ರಾಯಣ್ಣನ ದೇಶ ನಿಷ್ಠೆ ಇತರರಿಗೂ ಮಾದರಿ

KannadaprabhaNewsNetwork |  
Published : Jan 29, 2024, 01:31 AM IST
ಪೋಟೊ ಶೀರ್ಷಿಕೆ: 27ಆರ್‌ಎಎಂ-1  ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಲ್ಲಿ ತಾಲೂಕಾ ಕುರುಬರ ಸಂಘ ಹಾಗೂ ಹಾಲುಮತ ಸಮಾಜದ ನೇತೃತ್ವದಲ್ಲಿ ಜರುಗಿದ ಸಂಗೊಳ್ಳಿ ರಾಯಣ್ಣ ನುಡಿ ನಮನ ಕಾರ್ಯಕ್ರಮವನ್ನು ಶಾಸಕ ಅಶೋಕ ಪಟ್ಟಣ ಉದ್ಘಾಟಿಸಿದರು.  | Kannada Prabha

ಸಾರಾಂಶ

ಗೊಳ್ಳಿ ರಾಯಣ್ಣನವರ ನಂಬಿಕೆ, ದೇಶ ನಿಷ್ಠೆ ಇತರರಿಗೂ ಮಾದರಿಯಾಗಿದ್ದು, ಅವರ ತತ್ವ ಆದರ್ಶಗಳು ಇಂದಿನ ಪೀಳಿಗೆಗೆ ಅನ್ವಯಿಸುತ್ತವೆ .

ಕನ್ನಡಪ್ರಭ ವಾರ್ತೆ ರಾಮದುರ್ಗರಾಯಣ್ಣನ ಹುಟ್ಟೂರಾದ ಸಂಗೊಳ್ಳಿಯಲ್ಲಿ ರಾಜ್ಯ ಸರ್ಕಾರ ವಿಶೇಷ ಮುತುವರ್ಜಿ ವಹಿಸಿ ಸಾವಿರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿ, ಪ್ರೇಕ್ಷಣಿಯ ಸ್ಥಳವನ್ನಾಗಿ ಮಾಡಿದ ಕೀರ್ತಿ ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಶಾಸಕ ಹಾಗೂ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ಸಾಲಹಳ್ಳಿಯಲ್ಲಿ ತಾಲೂಕು ಕುರುಬರ ಸಂಘ ಹಾಗೂ ಹಾಲುಮತ ಸಮಾಜದ ನೇತೃತ್ವದಲ್ಲಿ ಶುಕ್ರವಾರ ಸಂಜೆ ಜರುಗಿದ ಸಂಗೊಳ್ಳಿ ರಾಯಣ್ಣ ನುಡಿ ನಮನ ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನವರ ನಂಬಿಕೆ, ದೇಶ ನಿಷ್ಠೆ ಇತರರಿಗೂ ಮಾದರಿಯಾಗಿದ್ದು, ಅವರ ತತ್ವ ಆದರ್ಶಗಳು ಇಂದಿನ ಪೀಳಿಗೆಗೆ ಅನ್ವಯಿಸುತ್ತವೆ ಎಂದು ಹೇಳಿದರು.

ಬಿಜೆಪಿ ಮುಖಂಡ ಹಾಗೂ ಶಿಕ್ಷಣ ಪ್ರೇಮಿ ಚಿಕ್ಕರೇವಣ್ಣ ಮಾತನಾಡಿ, ಸಂಗೊಳ್ಳಿ ರಾಯಣ್ಣನ ಜೀವನ ಸಾಧನೆ ಹಾಗೂ ಅವರ ಬದುಕಿನ ರೀತಿ ಬಣ್ಣಿಸಿದ ಅವರು, ಮನೆಗೊಬ್ಬ ರಾಯಣ್ಣ ಅವರಂತ ದೇಶ ಪ್ರೇಮಿ ಹುಟ್ಟಲಿ ಎಂದು ಹೇಳಿದರು.

