ದೇಶದ ಏಕೀರಣದಲ್ಲಿ ಸರ್ದಾರ್‌ ಪಟೇಲ್‌ ಪಾತ್ರ ಸ್ಮರಣೀಯ

KannadaprabhaNewsNetwork |  
Published : Nov 25, 2025, 01:15 AM IST
೨೪ಕೆಎಲ್‌ಆರ್-೯ಪ್ರಥಮ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಭಾರತ ಕಂಡ ಮಹಾನ್ ಅಪ್ರತಿಮ ದೇಶಭಕ್ತ ಎಂದು ಕೋಲಾರದ ಗಾಂಧಿವನದಲ್ಲಿ ಏಕತಾ ನಡಿಗೆ ಪಾದಯಾತ್ರೆಯ ಪ್ರತಿಜ್ಞಾವಿಧಿ ಬೋದಿಸುತ್ತಿರುವ ಸಂಸದ ಎಂ.ಮಲ್ಲೇಶ್ ಬಾಬು. | Kannada Prabha

ಸಾರಾಂಶ

ಸ್ವಾತಂತ್ರದ ನಂತರ ಹರಿದು ಹಂಚಿ ಹೋಗಿದ್ದ ೫೬೫ ವಿವಿಧ ರಾಜರ ಸಂಸ್ಥಾನಗಳನ್ನು ಒಗ್ಗೂಡಿಸಿ ಅವರ ಮನವೊಲಿಸುವ ಮೂಲಕ, ಅಲ್ಲದೇ ಮೊಂಡುತನ ಮಾಡುವರನ್ನು ಬಗ್ಗು ಬಡಿದು ವಿಲೀನ ಮಾಡಿ ಭಾರತವನ್ನು ಏಕೀಕರಣ ರಾಷ್ಟ್ರವನ್ನಾಗಿ ಮಾಡುವಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪಾತ್ರ ಮಹತ್ತರವಾದದ್ದು.

ಕನ್ನಡಪ್ರಭ ವಾರ್ತೆ ಕೋಲಾರಪ್ರಥಮ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಭಾರತ ಕಂಡ ಮಹಾನ್ ಅಪ್ರತಿಮ ದೇಶಭಕ್ತ ಎಂದು ನಗರದ ಬಂಗಾರಪೇಟೆ ವೃತ್ತ ಪ್ರವಾಸಿ ಮಂದಿರ ಸಮೀಪ ಏಕತಾ ನಡಿಗೆ ಪಾದಯಾತ್ರೆ ಕಾರ್ಯಕ್ರಮದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು ಅಭಿಪ್ರಾಯಪಟ್ಟರು.ಭಾರತ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದಿಂದ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಬಾಯ್ ಪಟೇಲ್ ೧೫೦ನೇ ಜನ್ಮದಿನದ ಅಂಗವಾಗಿ ಏಕತಾ ನಡಿಗೆ ಪಾದಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದ ಏಕೀಕರಣ ಮಾಡಿದ ನೇತಾರ

ಭಾರತದ ಏಕೀಕರಣಕ್ಕೆ ಕಾರಣವಾದ ಸರ್ದಾರ್ ವಲ್ಲಬಾಯ್ ಪಟೇಲ್ ಅವರ ಜನ್ಮದಿನಾಚರಣೆ ಪ್ರಯುಕ್ತ ದೇಶಾದ್ಯಂತ ಪಾದಯಾತ್ರೆ ಆಯೋಜಿಸಿದೆ. ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದಿಂದ ಪಾದಯಾತ್ರೆ ದೇಶಾದ್ಯಂತ ಆಯೋಜಿಸಿದೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ೨೦೪೭ಕ್ಕೆ ವಿಕಸಿತ ಭಾರತ ಕಟ್ಟುವ ಪರಿಣಾಮವಾಗಿ ದೇಶದ ಯುವಕರನ್ನು ದೇಶದ ಪ್ರಗತಿಯೊಂದಿಗೆ ದೇಶದ ಗೌರವದೊಂದಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ಪಾದಯಾತ್ರೆ ಆಯೋಜಿಸಿದೆ ಎಂದರು.

ಸ್ವಾತಂತ್ರದ ನಂತರ ಹರಿದು ಹಂಚಿ ಹೋಗಿದ್ದ ೫೬೫ ವಿವಿಧ ರಾಜರ ಸಂಸ್ಥಾನಗಳನ್ನು ಒಗ್ಗೂಡಿಸಿ ಅವರ ಮನವೊಲಿಸುವ ಮೂಲಕ, ಅಲ್ಲದೇ ಮೊಂಡುತನ ಮಾಡುವರನ್ನು ಬಗ್ಗು ಬಡಿದು ವಿಲೀನ ಮಾಡಿ ಭಾರತವನ್ನು ಏಕೀಕರಣ ರಾಷ್ಟ್ರವನ್ನಾಗಿ ಮಾಡುವಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪಾತ್ರ ಮಹತ್ತರವಾದದ್ದು ಎಂದು ಸ್ಮರಿಸಿದರು.

ದೇಶ ಗಜತ್ತಿನ ಹಿರಿಯಣ್ಣನಾಗಬೇಕು

ಭಾರತದಲ್ಲಿ ಸರ್ದಾರ್ ವಲ್ಲಬಾಯ್ ಪಟೇಲರು ಹಂಚಿ ಹೋಗಿದ್ದ ರಾಜ್ಯಗಳನ್ನು ಒಗ್ಗೂಡಿಸುವ ಮೂಲಕ ಭಾರತ ರಾಷ್ಟ್ರವನ್ನು ನಿರ್ಮಿಸಿದ ರೀತಿಯಲ್ಲಿ ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗಬೇಕಾಗಿದೆ. ಯುವಕರು ದೇಶದ ಘನತೆ, ಗೌರವ ಮತ್ತು ಐಕ್ಯತೆಗಳನ್ನು ಎತ್ತಿ ಹಿಡಿಯುವ ಮೂಲಕ ವಿಶ್ವದ ಹಿರಿಯಣ್ಣನನ್ನಾಗಿ ಭಾರತವನ್ನು ಮಾಡಬೇಕಾಗಿದೆ ಎಂದರು.ಈ ಸಂದರ್ಭದಲ್ಲಿ ಮೈ ಭರತ್ ಜಿಲ್ಲಾ ಯುವಜನ ಅಧಿಕಾರಿ ರಾಜೇಶ್ ಕಾರಂತ್, ಕ್ರೀಡಾ-ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಗ್ರೇಡ್-೨ ತಹಸೀಲ್ದಾರ್ ಹಂಸಮರಿಯ, ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ರಿಜಿಸ್ಟರ್ ಡಾ.ಮುನಿನಾರಾಯಣ, ಮೈ ಭಾರತ್ ಕಚೇರಿಯ ಪ್ರವೀಣ್ ಕುಮಾರ್, ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಶ್ರೀಧರ್, ಆಯೋಜಕರಾದ ಸುಮನ್ ಎ.ವಿ, ಮುಖಂಡರಾದ ಓಂಶಕ್ತಿ ಚಲಪತಿ, ಸಿಎಂಆರ್ ಶ್ರೀನಾಥ್, ಬಿ.ವಿ.ಮಹೇಶ್, ಪುರ ನಾರಾಯಣಸ್ವಾಮಿ, ರಾಜೇಶ್ ಸಿಂಗ್, ಶಿವಕುಮಾರ್, ವಡಗೂರು ರಾಕೇಶ್, ಮಾಗೇರಿ ನಾರಾಯಣಸ್ವಾಮಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