ಕನ್ನಡಪ್ರಭ ವಾರ್ತೆ ಕೋಟ
ಅವರು ಇಲ್ಲಿನ ಹಿರಿಯ ಕೃಷಿಕ ಬಾಲಕೃಷ್ಣ ನಕ್ಷತ್ರಿ ಮನೆಯಂಗಳದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ‘೩೬ನೇ ರೈತರೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಯುವ ಸಮುದಾಯ ಆಸಕ್ತಿ ವಹಿಸಿದಾಗ ಮಾತ್ರ ಕೃಷಿ ಉಳಿಸಲು ಸಾಧ್ಯ. ತಂದೆ ತಾಯಿಗಳಂತೆ ಮಕ್ಕಳು ಕೂಡ ಕೃಷಿ ಕಾಯಕವನ್ನು ಮುಂದಿನ ತಲೆಮಾರಿನತ್ತ ಕೊಂಡೊಯ್ಯುವ ಕಾರ್ಯ ಮಾಡಬೇಕಿದೆ. ಪಂಚವರ್ಣ ಸಂಸ್ಥೆಯ ಸಮಾಜಮುಖಿ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು.ಇದೇ ವೇಳೆ ಹಿರಿಯ ರೈತ ಕಾಯಕಜೀವಿ ಯಶೋದಾ ನಕ್ಷತ್ರಿ ದಂಪತಿಗೆ ಕೃಷಿ ಪರಿಕರಗಳನ್ನಿತ್ತು ಗೌರವಿಸಲಾಯಿತು. ಪುತ್ರರಾದ ಬಾಲಕೃಷ್ಣ, ಬಾಲಚಂದ್ರ ನಕ್ಷತ್ರಿ ಕುಟುಂಬಿಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಪರಿಸರ ಕಾಳಜಿಯ ನಿಮಿತ್ತ ನಕ್ಷತ್ರಿ ಕುಟುಂಬದ ಭೂಮಿಯಲ್ಲಿ ಗಿಡ ನೆಡಲಾಯಿತು.
ವಿವೇಕ ವಿದ್ಯಾಸಂಸ್ಥೆ ಉಪನ್ಯಾಸಕ ಸಂಜೀವ ಗುಂಡ್ಮಿ, ಹಂದಟ್ಟು ಪಾಂಚಜನ್ಯ ಸಂಘ ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ, ರೋಟರಿ ಕ್ಲಬ್ ಅಧ್ಯಕ್ಷ ದೇವಪ್ಪ ಪಟಗಾರ್, ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ್ ಶೆಟ್ಟಿ, ಗೆಳೆಯರ ಬಳಗ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ವಿಪ್ರ ಮಹಿಳಾ ಬಳಗ ಸಂಚಾಲಕಿ ವನೀತಾ ಉಪಾಧ್ಯ, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.