ಕುದೂರು: ನೂರು ಎಕರೆ ಸುಂದರ ಪರಿಸರದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣಗೊಂಡಿದ್ದು, ಲೋಕಾರ್ಪಣೆಗೆ ದಿನಗಣನೆ ಶುರುವಾಗಿದೆ. 2022ರಲ್ಲಿ 25 ಕೋಟಿ ರು. ವೆಚ್ಚದಲ್ಲಿ ಕಟ್ಟಡ ಕಾಮಗಾರಿ ಆರಂಭವಾಗಿ 2024ರಲ್ಲಿ ಸುಸಜ್ಜಿತ ಕಟ್ಟಡವಾಗಿ ಪೂರ್ಣಗೊಂಡಿದೆ.
ಜಾಗ ಸಂಸ್ಕೃತ ವಿವಿದ್ದು, ಕಟ್ಟಡ ಮುಕ್ತ ವಿವಿದ್ದು:
ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ನೂರು ಎಕರೆ ಜಾಗ ಮಂಜೂರು ಮಾಡಿಕೊಟ್ಟ ನಂತರ ಅಲ್ಲಿ ಕಟ್ಟಡ ನಿರ್ಮಾಣವಾಗಲು ಸರ್ಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮೂಲಕ ೨೫ ಕೋಟಿ ರು.ಗಳನ್ನು ಅಂದಿನ ಉನ್ನತ ಶಿಕ್ಷಣ ಸಚಿವರಾಗಿದ್ದ ಅಶ್ವತ್ಥನಾರಾಯಣ ಮಂಜೂರು ಮಾಡಿಸಿದ್ದರು.ಇದಕ್ಕೆ ಸಂಬಂಧಸಿದಂತೆ ಸಂಸ್ಕೃತ ವಿಶ್ವವಿದ್ಯಾಲಯ ಮತ್ತು ರಾಜ್ಯ ಮುಕ್ತ ವಿಶ್ವವಿದ್ಯಾಲಯದೊಂದಿಗೆ ಒಂದು ಒಪ್ಪಂದವಾಯಿತು. ಕಟ್ಟಡ ನಿರ್ಮಾಣವಾಗುವ ಜಾಗವನ್ನು ಸಂಸ್ಕೃತ ವಿಶ್ವವಿದ್ಯಾಲಯ ನೀಡಬೇಕು. ಅಲ್ಲಿ ನಿರ್ಮಾಣವಾಗುವ ಕಟ್ಟಡದ ವೆಚ್ಚವನ್ನು ರಾಜ್ಯ ಮುಕ್ತ ವಿಶ್ವವಿದ್ಯಾಲಯದವರು ವಹಿಸಿಕೊಳ್ಳುವುದು. ಈ ಒಪ್ಪಂದದ ಪ್ರಕಾರ ಆಡಳಿತ ಕಚೇರಿಯ ಒಂದು ಭಾಗದಲ್ಲಿ ಮುಕ್ತ ವಿಶ್ವವಿದ್ಯಾಲಯದ ರಾಮನಗರ ಶಾಖೆ ಈ ಕಟ್ಟಡದಲ್ಲಿ ಕಚೇರಿ ಆರಂಭಿಸುತ್ತದೆ.
15 ತರಗತಿ ಕೊಠಡಿಗಳನ್ನು ಒಳಗೊಂಡ ಈ ಕಟ್ಟಡಕ್ಕೆ ಹೊಂದಿಕೊಂಡಂತೆ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದೆ. 150 ಮಹಿಳೆಯರು ಮತ್ತು 150 ಪುರುಷ ವಿದ್ಯಾರ್ಥಿಗಳು ವಸತಿ ಸೌಲಭ್ಯ ಪಡೆದು ವಿದ್ಯಾಭ್ಯಾಸ ಮಾಡಬಹುದಾಗಿದೆ. ರಾಜ್ಯದ 29 ಪದವಿ ಕಾಲೇಜುಗಳು ಇದರ ವ್ಯಾಪ್ತಿಗೆ ಬರುತ್ತವೆ. ಇದರೊಂದಿಗೆ 400ಕ್ಕೂ ಹೆಚ್ಚು ಪಾಠಶಾಲೆಗಳು ನಿರ್ದೇಶಕರ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಒಳಪಡುತ್ತವೆ.
ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಭಾಷೆಯನ್ನೊಂದನ್ನೇ ಅಭ್ಯಾಸ ಮಾಡಿಸುತ್ತಾರೆ ಎಂಬುದಷ್ಟೇ ಅಲ್ಲ. ಇಲ್ಲಿನ ಪ್ರಾದೇಶಿಕ ಭಾಷೆಯ ಅಧ್ಯಯನದ ಪರಿಚಯದೊಂದಿಗೆ ಸಂಖ್ಯಾಶಾಸ್ತ್ರ, ಯೋಗಶಾಸ್ತ್ರ, ಭವಿಷ್ಯ, ತರ್ಕ, ಜ್ಯೋತಿಷ್ಯ, ಅಲಂಕಾರ, ವ್ಯಾಕರಣ, ದ್ವೈಶ, ಅದ್ವೈತ, ವಿಶಿಷ್ಟಾದ್ವೈತ, ಶಕ್ತಿ ವಿಶಿಷ್ಟಾದ್ವೈತ, ವೇದಶಾಸ್ತ್ರ ಹೀಗೆ ಹಲವಾರು ವಿಭಾಗಗಳಲ್ಲಿ ಶಿಕ್ಷಣ ನೀಡಲಾಗುತ್ತದೆ.
ವಿಶ್ವವಿದ್ಯಾಲಯದ ಹತ್ತು ಎಕರೆ ಪ್ರದೇಶದಲ್ಲಿ ವಿವಿಧ ರೀತಿಯ ಔಷಧೀಯ ಗುಣಗಳನ್ನು ಒಳಗೊಂಡಿರುವ ಮತ್ತು ಪಕ್ಷಿಗಳು ಗೂಡು ಕಟ್ಟಲು ಅನುಕೂಲವಾಗಲೆಂದು ಬಿದಿರಿನ ನೂರಾರು ಗಿಡಗಳನ್ನು ಹಾಕಿ ಪೋಷಣೆ ಮಾಡಲಾಗುತ್ತಿದೆ.
ಸುಂದರ ಹಸಿರು ಪರಿಸರದಲ್ಲಿ ವಿಶ್ವವಿದ್ಯಾಲಯ ನಿರ್ಮಾಣಗೊಂಡಿದೆ. ಅದನ್ನು ಸರ್ಕಾರ ಯಾವಾಗ ನಮಗೆ ವರ್ಗಾವಣೆ ಮಾಡಿಕೊಡುತ್ತದೆಯೋ ಆ ಕೂಡಲೆ ಬೆಂಗಳೂರಿನ ಕಚೇರಿ ಮತ್ತು ವಿದ್ಯಾರ್ಥಿಗಳನ್ನು ಇಲ್ಲಿಗೆ ವರ್ಗಾಯಿಸಲಾಗುತ್ತದೆ. ಈ ಕೆಲಸಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.
ಕೋಟ್............
- ಎಚ್.ಸಿ.ಬಾಲಕೃಷ್ಣ, ಶಾಸಕ, ಮಾಗಡಿ ಕ್ಷೇತ್ರ
ಕೋಟ್ .............ಆಗಿರುವ ಒಪ್ಪಂದದಂತೆ ರಾಜ್ಯ ಮುಕ್ತ ವಿವಿ ರಾಮನಗರ ಶಾಖೆ ಇನ್ನು ಮುಂದೆ ಸಂಸ್ಕೃತ ವಿಶ್ವವಿದ್ಯಾಲಯದ ಕಟ್ಟಡದಲ್ಲೆ ತೆರೆಯಲಾಗುತ್ತದೆ. ಇನ್ನು ಯಾವುದೇ ಪದವಿ, ಸ್ನಾತಕೋತ್ತರ ವಿಷಯಗಳ ಪರೀಕ್ಷೆ ತೆಗೆದುಕೊಳ್ಳಲು ಇದೇ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ಕಚೇರಿ ಆರಂಭಿಸುತ್ತಿದ್ದೇವೆ.
-ಭಾಸ್ಕರ್, ಎಕ್ಸಿಕ್ಯುಟಿವ್ ಎಂಜಿನಿಯರ್, ರಾಜ್ಯ ಮುಕ್ತ ವಿವಿ13ಕೆಆರ್ ಎಂಎನ್ 3,4.ಜೆಪಿಜಿ
3.ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯ ಮರಡಿಗುಡ್ಡೆ ಅರಣ್ಯದ ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿರುವ ಸಂಸ್ಕೃತ ವಿಶ್ವವಿದ್ಯಾಲಯ ಕಟ್ಟಡ.4. ಸಂಸ್ಕೃತ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯ ಕಟ್ಟಡ.