ಕನ್ನಡಪ್ರಭ ವಾರ್ತೆ ಚಿಂಚೋಳಿ
ಪಟ್ಟಣದಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಪಟ್ಟಣದ ಹೊರವಲಯದಲ್ಲಿ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಚಿಂಚೋಳಿ ಸಕ್ಕರೆ ಕಾರ್ಖಾನೆಯನ್ನು ವಿಜಯಪುರ ಶಾಸಕ ಬಸವನಗೌಡ ಪಾಟೀಲ ಖರೀದಿಸಿದ್ದಾರೆ. ನಂತರ ಸಿದ್ದಸಿರಿ ಇಥೆನಾಲ್ ಪವರ್ ಘಟಕ ಎಂದು ಕಳೆದೆರಡು ವರ್ಷಗಳಿಂದ ಪ್ರಾರಂಭಿಸಿ ಅನೇಕ ಯುವಕರಿಗೆ ಉದ್ಯೋಗ ನೀಡಿದ್ದಾರೆ. ಕಂಪನಿಯಿಂದ ಕಬ್ಬನ್ನು ಖರೀದಿಸಿ ತಕ್ಷಣವೇ ಬಿಲ್ ಪಾವತಿಸಿದ್ದಾರೆ. ಆದರೆ ಸಿದ್ದಸಿರಿ ಇಥೆನಾಲ್ ಪವರ್ ಘಟಕ ಪ್ರಾರಂಭಿಸಲು ಅನುಮತಿ ನೀಡುವಂತೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಆದೇಶಿಸಿದೆ. ಆದರೆ ರಾಜಕೀಯ ದುರುದ್ದೇಶ, ದ್ವೇಷ, ರಾಜಕೀಯ ಭಿನ್ನಾಭಿಪ್ರಾಯಗಳಿಂದ ಕಂಪನಿಗೆ ಅನುಮತಿ ಕೊಡುತ್ತಿಲ್ಲ. ಮಂಗಳವಾರ ಕಲಬುರಗಿ ನಗರದಲ್ಲಿ ಸಚಿವ ಸಂಪುಟ ನಡೆಸುತ್ತಿರುವ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲು ಹೊರಟಿದ್ದ ನೂರಾರು ರೈತರನ್ನು ಅನೇಕ ಕಡೆಗಳಲ್ಲಿ ತಡೆಯೊಡ್ಡಿದ್ದಾರೆ. ರೈತರ ಶಕ್ತಿ ಕುಗ್ಗಿಸಲು ಹೊರಟಿರುವ ಸರ್ಕಾರದ ನಡೆ ಖಂಡಿನೀಯವಾಗಿದೆ. ಸರ್ಕಾರ ಹಿಂದುಳಿದ ಪ್ರದೇಶದ ರೈತರ ಹಿತರಕ್ಷಣೆಗಾಗಿ ಅನುಮತಿ ನೀಡಬೇಕೆಂದು ಎಂದು ಸಂತೋಷ ಗಡಂತಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ವಿಜಯಕುಮಾರ ಚೇಂಗಟಿ, ಶ್ರೀಮಂತ ಕಟ್ಟಿಮನಿ, ಕೆ.ಎಂ.ಬಾರಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಹಿರಿಯ ಮುಖಂಡ ಭೀಮಶೆಟ್ಟಿ ಮುರುಡಾ, ಲೋಕೇಶ ಶೆಳ್ಳಗಿ, ಶ್ರೀನಿವಾಸ ಚಿಂಚೋಳಿಕರ, ಮಲ್ಲುಸ್ವಾಮಿ, ಶಿವಯೋಗಿ ರುಸ್ತಂಪೂರ ಇನ್ನಿತರಿದ್ದರು.