ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಸಮರ್ಥ್ ಶಾಮನೂರು

KannadaprabhaNewsNetwork |  
Published : Apr 04, 2026, 01:30 AM IST
ಕ್ಯಾಪ್ಷನ3ಕೆಡಿವಿಜಿ40, 41 ದಾವಣಗೆರೆಯಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಗೆ ವಿವಿಧೆಡೆ ಪುಷ್ಪ ದೊಂದಿಗೆ ಆರತಿ ಬೆಳಗಿ ಸ್ವಾಗತ ಕೋರಿದರು.........ಕ್ಯಾಪ್ಷನ3ಕೆಡಿವಿಜಿ42 ದಾವಣಗೆರೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು  ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡ ಬಿ. ವೀರಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ಕೋರಿದರು.........ಕ್ಯಾಪ್ಷನ3ಕೆಡಿವಿಜಿ43 ದಾವಣಗೆರೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಅವರಿಗೆ ಗುಡ್ ಫ್ರೈಡೆ ಹಿನ್ನೆಲೆಯಲ್ಲಿ ಸಮಾಜ ಬಾಂಧವರು ಅಭಿನಂದಿಸಿ ಶುಭ ಕೋರಿದರು.  | Kannada Prabha

ಸಾರಾಂಶ

ಗುಡ್ ಫ್ರೈಡೆ ಹಿನ್ನೆಲೆಯಲ್ಲಿ ದಾವಣಗೆರೆಯ ಎಂಸಿಸಿ ಎ ಬ್ಲಾಕ್‌ನಲ್ಲಿರುವ ಚರ್ಚ್‌ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ವಿಶೇಷ ಪ್ರಾರ್ಥನೆಗಳಲ್ಲಿ ಭಾಗವಹಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಗುಡ್ ಫ್ರೈಡೆ ಹಿನ್ನೆಲೆಯಲ್ಲಿ ದಾವಣಗೆರೆಯ ಎಂಸಿಸಿ ಎ ಬ್ಲಾಕ್‌ನಲ್ಲಿರುವ ಚರ್ಚ್‌ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ವಿಶೇಷ ಪ್ರಾರ್ಥನೆಗಳಲ್ಲಿ ಭಾಗವಹಿಸಿದರು.

ನಂತರ ಮಾತನಾಡಿ, ಪ್ರೀತಿ, ಮಮತೆ ಮತ್ತು ಕ್ಷಮೆ ಎಂಬ ಮಾನವೀಯ ಮೌಲ್ಯಗಳನ್ನು ಸಾರಿದ ಏಸು ಕ್ರಿಸ್ತನ ಬದುಕು ಎಲ್ಲರಿಗೂ ಆದರ್ಶವಾಗಲಿ. ಈ ಪವಿತ್ರ ಶುಭ ಶುಕ್ರವಾರವು ಸರ್ವರಿಗೂ ಮಂಗಳವನ್ನುಂಟು ಮಾಡಲಿ ಎಂದು ಹಾರೈಸಿದರು.

ನಂತರ ಭಾರತ್ ಕಾಲೋನಿ ಮತ್ತು ಎಚ್.ಕೆ.ಆರ್ ನಗರ,ಅಣ್ಣಾನಗರ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಕಾಲ್ನಡಿಗೆಯ ಮೂಲಕ ಮನೆಮನೆಗೆ ತೆರಳಿ ಕಾಂಗ್ರೆಸ್‌ಗೆ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡರಾದ ಬಿ.ವೀರಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ಕೋರಿದರು. ನಂತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಚಾರ ನಡೆಸಿ, ಸ್ಥಳೀಯರೊಂದಿಗೆ ಸಂವಾದ ನಡೆಸಿ, ಕ್ರಮ ಸಂಖ್ಯೆ-3 ಹಸ್ತದ ಗುರುತಿಗೆ ನಿಮ್ಮ ಮತ ನೀಡಿ ನನ್ನನ್ನು ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದರು

ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಪರ ಯೋಜನೆ ಜಾರಿಗೆ ತರುವಲ್ಲಿ ಕಾಂಗ್ರೆಸ್‌ ಸರ್ಕಾರ ಯಶಸ್ವಿ: ಡಾ.ಪ್ರಭಾ
ಮೋದಿಯವರ ಸಂಕಲ್ಪ ಸಾಕಾರಗೊಳಿಸಬೇಕಿದೆ: ಕುಮಾರಸ್ವಾಮಿ