ಸಂಸ್ಕೃತ ಕಲಿಕೆಯು ಮನುಷ್ಯನನ್ನು ಸುಸಂಸ್ಕೃತನನ್ನಾಗಿಸುತ್ತದೆ

KannadaprabhaNewsNetwork |  
Published : Aug 31, 2024, 01:30 AM IST
43 | Kannada Prabha

ಸಾರಾಂಶ

ಸಂಸ್ಕೃತ ಅತ್ಯಂತ ಸಮೃದ್ಧವಾದ ಭಾಷೆ. ಅದರ ಆಳವಾದ ಅಧ್ಯಯನದಿಂದ ನಮ್ಮ ಜ್ಞಾನ ವಿಸ್ತಾರವಾಗುತ್ತದೆ

ಕನ್ನಡಪ್ರಭ ವಾರ್ತೆ ಮೈಸೂರುಸಂಸ್ಕೃತ ಭಾಷಾ ಕಲಿಕೆಯು ಮನುಷ್ಯನನ್ನು ಸುಸಂಸ್ಕೃತನನ್ನಾಗಿಸುತ್ತದೆ ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಸೋಸಲೆ ವ್ಯಾಸರಾಜರ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು. ಸಂಸ್ಕೃತ ಮಾಸಾಚರಣೆ ಅಂಗವಾಗಿ ಸೋಸಲೆ ವ್ಯಾಸರಾಜ ಮಠ ಮತ್ತು ಟಿ. ನರಸೀಪುರದ ವಿಶ್ವಚೇತನ ಸಂಸ್ಕೃತ ಪಾಠಶಾಲೆ ಸಂಯುಕ್ತವಾಗಿ ಸೋಸಲೆ ಗ್ರಾಮದ ಶ್ರೀಮಠದಲ್ಲಿ ‘ಅಸ್ಮಾಕಂ ಸಂಸ್ಕೃತಂ’ ಶೀರ್ಷಿಕೆಯಡಿ ಹಮ್ಮಿಕೊಂಡಿದ್ದ ಸಂಸ್ಕೃತೋತ್ಸವ ಹಾಗೂ ಶ್ರೀ ಕೃಷ್ಣ ಜಯಂತ್ಯುತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ಸಂಸ್ಕೃತ ಅತ್ಯಂತ ಸಮೃದ್ಧವಾದ ಭಾಷೆ. ಅದರ ಆಳವಾದ ಅಧ್ಯಯನದಿಂದ ನಮ್ಮ ಜ್ಞಾನ ವಿಸ್ತಾರವಾಗುತ್ತದೆ. ವಿಶ್ವದ ಬಹುತೇಕ ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಲು ಪೂರಕವಾಗುತ್ತದೆ. ಇದರಿಂದ ವ್ಯಕ್ತಿತ್ವಕ್ಕೆ ಶೋಭೆ ಬರುತ್ತದೆ ಎಂದವರು ಅಭಿಪ್ರಾಯಪಟ್ಟರು.ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ಶಿವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಆಗ ಕಲಿಕೆ ಮತ್ತು ಬೆಳವಣಿಗೆ ಎರಡೂ ಏಕ ಕಾಲದಲ್ಲಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ವಿಜಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವೀರಭದ್ರ ಸ್ವಾಮಿ ಪ್ರಧಾನ ಸಂಯೋಜಕ ಡಾ. ಸಿ.ಎಚ್. ಗುರುರಾಜ ರಾವ್ ಮಾತನಾಡಿದರು.ವಿಶ್ವಚೇತನ ಸಂಸ್ಕೃತ ಪಾಠಶಾಲೆ ಅಧ್ಯಕ್ಷ ಎಂ.ಎಂ. ನಾಗರಾಜು ಅಧ್ಶ್ರಕ್ಷತೆ ವಹಿಸಿದ್ದರು.ಚಿಣ್ಣರಿಂದ ಭಾಷಾ ಜಾಗೃತಿ ಜಾಥಾ: ‘ಅಸ್ಮಾಕಂ ಸಂಸ್ಕೃತಂ’ ಎಂಬ ಧ್ಯೇಯ ವಾಕ್ಯದೊಡನೆ ಹಮ್ಮಿಕೊಂಡಿದ್ದ ‘ಸಂಸ್ಕೃತ ವಸ್ತು ಪ್ರದರ್ಶನಿ’ ಗೆ ಬಿಇಒ ಸಿ.ಎಸ್. ಶಿವಮೂರ್ತಿ ಚಾಲನೆ ನೀಡಿದರು. ‘ ಪಠತ ಸಂಸ್ಕೃತಂ- ವದತ ಸಂಸ್ಕೃತಂ- ಜಯತು ಭಾರತಂ- ಮುಂತಾದ ಘೋಷಣೆಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮಕ್ಕಳು ಭಾಷಾ ಜಾಗೃತಿ ಜಾಥಾ ನಡೆಸಿ ಗಮನ ಸೆಳೆದರು. ವಿವಿಧ ಶಾಲೆಗಳ ಶಿಕ್ಷಕರು, ಪಾಲಕರು, ಗ್ರಾಮಸ್ಥರು ಭಾಗಿಗಳಾಗಿದ್ದರು.ಇದೇ ವೇಳೆ ಗೀತಾ ಕಂಠಪಾಠ ಸ್ಪರ್ಧೆ, ಕೃಷ್ಣ- ರಾಧೆ ವೇಷಭೂಷಣ ಸ್ಪರ್ಧೆ, ದೇವರನಾಮ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳಲ್ಲಿ ಟಿ. ನರಸೀಪುರ ತಾಲೂಕಿನ 52 ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ಸೋಸಲೆ ಶ್ರೀಗಳು ಬಹುಮಾನ ವಿತರಿಸಿದರು. ಬಾಗಲಕೋಟೆಯ 9 ವರ್ಷದ ಬಾಲಕ ಸುಧಾಂಶು ಕಟ್ಟಿ ಕೊಳಲು ವಾದನ, ಸುಘೋಷನ ದಾಸವಾಣಿ ಗಮನ ಸೆಳೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!