿಸುವ ಸಲುವಾಗಿ ಅನ್ಯಾಯದ ವಿರುದ್ದವಾಗಿ ಸುಧಾರಣ ಚಳವಳಿಯನ್ನು ನಡೆಸಿದರು ಎಂದರು.ನಾರಾಯಣಗುರುಗಳು ಮೂಢನಂಬಿಕೆ, ಜಾತೀಯತೆ, ಅಸ್ಪೃಶ್ಯತೆ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ, ಬಾಲ್ಯವಿವಾಹ, ಗುಲಾಮಗಿರಿ, ಜೀತ ಪದ್ಧತಿ, ಜಮೀನ್ದಾರಿ ಪದ್ಧತಿ ಹಾಗೂ ಮೊದಲಾದ ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ಶ್ರಮಿಸಿದ್ದರು ಎಂದು ತಿಳಿಸಿದರು.
ಉಪನ್ಯಾಸಕ ಸುದರ್ಶನ್ ಮಾತನಾಡಿ, ಬ್ರಹ್ಮ ಶ್ರೀ ನಾರಾಯಣ ಗುರುವೆಂಬ ಒಬ್ಬ ಸಮಾಜಕ ಸುಧಾರಕ ಉದಯಿಸಿ ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು ಒಂದೇಜಾತಿ ಒಂದೇ ಮತ ಹಾಗೂ ಒಂದೇ ದೇವರು ಎಂಬ ಸತ್ಯವಾಕ್ಯವನ್ನು ಜಗಕೆ ಸಾರಿದರು ಎಂದರು.
ಬ್ರಹ್ಮ ಶ್ರೀ ನಾರಾಯಣ ಗುರುಗಳು ಸಮಸ್ತ ಅಸ್ಪೃಶ್ಯ, ನಿಮ್ನ ವರ್ಗದವರನ್ನು ಎಲ್ಲ ಸ್ತರಗಳಲ್ಲಿ ಮೇಲೆ ತರಲು ಮಾಡಿದ ಪ್ರಯತ್ನವನ್ನು ಅವರ ಬದುಕಿನ ಮಹತ್ಸಾಧನೆ ಎನ್ನಬಹುದು. ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಅವರಿಗೆ ಇತ್ತು ಎಂದು ತಿಳಿಸಿದರು.