ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ನಾನು ಸಚಿವನಾಗಿದ್ದಾಗ ‘ಸ್ಯಾಂಡ್ ಬಜಾರ್’ ಎನ್ನುವ ಮೊಬೈಲ್ ಆಪ್ ರೂಪಿಸಿ ಅದರ ಮೂಲಕ ನಿಗದಿತ ಸಮಯದಲ್ಲಿ ನಿಗದಿತ ಬೆಲೆಗೆ ಜನರಿಗೆ ಮರಳು ಸಿಗುವಂತೆ ವ್ಯವಸ್ಥೆ ಮಾಡಲಾಗಿತ್ತು. ಸರ್ಕಾರ ಬದಲಾದ ಮೇಲೆ ಆ ವ್ಯವಸ್ಥೆಯನ್ನೇ ನಿಲ್ಲಿಸಲಾಗಿದೆ. ಈಗ ಮರಳಿ ಸ್ಯಾಂಡ್ ಬಜಾರ್ ಆಪ್ ವ್ಯವಸ್ಥೆ ಜಾರಿಯಾಗಬೇಕು ಎಂದರು.
ಮರಳು ವಿಚಾರದಲ್ಲಿ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಅಧಿಕಾರಿಗಳಿಗೆ ಅಧಿಕಾರ, ಕಚೇರಿ ನೀಡಿದ್ದು ಜನರ ಸಮಸ್ಯೆ ನೀಗಿಸಲಿಕ್ಕಾಗಿಯೇ ಹೊರತು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವುದಕ್ಕಲ್ಲ. ಗಣಿ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ನಡುವೆ ಸಮನ್ವಯತೆಯನ್ನು ಜಿಲ್ಲಾಡಳಿತ ಮರು ಸ್ಥಾಪಿಸಿ ಜನರ ಸಮಸ್ಯೆ ನೀಗಿಸಲು ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.ಸಿಆರ್ಝಡ್ ಮರಳುಗಾರಿಕೆ ಆದೇಶ ತರಲಿ:
ಬಜೆಟ್ನಲ್ಲಿ ಜಿಲ್ಲೆಗೆ ಹಲವು ಕೊಡುಗೆ ನಿರೀಕ್ಷೆ
ಮುಂದಿನ ರಾಜ್ಯ ಬಜೆಟ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಲವು ಬೇಡಿಕೆಗಳನ್ನು ಈಡೇರಿಸುವ ನಿರೀಕ್ಷೆಯಿದೆ. ಜಿಲ್ಲೆಗೆ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಒಪಿಡಿ ಸೆಂಟರ್ ಸೇರಿದಂತೆ ಹಲವು ಬೇಡಿಕೆಗಳು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಸ್ಪೀಕರ್ ಖಾದರ್ ಗುಟ್ಟು ಬಿಟ್ಟುಕೊಟ್ಟರು. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಆಗಬೇಕೆಂಬ ಬೇಡಿಕೆ ಇದೆ. ಆದರೆ ರಾಜ್ಯದ 9 ಜಿಲ್ಲೆಗಳಲ್ಲಿ ಸುಸಜ್ಜಿತವಾದ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಕೊರತೆ ಇರುವಾಗ ಆ ಜಿಲ್ಲೆಗಳಿಗೆ ಸಾಮಾನ್ಯವಾಗಿ ಮೊದಲ ಆದ್ಯತೆ ನೀಡಲಾಗುತ್ತದೆ. ದ.ಕ. ಜಿಲ್ಲೆಯ ಬೇಡಿಕೆಯೂ ಈಡೇರಬೇಕಿದೆ ಎಂದರು.