ಕನ್ನಡಪ್ರಭ ವಾರ್ತೆ ಕೋಟ
ಈ ವೇಳೆ ಗಣಿ ಇಲಾಖೆ ಗುರುತುಪಡಿಸಿರುವ ಸ್ಥಳ ಮರಳುಗಾರಿಕೆಗೆ ಯೋಗ್ಯವಲ್ಲ, ಆದರೂ ಅಲ್ಲಿ ಮರಳು ತೆಗೆದು ಈಗಾಗಲೇ ಕಿಂಡಿ ಅಣೆಕಟ್ಟಿಗೆ ಸಾಕಷ್ಟು ಹಾನಿಗೊಂಡಿದೆ. ಅಲ್ಲದೇ ಮರಳು ಸಂಗ್ರಹಕ್ಕೆ ಕೃಷಿ ಭೂಮಿ ಬಳಕೆ ಮಾಡಿದ್ದಾರೆ, ಇಲ್ಲಿನ ರಸ್ತೆಗಳು ಅಗಲಕಿರಿದಾಗಿದ್ದು ಲಾರಿಗಳ ಓಡಾಟಕ್ಕೆ ಯೋಗ್ಯವಾಗಿಲ್ಲ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದರು.ಶಾಸಕರು ಸ್ಥಳದಿಂದಲೇ ಗಣಿ ಅಧಿಕಾರಿಗಳನ್ನು ದೂರವಾಣಿಯಲ್ಲಿ ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರ ವಿರೋಧದ ನಡುವೆ ಮರಳುಗಾರಿಕೆ ನಡೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಜಿಲ್ಲಾಧಿಕಾರಿಗಳಿಗೂ ಕರೆ ಮಾಡಿ, ಸ್ಥಳ ಪರಿಶೀಲನೆ ನಡೆಸಿ ಗ್ರಾಮಸ್ಥರನ್ನು ವಿಶ್ವಾಸಕ್ಕೆ ಪಡೆದು ಮರಳುಗಾರಿಕೆ ನಡೆಸುವ ಸ್ಥಳಗಳ ಗುರುತು ಮಾಡಲು ಇಲಾಖಾಧಿಕಾರಿಗಳಿಗೆ ಸೂಚನೆ ನೀಡುವಂತೆ ಹೇಳಿದರು.
ಈ ವೇಳೆ ಬಾರಕೂರು ಗ್ರಾಪಂ ಸದಸ್ಯ ಪ್ರವೀಣ್ ನಾಗರಮಠ, ವಡ್ಡರ್ಸೆ ಗ್ರಾಪಂ ಸದಸ್ಯ ಕುಶಲ ಶೆಟ್ಟಿ, ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.