ಸಂಘವು ರೈತರ ಗಟ್ಟಿ ಧ್ವನಿ: ರೈತಸಂಘದ ಗೌಡೇಗೌಡ

KannadaprabhaNewsNetwork |  
Published : Jan 25, 2024, 02:04 AM ISTUpdated : Jan 25, 2024, 02:05 AM IST
ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೂತನ ಗ್ರಾಮ ಘಟಕ ಉದ್ಘಾಟಿಸಿದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ಇನ್ನಿತರ ರೈತ ಮುಖಂಡರು ಇದ್ದರು. | Kannada Prabha

ಸಾರಾಂಶ

1990ರಲ್ಲಿ ಗುಂಡೂರಾವ್ ಸರ್ಕಾರದ ಸಮಯದಲ್ಲಿ ಪ್ರೊ.ನಂಜುಂಡಸ್ವಾಮಿಯವರು ಹುಟ್ಟು ಹಾಕಿದ ಕರ್ನಾಟಕ ರಾಜ್ಯ ರೈತ ಸಂಘ ಇಂದಿಗೂ ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ರೈತರ ಧ್ವನಿಯಾಗಿ ಕೆಲಸ ಮಾಡುತ್ತಿದೆ.

ಕನ್ನಡಪ್ರಭ ವಾರ್ತೆ ಹನೂರು

ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಅಂತೋನಿಯರ್ ಕೋಯಿಲ್ ಗ್ರಾಮದಲ್ಲಿ ನೂತನ ಘಟಕ ಉದ್ಘಾಟಿಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ಮಾತನಾಡಿ, ಕರ್ನಾಟಕ ರಾಜ್ಯ ರೈತ ಸಂಘ ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ತನ್ನ ನೂತನ ಘಟಕವನ್ನು ಅಸ್ತಿತ್ವಕ್ಕೆ ತಂದಿದೆ. ಕೀರಪಾತಿ ಜಲಾಶಯವನ್ನು ನಿರ್ಮಿಸಿ ರೈತರ ಬೆಳೆಗೆ ನೀರು ಬಿಡದೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ರೈತರನ್ನು ವಂಚಿಸಿದ್ದಾರೆ ಎಂದು ತಿಳಿಸಿದರು.

ರೈತರು, ಜಾನುವಾರುಗಳ ಸಮಸ್ಯೆಗಳನ್ನು ರೈತ ಸಂಘ ಅರಿತು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬಗೆಹರಿಸಿಕೊಳ್ಳಲು ಸಂಘಟನೆಯಿಂದ ಮಾತ್ರ ಸಾಧ್ಯ. 1990ರಲ್ಲಿ ಗುಂಡೂರಾವ್ ಸರ್ಕಾರದ ಸಮಯದಲ್ಲಿ ಪ್ರೊ.ನಂಜುಂಡಸ್ವಾಮಿಯವರು ಹುಟ್ಟು ಹಾಕಿದ ಕರ್ನಾಟಕ ರಾಜ್ಯ ರೈತ ಸಂಘ ಇಂದಿಗೂ ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ರೈತರ ಧ್ವನಿಯಾಗಿ ಕೆಲಸ ಮಾಡುತ್ತಿದೆ.

ಹನೂರು ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ, ಗ್ರಾಮದ ಜನರು ಹೊಸದಾಗಿ ಸ್ಥಾಪನೆಯಾದ ರೈತ ಸಂಘದ ಸದಸ್ಯತ್ವ ಪಡೆದು ಒಗ್ಗಟ್ಟಿನಿಂದ ಇರಬೇಕು. ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡಲು ಸಂಘದ ಸರ್ವ ಸದಸ್ಯರು ನಿಷ್ಠೆ, ಒಮ್ಮತದಿಂದ ಹೋರಾಡುವ ಮೂಲಕ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ತಾಲೂಕು ಗೌರವ ಅಧ್ಯಕ್ಷ ರಾಜಣ್ಣ, ತಾಲೂಕು ಉಪಾಧ್ಯಕ್ಷ ಪರಣಿ ಸ್ವಾಮಿ, ಮಾರತಳ್ಳಿ ಘಟಕದ ಅಧ್ಯಕ್ಷ ಸೂಸೈ ಮಾಣಿಕ್ಯ ಅರ್ಪಿತರಾಜ್, ಅಂತೋನಿ ಸ್ವಾಮಿ, ವೆಟುಕಾಡು ಮಹಿಳಾ ಘಟಕದ ಅಧ್ಯಕ್ಷ ಸೂಸೈಯಮ್ಮ ಹಾಗೂ ಇನ್ನಿತರ ರೈತ ಮುಖಂಡರು ಉಪಸ್ಥಿತರಿದ್ದರು.

------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.11ರಿಂದ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌ : ಎಚ್ಚರ
ಬೆಂಗಳೂರಲ್ಲಿ ಏಷ್ಯಾದ 2ನೇ ದೊಡ್ಡ 5 ಎಕರೆ ಅಮೆಜಾನ್‌ ಕಚೇರಿ : 7000 ನೌಕರರಿಗೆ ಸ್ಥಳಾವಕಾಶ