ಉಳ್ಳಾಲ: ಪ್ರಧಾನಿ ನರೇಂದ್ರ ಮೋದಿ ಅವರ ಜನಸೇವೆಯ ಆದರ್ಶವನ್ನು ಪ್ರೇರಣೆಯಾಗಿಸಿಕೊಂಡು ಸಮಾಜದ ಅಶಕ್ತ ವರ್ಗದವರಿಗೆ ‘ನಮೋ ಕುಟೀರ’ ನಿರ್ಮಿಸಿ ಕೊಡುತ್ತಿರುವ ಬಿಜೆಪಿ ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಸೇವಾ ಕಾರ್ಯ ಜಿಲ್ಲೆ ಮಾತ್ರವಲ್ಲದೆ ಇಡೀ ದೇಶಕ್ಕೆ ಮಾದರಿ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.ಉಳ್ಳಾಲ ತಾಲೂಕಿನ ಅಡ್ಕ ಶ್ರೀ ಭಗವತಿ ದೈವಸ್ಥಾನದ ದರ್ಶನ ಪಾತ್ರಿ ಶ್ರವಣ ಬೆಳ್ಚಪ್ಪಾಡ ಅವರಿಗಾಗಿ ಅಡ್ಕದ ದೊಡ್ಡಮನೆ ಕಾಂಪೌಂಡ್ನಲ್ಲಿ ನಿರ್ಮಿಸಲಾದ 7ನೇ ‘ನಮೋ ಕುಟೀರ’ದ ಗೃಹಪ್ರವೇಶ ಸಮಾರಂಭದಲ್ಲಿ ಭಾಗವಹಿಸಿ, ಫಲಾನುಭವಿ ಕುಟುಂಬಕ್ಕೆ ಮನೆಯ ಕೀಲಿಕೈ ಹಸ್ತಾಂತರಿಸಿ ಮಾತನಾಡಿದರು.
ಮಾಡೂರು ಮರಿಯಣ್ಣಪಾಲು ಶಿವದುರ್ಗಾಂಭ ಮಠದ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಹಿರಿಯ ಬಿಜೆಪಿ ಮುಖಂಡ ಸೀತಾರಾಮ ಬಂಗೇರ, ಕೈರಂಗಳ ಶಾರದಾ ಗಣಪತಿ ವಿದ್ಯಾ ಕೇಂದ್ರದ ಸಂಚಾಲಕ ಟಿ.ಜಿ. ರಾಜಾರಾಮ್ ಭಟ್, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್, ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರ್, ದಿನೇಶ್ ಶರ್ಮ, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಉಚ್ಚಿಲ್, ಚಂದ್ರಹಾಸ್ ಉಳ್ಳಾಲ್, ಉದ್ಯಮಿ ದಿನೇಶ್ ಎಂ.ಪಿ., ದೈವಜ್ಞ ದಿನೇಶ್ ಪಣಿಕ್ಕರ್, ಮೂರೂರು ಬೋವಿ ಮಹಾಸಭಾ ಅಧ್ಯಕ್ಷ ಹರೀಶ್ ಟಿ. ಉಚ್ಚಿಲ್, ಸಂತೋಷ್ ಬೋಳಿಯಾರ್ ಅವರ ಪತ್ನಿ ವೀಣಾ ಎಸ್. ರೈ, ಪುತ್ರ ಸಮ್ಯಕ್ತ್ ರೈ, ಪುತ್ರಿ ಸ್ಪರ್ಶ ಎಸ್. ರೈ ಮತ್ತಿತರರಿದ್ದರು.‘ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹತ್ತಿರದಿಂದ ಮಾತನಾಡುವ ಅವಕಾಶ ನನಗೆ ದೊರೆತಿದೆ. ಅವರಲ್ಲಿರುವ ದೇವತಾ ಶಕ್ತಿಯನ್ನು ನಾನು ಗ್ರಹಿಸಿದ್ದೇನೆ. ಅವರ ಹೆಸರಿನಲ್ಲಿ ಅಶಕ್ತ ವರ್ಗದವರಿಗೆ 10 ಮನೆಗಳನ್ನು ನಿರ್ಮಿಸುವ ಸಂಕಲ್ಪ ಕೈಗೊಂಡಿದ್ದೇನೆ. -ಸಂತೋಷ್ ಕುಮಾರ್ ರೈ ಬೋಳಿಯಾರ್, ಬಿಜೆಪಿ ಮುಖಂಡ