ಕನ್ನಡಪ್ರಭ ವಾರ್ತೆ ಗೌರಿಬಿದನೂರು
ತಾಲೂಕಿನ ದಾರಿನಾಯಕನಪಾಳ್ಯ ಗ್ರಾಮದ ಸರ್ಕಾರಿ ಸಂಸ್ಖೃತ ಪಾಠಶಾಲೆಯ ಸಂಸ್ಕೃತ ವಿಭಾಗ ಮತ್ತು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಚಾಮರಾಜಪೇಟೆ, ಬೆಂಗಳೂರು ಇವರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಸ್ಕೃತ ಪ್ರಚಾರ ಪರಿಷದ್ ಟ್ರಸ್ಟ್(ರಿ) ವತಿಯಿಂದ ಆಯೋಜಿಸಿದ್ದ ಅಸ್ಮಾಕಂ ಸಂಸ್ಕೃತಮ್ ಕಾರ್ಮಕ್ರಮವನ್ನು ಉದ್ಘಾಟಿಸಿ ನಂತರ ‘ಅಸ್ಮಾಕಂ ಸಂಸ್ಕೃತಮ್’ ಎಂಬ ಸರಣಿ ಸಂಸ್ಕೃತೋತ್ಸವದ ಮುಖ್ಯವಕ್ತಾರರಾಗಿ ಅವರು ಮಾತನಾಡಿದರು.
ಪುರಾತನ ಭಾಷೆ ಸಂಸ್ಕೃತಸಂಸ್ಕೃತವು ಜಗತ್ತಿನ ಅತಿಪುರಾತನವಾದ ಭಾಷೆಯಾಗಿದೆ, ಅತ್ಯಂತ ದೊಡ್ಡದಾದ ಜ್ಞಾನಭಂಡಾರವೇ ಈ ಭಾಷೆಯಲ್ಲಿದೆ. ಆದ್ದರಿಂದ ಇಂದು ಪ್ರಪಂಚದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳೆಲ್ಲವೂ ಸಂಸ್ಕೃತ ವಿಭಾಗವನ್ನು ಪ್ರಾರಂಭಿಸುತ್ತಿವೆ. ಈ ಮೂಲಕ ಭಾರತೀಯ ಜ್ಞಾನ-ವಿಜ್ಞಾನ ಪರಂಪರೆಯನ್ನು ಅಭ್ಯಸಿಸುತ್ತಿವೆ. ಒಟ್ಟಿನಲ್ಲಿ ಸಂಸ್ಕೃತ ಇಂದು ಜಾಗತಿಕವಾದ, ಜಗನ್ಮಾನ್ಯವಾದ ಭಾಷೆಯಾಗಿದೆ ವಿಶೇಷ ಅರ್ಥವನ್ನು ನೀಡುವ ಸಂಸ್ಕೃತ ಭಾಷೆಯ ಕಲಿಕೆಯು ಎಲ್ಲಾ ಮಕ್ಕಳಿಗೂ ಅನಿವಾರ್ಯವಾಗಬೇಕಾಗಿದೆ ಈ ನಿಟ್ಟಿನಲ್ಲಿ ಸಂಸ್ಕೃತ ಭಾಷೆಯ ಪರಿಚಯವನ್ನು ಪ್ರತಿಯೊಬ್ಬರೂ ತಿಳಿಯಬೇಕಿದೆ ಎಂದು ಸಲಹೆ ನೀಡಿದರು.
ಸಂಸ್ಕೃತ ವೈಜ್ಞಾನಿಕ ಭಾಷೆಕರ್ನಾಟಕ ಪಬ್ಲಿಕ್ಕೆ ಶಾಲೆಯ ಸಹ ಶಿಕ್ಷಕಿಯಾದ ಶ್ರೀ ಲಕ್ಷ್ಮಿಮಾತನಾಡಿ, ಭಾರತದ ಪ್ರಾಚೀನ ಕಾಲದಲ್ಲಿ ಗುರುಕುಲ ಪದ್ದತಿಯಲ್ಲಿ ಮಕ್ಕಳಿಗೆ ಸಂಸ್ಕೃತ ಭಾಷೆಯ ಪಾಠವನ್ನು ಕಲಿಸಲಾಗುತ್ತಿತ್ತು. ಆಗಿನ ಸಂದರ್ಭದಲ್ಲಿ ಸಂಸ್ಕೃತ ಭಾಷೆಯನ್ನು ಸಂವಹನ ಭಾಷೆಯಾಗಿ ಬಳಕೆ ಮಾಡುತ್ತಿದ್ದರಿಂದ ಹೆಚ್ಚು ಮನ್ನಣೆಯನ್ನು ಗಳಿಸಿತು. ಇಂದಿಗೂ ಸಹ ಸಂಸ್ಕೃತಿ ಭಾಷೆಯು ವೈಜ್ಞಾನಿಕ ಭಾಷೆಯ ಸ್ಥಾನವನ್ನುಪಡೆದಿದ್ದು ದೇಶದ ಹಿರಿಮೆ-ಗರಿಮೆಯನ್ನು ಎತ್ತಿಹಿಡಿದ ಸಂಸ್ಕೃತ ಬಾಷೆಯು ನಮ್ಮ ಭಾರತದ ಹೆಮ್ಮೆಯ ಭಾಷೆಯಾಗಿದೆ ಎಂದರು.