ಕಾರಟಗಿ:
ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಪುರಸಭೆ ಕಾರ್ಯಾಲಯ ಸಹಯೋಗದಲ್ಲಿ ಇಲ್ಲಿನ ಸಿ. ಮಲ್ಲಿಕಾರ್ಜುನ ನಾಗಪ್ಪ ಮಹಾವಿದ್ಯಾಲಯದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಹೀ ಸೇವೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಪ್ರತಿಯೊಬ್ಬರಲ್ಲಿ ಸ್ವಚ್ಛ ಪರಿಸರ ಬೆಳೆಸಲು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಛತಾ ಹೀ ಸೇವೆ ಅಭಿಯಾನದಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರು ಆರೋಗ್ಯದಿಂದ ಬದುಕು ನಿರ್ವಹಿಸಲು ಸ್ವಚ್ಛತೆ ಬೇಕು. ಹೀಗಾಗಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡದೆ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದರು.ವೇಗವಾಗಿ ಬೆಳೆಯುತ್ತಿರುವ ಪಟ್ಟಣದಲ್ಲಿ, ಮುಖ್ಯವಾಗಿ ಹೊಸ ಬಡಾವಣೆಗಳಲ್ಲಿ ಸಸಿಗಳನ್ನು ಬೆಳೆಸಬೇಕು. ಇದರಿಂದ ಶುದ್ಧ ವಾತಾವರಣ ಸಿಗುತ್ತದೆ. ಇದಕ್ಕೆ ಸಮೂದಾಯದ ಸಹಕಾರವೂ ಅಗತ್ಯವಾಗಿದೆ ಎಂದ ಅವರು, ಸ್ವಚ್ಛ ಪರಿಸರಕ್ಕೆ ಆದ್ಯತೆ ನೀಡಿ ಮರ-ಗಿಡ ಬೆಳೆಸಿ-ಪಾಲನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ವೇಳೆ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆ ೨.೦ ಅಡಿ ಅಂಗೀಕಾರ ಆಂದೋಲನದಲ್ಲಿ ರಸ ಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆ ನಡೆಸಲಾಯಿತು. ಪುರಸಭೆ ಅಧ್ಯಕ್ಷೆ ರೇಖಾ ಆನೆಹೊಸುರ ದಂಪತಿಯನ್ನು ಸನ್ಮಾನಿಸಲಾಯಿತು. ಪುರಸಭೆ ಸದಸ್ಯ ಶ್ರೀನಿವಾಸ, ಅಧಿಕಾರಿಗಳಾದ ಅಕ್ಷತಾ, ಮಲ್ಲಮ್ಮ, ತಾಜುದ್ದೀನ್, ರಮೇಶ ಕೆಂಗೇರಿ, ರಾಜಶೇಖರ ಆನೆಹೋಸುರ, ಪ್ರಾಚಾರ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.