ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಕೃಷ್ಣನಗರದ ಶ್ರೀಬಾಲಶನೇಶ್ವರ ಭಕ್ತ ಮಂಡಳಿ ವತಿಯಿಂದ ಕಡೇ ಕಾರ್ತಿಕ ಮಾಸದ ಅಂಗವಾಗಿ ನಡೆದ ಶ್ರೀನಿವಾಸ ಕಲ್ಯಾಣ, ಗುರುವಂದನೆ ಹಾಗೂ ಲಕ್ಷ ದೀಪೋತ್ಸವದಲ್ಲಿ ದಿವ್ಯಸಾನಿಧ್ಯ ವಹಿಸಿ ಗುರುವಂದನೆ ಸ್ವೀಕರಿಸಿ ಮಾತನಾಡಿದರು.
ಭಾರತೀಯ ಸನಾತನ ಧರ್ಮ, ಸಂಸ್ಕೃತಿಯ ಬಗ್ಗೆ ಕೆಲವರು ಅವಹೇಳನಕಾರಿಯಾಗಿ, ತುಚ್ಚವಾಗಿ ಮಾತನಾಡುತ್ತಾರೆ. ದೇಶದ ಬಗ್ಗೆ ಹೋರಾಟ ನಡೆಸುವವರ ಬಗ್ಗೆ ಹಗುವಾಗಿ ಮಾತನಾಡುತ್ತಾರೆ. ನಮ್ಮ ಹಿಂದೂ ಧರ್ಮ, ಸಂಸ್ಕೃತಿ ಬೇರೆ ಯಾವ ಧರ್ಮ, ಸಂಸ್ಕೃತಿಗೂ ಕೇಡು ಬಯಸುವ ಕೆಲಸ ಮಾಡುತ್ತಿಲ್ಲ. ಜನರಿಗೆ ಧಾರ್ಮಿಕ ಪ್ರಜ್ಞೆಯ ಜತೆಗೆ ಸಮಾಜವನ್ನು ಸರಿದಾರಿಗೆ ತರುವ ಕೆಲಸ ಮಾಡುತ್ತಿದೆ ಎಂದರು.ಭಾರತೀಯರಲ್ಲಿ ನಂಬಿಕೆಯೇ ಪ್ರಧಾನವಾಗಿದೆ. ತಂದೆ-ತಾಯಿ ಮಕ್ಕಳನ್ನು ನಂಬುತ್ತಾರೆ, ಮಕ್ಕಳು ತಂದೆ-ತಾಯಿ ನಂಬುತ್ತಾರೆ, ಸೊಸೆ ಅತ್ತೆ ಮಾವನನ್ನು ನಂಬುತ್ತಾರೆ. ಹೀಗೆ ನಂಬಿಕೆ ನಮ್ಮ ಸಂಸ್ಕೃತಿಯಲ್ಲಿ ಬಲವಾಗಿದೆ. ನಮ್ಮ ಜನರು ಭಕ್ತಿಯ ಮೂಲಕ ದೇವರನ್ನು ನೋಡುವ ಪ್ರಯತ್ನ ಮಾಡುತ್ತಾರೆ ಎಂದರು.
ಮಕ್ಕಳಿಗೆ ವಿದ್ಯೆ ಜತೆಗೆ ವಿವೇಕವನ್ನು ಕಲಿಸುವ ಕೆಲಸ ಮಾಡಬೇಕು. ಕೇವಲ ವಿಷಯಾಧಾರಿತ ಶಿಕ್ಷಣದಿಂದಲೇ ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಮಕ್ಕಳಿಗೆ ವಿವೇಕದ ಜತೆಗೆ ಸಂಸ್ಕೃತಿ, ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಕಲಿಸದೆ ಹೋದರೆ ಸಂಸಾರ, ಮನೆತನ, ಸಮಾಜ ಯಾವುದಕ್ಕೂ ಉಳಿಗಾಲವಿಲ್ಲ ಎಂದು ಎಚ್ಚರಿಸಿದರು.
ಚಿತ್ರ ನಿರ್ದೇಶಕ ಎಸ್.ನಾರಾಯಣ್ ಮಾತನಾಡಿ, ಹಿಂದೆ ಗುರುಕುಲದಲ್ಲಿ ನೀಡುತ್ತಿದ್ದ ಸಂಸ್ಕಾರಯುತ ಶಿಕ್ಷಣ ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ನೀಡಬೇಕಾಗಿದೆ. ಮೌಲ್ಯಗಳಿದ್ದ ಶಿಕ್ಷಣದಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಇದೇ ವೇಳೆ ವಿಶ್ವ ಒಕ್ಕಲಿಗ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿಗಳಿಗೆ ಗುರುವಂದನಾ ನೆರವೇರಿಸಲಾಯಿತು. ಶ್ರೀನಿವಾಸ ಕಲ್ಯಾಣ ನಡೆಸಿ ಮದುವೆ ಆಗದವರಿಗೆ ಕಂಕಣ ಕಟ್ಟಿಸಿದರು. ಹಲವು ಮಹಿಳೆಯರಿಗೆ ಮಡಿಲು ಅಕ್ಕಿ ವಿತರಿಸಲಾಯಿತು. ಕಾರ್ಯಕ್ರಮಕ್ಕು ಮುನ್ನ ಸ್ವಾಮಿಜಿ ಹಾಗು ಗಣ್ಯರನ್ನು ಪೂರ್ಣಕುಂಭದೊಂದಿಗೆ ವೇದಿಕೆಗೆ ಬರಮಾಡಿಕೊಂಡರು.