ಮಂಗಳೂರು: ಸಂಗೀತ ಭಾರತಿ ಪ್ರತಿಷ್ಠಾನ ಮಂಗಳೂರು ಆಶ್ರಯದಲ್ಲಿ ಜು.೧೨ರಂದು ಸಂಜೆ ೫.೩೦ಕ್ಕೆ ನಗರದ ಪುರಭವನದಲ್ಲಿ ‘ಬ್ಯಾಂಕ್ ಆಫ್ ಮಹಾರಾಷ್ಟ್ರ ರಿಮ್ಜಿಮ್’ ಎಂಬ ಸಿತಾರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಗೀತ ಭಾರತಿ ಫೌಂಡೇಶನ್ ಉಪಾಧ್ಯಕ್ಷ ಪ್ರೊ.ನರೇಂದ್ರ ಎಲ್. ನಾಯಕ್ ತಿಳಿಸಿದರು.
ಭಾರತದ ಸಮೃದ್ಧ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಉಳಿಸಿ ಮುಂದಿನ ತಲೆಮಾರಿಗೆ ಪರಿಚಯಿಸುವ ಉದ್ದೇಶದಿಂದ ಸಂಗೀತ ಭಾರತಿ ಫೌಂಡೇಶನ್ ೨೦೨೬ರಲ್ಲಿ ಹಮ್ಮಿಕೊಂಡಿರುವ ಶಾಸ್ತ್ರೀಯ ಸಂಗೀತದ ಏಳು ಕಾರ್ಯಕ್ರಮಗಳ ಸರಣಿಯ ಮೊದಲ ಕಾರ್ಯಕ್ರಮ ಇದಾಗಿದೆ. ಈ ಕಾರ್ಯಕ್ರಮಕ್ಕೆ ಸಂಗೀತಾಸಕ್ತರೆಲ್ಲರಿಗೂ ಮುಕ್ತ ಪ್ರವೇಶಾವಕಾಶವಿದ್ದು, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸಂಗೀತ ಭಾರತಿ ಫೌಂಡೇಶನ್ನ ಕಾರ್ಯದರ್ಶಿ ಡಾ.ಉಷಾಪ್ರಭಾ ಎನ್. ನಾಯಕ್, ಟ್ರಸ್ಟಿಗಳಾದ ಅಂಕುಶ್ ಎನ್. ನಾಯಕ್, ಮುರುಳೀಧರ್ ಜಿ. ಶೆಣೈ, ಖಜಾಂಚಿ ಕರುಣಾಕರ ಬಳ್ಕೂರು ಇದ್ದರು.