ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಒಂದು ವಾರದಲ್ಲಿ ಮುಕ್ತಾಯ

KannadaprabhaNewsNetwork |  
Published : May 21, 2026, 01:15 AM IST
ಪೋಟೋ 20hsd1:ಹೊಸದುರ್ಗ ತಾಲೂಕಿನ ಐತಿಹಾಸಿಕ ಸಾಣೇಹಳ್ಳಿ ಕೆರೆಯ ಹೂಳೆತ್ತುವ ಕಾರ್ಯವನ್ನು ಪಂಡಿತಾರಾಧ್ಯ ಸ್ವಾಮೀಜಿ ವೀಕ್ಷಿಸಿದರು. | Kannada Prabha

ಸಾರಾಂಶ

ಹೊಸದುರ್ಗ ತಾಲೂಕಿನ ಐತಿಹಾಸಿಕ ಸಾಣೇಹಳ್ಳಿ ಕೆರೆಯ ಹೂಳೆತ್ತುವ ಕಾರ್ಯವನ್ನು ಪಂಡಿತಾರಾಧ್ಯ ಸ್ವಾಮೀಜಿ ವೀಕ್ಷಿಸಿದರು.

ಕನ್ನಡಪ್ರಭ ವಾರ್ತೆ ಹೊಸದುರ್ಗ

ಐತಿಹಾಸಿಕ ಸಾಣೇಹಳ್ಳಿ ಕೆರೆಯ ಹೂಳೆತ್ತುವ ಕಾರ್ಯವು ಭರದಿಂದ ಸಾಗುತ್ತಿದ್ದು, ಈಗಾಗಲೇ ಶೇ.90ರಷ್ಟು ಕೆಲಸ ಪೂರ್ಣಗೊಂಡಿದೆ. ಇನ್ನು ಒಂದು ವಾರದಲ್ಲಿ ಇಡೀ ಕಾರ್ಯ ಮುಕ್ತಾಯಗೊಳ್ಳಲಿದೆ ಎಂದು ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದರು.

ಬುಧವಾರ ಕೆರೆಗೆ ಭೇಟಿ ನೀಡಿ, ಹೂಳೆತ್ತುವ ಕಾಮಗಾರಿಯನ್ನು ವೀಕ್ಷಿಸಿದ ಶ್ರೀಗಳು ಪ್ರಗತಿಯ ಕುರಿತು ತೀವ್ರ ಸಂತಸ ವ್ಯಕ್ತಪಡಿಸಿದರು.

ಕೆರೆಯ ಒಡಲು ಸ್ವಚ್ಛವಾಗುತ್ತಿರುವುದನ್ನು ಕಂಡು ಹರ್ಷಿಸಿದ ಶ್ರೀಗಳು, ಮಳೆರಾಯನು ಕೃಪೆ ತೋರಿ ಆದಷ್ಟು ಬೇಗ ಕೆರೆ ತುಂಬುವಂತಾಗಲಿ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಸಿ, ಈ ಭಾಗದ ರೈತರ ಬಾಳು ಹಸನಾಗಲಿ ಎಂದು ಹರಸಿದರು.

ಕೆರೆಯ ಮಧ್ಯ ಭಾಗದಲ್ಲಿರುವ ಐತಿಹಾಸಿಕ ದೇವ ಕನ್ನೆಕಿಯರ ಭಾವಿಯು ಸದ್ಯ ಶಿಥಿಲಾವಸ್ಥೆಯಲ್ಲಿದೆ. ಇದನ್ನು ಸೂಕ್ಷ್ಮವಾಗಿ ವೀಕ್ಷಿಸಿದ ಪಂಡಿತಾರಾಧ್ಯ ಸ್ವಾಮೀಜಿಯವರು, ಈ ಪುರಾತನ ಭಾವಿಗೆ ಸೂಕ್ತ ಸಂಪರ್ಕ ಕಲ್ಪಿಸಲು ಹಾಗೂ ಅದನ್ನು ನವೀಕರಿಸಲು ತಕ್ಷಣವೇ ಮಾರ್ಗ ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಅಲ್ಲದೆ ದೇವ ಕನ್ನೆಕಿಯರ ಭಾವಿಯ ಮಾರ್ಗ ಕಲ್ಪಿಸಲು ಆರ್ಥಿಕ ನೆರವನ್ನು ಸಾಣೇಹಳ್ಳಿ ಮಠದಿಂದಲೇ ಭರಿಸಲಾಗುವುದು ಎಂದರು.

ಈ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ಕೆ ಕೇವಲ ಸರ್ಕಾರ ಅಥವಾ ಮಠ ಮಾತ್ರವಲ್ಲದೆ, ಸ್ಥಳೀಯ ಯುವಶಕ್ತಿಯೂ ಕೈಜೋಡಿಸಬೇಕಿದೆ. ಸಾಣೇಹಳ್ಳಿಯ ಯುವಕರು ಸ್ವಯಂಪ್ರೇರಿತರಾಗಿ ಬಂದು ಈ ಭಾವಿಯ ಮತ್ತು ಕೆರೆಯ ಅಭಿವೃದ್ಧಿ ಕೆಲಸಗಳಲ್ಲಿ ಶ್ರಮದಾನ ಮಾಡುವ ಮೂಲಕ ಭಾಗಿಯಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹೂಳೆತ್ತುವ ಕಾರ್ಯದ ಉಸ್ತುವಾರಿ ವಹಿಸಿಕೊಂಡಿರುವ ಎಂಜಿನಿಯರ್ ಉಮೇಶ್, ಸಾಣೇಹಳ್ಳಿ ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಮಕೂರು ವಿವಿ ಕಲಾ ಕಾಲೇಜು ಚಾಂಪಿಯನ್
ಜೂನ್ 5ಕ್ಕೆ 10 ಸಾವಿರ ಬೈಕ್‌ಗಳ ವಿಧಾನಸೌಧ ಚಲೋ