ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಪಟ್ಟಣದ ಸೈನಿಕ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಕರ್ನಾಟಕ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಸಂಘಟನ ಸೃಜನ ಅಭಿಯಾನದಲ್ಲಿ ಮಾತನಾಡಿದ ಅವರು, ಪಕ್ಷದ ವೀಕ್ಷಕರು ಮತಕ್ಷೇತ್ರದಲ್ಲಿ ಸುತ್ತಾಡಿ ಸಮಾಲೋಚಿಸಿ ತಮ್ಮೆಲ್ಲರ ವಿಶ್ವಾಸ ಹಾಗೂ ಅಭಿಪ್ರಾಯ ಸಂಗ್ರಹಿಸಿ ಯೋಗ್ಯ ಜಿಲ್ಲಾಧ್ಯಕ್ಷರ ಆಯ್ಕೆ ಮಾಡಿ ಕೇಂದ್ರ ಸಮಿತಿಗೆ ಕಳುಹಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದರು.
ಪ್ರದೇಶ ಸಮಿತಿಯ ವೀಕ್ಷಕ ಸಚಿನ್ ಯಾದವ ಮಾತನಾಡಿ, ಯುವಕರು, ಮಹಿಳೆಯರು, ಪರಿಶಿಷ್ಟರು, ಅಲ್ಪಸಂಖ್ಯಾತರು ಹಾಗೂ ಎಲ್ಲಾ ಸಮುದಾಯದವರಿಗೆ ಪಕ್ಷದಲ್ಲಿ ಸಮಾನ ಅವಕಾಶ ಮತ್ತು ಪ್ರಾತಿನಿಧ್ಯ ನೀಡುವುದೇ ಅಭಿಯಾನದ ಮೂಲ ಸಂದೇಶವಾಗಿದೆ. ಸರ್ಕಾರದ ಜನಪರ ಯೋಜನೆಗಳು, ಗ್ಯಾರಂಟಿ ಯೋಜನೆಗಳನ್ನು ಮನೆ, ಮನೆಗೆ ತಲುಪಿಸಿ ಜನರೊಂದಿಗೆ ನೇರ ಸಂಪರ್ಕ ಬೆಳೆಸಬೇಕಿದೆ. ಪಕ್ಷದ ವಿಚಾರಧಾರೆ, ಇತಿಹಾಸ ಮತ್ತು ಸಂವಿಧಾನದ ಮೌಲ್ಯಗಳನ್ನು ಹೊಸ ಪೀಳಿಗೆಗೆ ತಲುಪಿಸುವ ಕಾರ್ಯಾಗಾರಗಳನ್ನು ಪ್ರತಿ ಜಿಲ್ಲೆಯಲ್ಲಿಯೂ ನಡೆಸಲಾಗುತ್ತಿದೆ. ಹಳೆಯ ಹಾಗೂ ಹೊಸ ಕಾರ್ಯಕರ್ತರನ್ನು ಒಗ್ಗೂಡಿಸಿ ಒಂದು ಕುಟುಂಬ-ಒಂದು ಧ್ಯೇಯ ಎಂಬಂತೆ ಪಕ್ಷ ಬಲಿಷ್ಠಗೊಳಿಸುವುದೇ ಸೃಜನ ಅಭಿಯಾನದ ಗುರಿ ಎಂದು ತಿಳಿಸಿದರು.ಕೆಪಿಸಿಸಿ ಸದಸ್ಯರಾದ ಭೀಮಣ್ಣ ಮೇಟಿ, ರಾಘವೇಂದ್ರ, ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಭಾಗ್ಯರಾಜ ಸೊನ್ನದ ಮಾತನಾಡಿದರು.