ಸಂತೆಕಟ್ಟೆ ಒಣಮೀನು ಮಾರುಕಟ್ಟೆ ಉದ್ಘಾಟನೆ

KannadaprabhaNewsNetwork |  
Published : Jul 07, 2025, 11:48 PM IST
06ಮೀನು | Kannada Prabha

ಸಾರಾಂಶ

ಸಂತೆಕಟ್ಟೆಯ ಒಣ ಮೀನು ಮಾರಾಟಗಾರ ಮಹಿಳೆಯರ ಬಹು ವರ್ಷಗಳ ಬೇಡಿಕೆಯಂತೆ ಉಡುಪಿ ನಗರಸಭೆಯ ಮೂಲಕ 10 ಲಕ್ಷ ರು. ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ನಗರಸಭೆಯ ಅನುದಾನದಲ್ಲಿ ನಿರ್ಮಾಣಗೊಂಡ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಒಣ ಮೀನು ಮಾರುಕಟ್ಟೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.ನೂತನ ಮಾರುಕಟ್ಟೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಸಂತೆಕಟ್ಟೆಯ ಒಣ ಮೀನು ಮಾರಾಟಗಾರ ಮಹಿಳೆಯರ ಬಹು ವರ್ಷಗಳ ಬೇಡಿಕೆಯಂತೆ ಉಡುಪಿ ನಗರಸಭೆಯ ಮೂಲಕ 10 ಲಕ್ಷ ರು. ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗಿದ್ದು, ವಿದ್ಯುತ್ ದೀಪ ಹಾಗೂ ಫ್ಯಾನ್ ಅಳವಡಿಕೆಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲ ಮೀನು ಮಾರುಕಟ್ಟೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು.ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಬಾಲಕೃಷ್ಣ ಶೆಟ್ಟಿ, ಜಯಂತಿ ಪೂಜಾರಿ, ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಸಾಲ್ಯಾನ್, ಕಲ್ಯಾಣಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ಕುಂದರ್, ಸಹಕಾರಿ ಸಂಘದ ನಿರ್ದೇಶಕರಾದ ಸುರೇಶ್ ಕುಂದರ್ ಮತ್ತು ನಾರಾಯಣ, ಮುಖಂಡರಾದ ಪ್ರಶಾಂತ್ ಕಾಂಚನ್ ಬೆಂಗ್ರೆ, ಉಮೇಶ್ ಶೆಟ್ಟಿ, ಸತೀಶ್ ನಾಯ್ಕ್, ಚಿನ್ಮಯ ಮೂರ್ತಿ, ಪ್ರಸಾದ್ ರಾವ್, ಅಜಿತ್ ಕೊಡವೂರು, ಕೃಷ್ಣ ಶೆಟ್ಟಿ, ರುಡಾಲ್ಫ್ ಹಾಗೂ ಒಣ ಮೀನು ಮಾರಾಟಗಾರ ಮಹಿಳೆಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''