ಶ್ರೀಗಂಧ ಬೆಳೆಗಾರರು ಸಂಘಟಿತರಾಗಿ ಆರ್ಥಿಕ ಸಬಲತೆ ಸಾಧಿಸಿ: ಅಮರ್ ನಾರಾಯಣ್

KannadaprabhaNewsNetwork |  
Published : May 12, 2026, 02:15 AM IST
ಪೋಟೋ 6 : ಸೋಲದೇವನಹಳ್ಳಿಯ ಮೈಕಾನ್ ಮುಳ್ಳುತಂತಿ ಫಾರ್ಮ್ ಹೌಸ್‍ನಲ್ಲಿ ನಡೆದ ಶ್ರೀಗಂಧ ಹಾಗೂ ರಕ್ತಚಂದನ ಮರ ಕೃಷಿ ಕುರಿತ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ  ಶ್ರೀಗಂಧ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಅಮರ್ ನಾರಾಯಣ್ ಭಾಗವಹಿಸಿರುವುದು | Kannada Prabha

ಸಾರಾಂಶ

ಮಾರುಕಟ್ಟೆಯಲ್ಲಿ ಇಂದು ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆ ಹಾಗೂ ಉತ್ತಮ ಬೆಲೆ ದೊರೆಯುತ್ತಿದ್ದು, ರೈತರು ಇದನ್ನು ಭವಿಷ್ಯದ ದೊಡ್ಡ ಹೂಡಿಕೆಯಾಗಿ ಕಾಣಬೇಕು. ಮರಗಳನ್ನು ಬೆಳೆಸುವುದು ಎಷ್ಟು ಮುಖ್ಯವೋ, ಅವುಗಳನ್ನು ರಕ್ಷಿಸುವುದು ಕೂಡ ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಮೈಕಾನ್ ಮುಳ್ಳುತಂತಿಯಂತಹ ಆಧುನಿಕ ರಕ್ಷಣಾ ತಂತ್ರಜ್ಞಾನಗಳ ನೆರವು ಪಡೆಯುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ದಾಬಸ್‍ಪೇಟೆ: ಹಿಂದಿನ ಕಠಿಣ ಕಾನೂನುಗಳಿಂದ ಕಂಗೆಟ್ಟಿದ್ದ ಶ್ರೀಗಂಧ ಬೆಳೆಗಾರರಿಗೆ ಇಂದು ಉತ್ತಮ ಅವಕಾಶಗಳಿದ್ದು, ಬೆಳೆಗಾರರು ಸಂಘಟಿತರಾಗಿ ಆರ್ಥಿಕ ಸಬಲತೆ ಸಾಧಿಸಬೇಕು ಎಂದು ಅಖಿಲ ಕರ್ನಾಟಕ ಶ್ರೀಗಂಧ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಅಮರ್ ನಾರಾಯಣ್ ಕರೆ ನೀಡಿದರು.

ಸೋಲದೇವನಹಳ್ಳಿಯ ಮೈಕಾನ್ ಮುಳ್ಳುತಂತಿ ಫಾರ್ಮ್ ಹೌಸ್‍ನಲ್ಲಿ ನಡೆದ ಶ್ರೀಗಂಧ ಹಾಗೂ ರಕ್ತಚಂದನ ಮರ ಕೃಷಿ ಕುರಿತ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿಂದಿನ ದಿನಗಳಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಶ್ರೀಗಂಧದ ಮರದ ಮೇಲೆ ಹಕ್ಕು ಹೊಂದಲು ಸಾಧ್ಯವಿರಲಿಲ್ಲ. ಕಠಿಣ ಅರಣ್ಯ ಕಾಯ್ದೆಗಳು ಮತ್ತು ರಕ್ಷಣೆಯ ಸಮಸ್ಯೆಯಿಂದಾಗಿ ರೈತರು ಶ್ರೀಗಂಧ ಬೆಳೆಯಲು ಹಿಂದೇಟು ಹಾಕುತ್ತಿದ್ದರು. ಆದರೆ ನಿರಂತರ ಹೋರಾಟದ ಫಲವಾಗಿ ಇಂದು ನಿಯಮಗಳು ಸರಳವಾಗಿದ್ದು, ರೈತರು ತಮ್ಮ ಜಮೀನಿನ ಮರದ ಮೇಲೆ ಪೂರ್ಣ ಅಧಿಕಾರ ಹೊಂದುವಂತಾಗಿದೆ ಎಂದರು.

ಮಾರುಕಟ್ಟೆಯಲ್ಲಿ ಇಂದು ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆ ಹಾಗೂ ಉತ್ತಮ ಬೆಲೆ ದೊರೆಯುತ್ತಿದ್ದು, ರೈತರು ಇದನ್ನು ಭವಿಷ್ಯದ ದೊಡ್ಡ ಹೂಡಿಕೆಯಾಗಿ ಕಾಣಬೇಕು. ಮರಗಳನ್ನು ಬೆಳೆಸುವುದು ಎಷ್ಟು ಮುಖ್ಯವೋ, ಅವುಗಳನ್ನು ರಕ್ಷಿಸುವುದು ಕೂಡ ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಮೈಕಾನ್ ಮುಳ್ಳುತಂತಿಯಂತಹ ಆಧುನಿಕ ರಕ್ಷಣಾ ತಂತ್ರಜ್ಞಾನಗಳ ನೆರವು ಪಡೆಯುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ಶಿಕ್ಷಣ ತಜ್ಞ ಹಾಗೂ ಹಿರಿಯ ಬ್ಯಾಂಕರ್ ಇರಬಂತ್ ಸಿಂಗ್ ಮಾತನಾಡಿ, ಶ್ರೀಗಂಧ ಕೃಷಿಗೆ ಬ್ಯಾಂಕಿಂಗ್ ವಲಯದಿಂದ ದೊರೆಯುವ ಸಾಲ ಸೌಲಭ್ಯಗಳು ಹಾಗೂ ಹೂಡಿಕೆಯ ಮಹತ್ವದ ಬಗ್ಗೆ ರೈತರಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ, ಮೈಕಾನ್ ಮುಳ್ಳುತಂತಿ ಸಂಸ್ಥೆಯ ಮಾಲೀಕರಾದ ವೀರೇನ್ ಮೆಹತ, ಕುನಾಲ್ ಮೆಹತ, ಮ್ಯಾನೇಜರ್ ದಿನೇಶ್, ಶ್ರೀಗಂಧ ಬೆಳೆಗಾರರ ಸಂಘದ ಪದಾಧಿಕಾರಿಗಳಾದ ಪಿ. ಬೈರಪ್ಪ, ಜಯರಾಮೇಗೌಡ ಸೇರಿ ಹಲವು ಗಣ್ಯರು ಹಾಗೂ ನೂರಾರು ಪ್ರಗತಿಪರ ರೈತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮರ್ಪಕವಾಗಿ ಬಸ್ ಸಂಚಾರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕುಡಿವ ನೀರಿನ ಸಮಸ್ಯೆ