ಬಿಜೆಪಿ ಮುಖಂಡ, ನ್ಯಾಯವಾದಿ ಪಿ.ಎಫ್. ಪಾಟೀಲ ಮಾತನಾಡಿದರು. ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಶಿಲ್ಪಾ ಕುಂದರಗೊಂಡ ಮತ್ತು ಡಾ. ವೈ.ಎಂ. ಯಾಕೊಳ್ಳಿ ಉಪನ್ಯಾಸ ನೀಡಿದರು. ಪ್ರೊ.ವೈ.ವೈ. ಕೊಕ್ಕನವರ ಹಾಗೂ ನಿಂಗಣ್ಣಗುಡ್ಡದ ಅವರ ರಾಗರಂಜಿನಿ ಕಲಾ ಬಳಗದವರಿಂದ ರಸಮಂಜರಿ ಕಾರ್ಯಕ್ರಮ ಜರುಗಿತು.ಸಮಾರಂಭದ ಸಾನಿಧ್ಯ ಕವಲಗುಡ್ಡದ ಶ್ರೀಸಿದ್ದಯೋಗಿ ಅಮರೇಶ್ವರ ಸ್ವಾಮೀಜಿ, ಕಟಕೋಳ ಸಿದ್ದರಾಯಾಜ್ಜನವರ ಮಠದ ಅಭಿನವ ಸಿದ್ದರಾಯ ಅಜ್ಜನವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದ ಅಧ್ಯಕ್ಷತೆ ಸಾಲಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದಪ್ಪ ಗಡದಾರ ವಹಿಸಿದ್ದರು. ವಿಠ್ಠಲ ಜಟಗನ್ನವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ವೇಳೆ ತಾಲೂಕು ಕುರುಬ ಸಮಾಜದ ಅಧ್ಯಕ್ಷ ಪಡಿಯಪ್ಪ ಕ್ವಾರಿ, ಕುರುಬರ ಸಂಘದ ರಾಜ್ಯ ಸಮಿತಿಯ ಮುಖಂಡ ಅಶೋಕ ಮೆಟಗುಡ್ಡ, ಬಿಜೆಪಿ ಮುಖಂಡ ಡಾ. ಕೆ.ವಿ. ಪಾಟೀಲ, ಸಮಾಜದ ಮುಖಂಡರಾದ ಮಲ್ಲಪ್ಪ ಸೋಮಗೊಂಡ, ಎಂ.ಎಫ್. ಕೊಪ್ಪದ, ಜೆ.ಬಿ. ದೇಸಾಯಿ, ಹನಮಂತ ವಡ್ಡರ, ರೂಪಾ ಅರಮನೆ, ಸೋಮಶೇಖರ ಸಿದ್ಲಿಂಗಪ್ಪನವರ, ಲಕ್ಕಪ್ಪ ಜಟ್ಟೆನ್ನವರ, ರವಿ ಮೊರಬದ, ಬಸವರಾಜ ಕರಿಗಾರ, ಫಕೀರಪ್ಪ ಕೊಂಗವಾಡ, ರಾಜೇಶ್ವರಿ ಮೆಟಗುಡ್ಡ, ಬಸವರಾಜ ಪ್ರಧಾನಿ, ಮಲ್ಲಿಕಾರ್ಜುನ ದುರ್ಗನ್ನವರ ಸೇರಿದಂತೆ ಇತರರಿದ್ದರು. ಶಿಕ್ಷಕ ಎಫ್.ಎಲ್. ಮದಳ್ಳಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಮಕ್ಕನ್ನವರ ಸ್ವಾಗತಿಸಿ ವಂದಿಸಿದರು.

PREV

Recommended Stories

ವಿಕ್ಟೋರಿಯಾ ಆಸ್ಪತ್ರೆಗೆ ಸಿದ್ದರಾಮಯ್ಯ ದಿಢೀರ್ ಭೇಟಿ
ಇಂದು ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ : ಇಲ್ಲೆಲ್ಲಾ ವಾಹನಗಳಿಗೆ ನಿಷೇಧ