ತಾಂಬಾ: ಸರ್ವಜ್ಞರ ವಚನಗಳು ಬೆಲೆ ಕಟ್ಟಲಾಗದ ಅಮೂಲ್ಯ ಆಸ್ತಿ. ಬೆಳಕಿನಿಂದ ವ್ಯಕ್ತಿಗತ ಬದುಕಿನ ಕತ್ತಲೆ ಕಳೆದುಕೊಳ್ಳಬೇಕು. ಅವರ ವಚನಗಳಲ್ಲಿರುವ ಮನುಕುಲದ ಉನ್ನತಿಯ ತತ್ವ ಸಿದ್ಧಾಂತಗಳನ್ನು ಪಾಲಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಶಿಕ್ಷಕಿ ಎಸ್ ಬಿ ಕುಲಕರ್ಣಿ ಮಾತನಾಡಿ, ಸರ್ವಜ್ಞ ತನ್ನ ಹಿತನುಡಿಗಳಿಂದ ಸಮಾಜವನ್ನು ಒಳ್ಳೆಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ಇವರ ತ್ರಿಪದಿಗಳಲ್ಲಿರುವ ಸಂದೇಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ವಿ ವೈ ಪತ್ತಾರ, ಆಡುವ ಮಾತಿನಿಂದ ಸಮಾಜದ ಅಂಕುಡೊಂಕುಗಳನ್ನು ತಿದ್ದಿದವರು ಸರ್ವಜ್ಞ. ಅವಿದ್ಯಾವಂತರಾದವರು ಎಲ್ಲ ಜನರನ್ನುಒಂದೇ ದೃಷ್ಟಿಯಲ್ಲಿ ನೋಡಲು ಪ್ರಯತ್ನಿಸಿದವರು ಎಂದರು.ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ, ಶಿಕ್ಷಕರಾದ ಎಸ್.ಎಂ.ಪಂಚಮುಖಿ, ಎಸ್.ಡಿ.ಬಿರಾದಾರ, ಎಸ್.ಎನ್.ಡಂಗಿ, ಜೆ.ಸಿ.ಗುಣಕಿ ಹಾಗೂ ಅತಿಥಿ ಶಿಕ್ಷಕರಾದ ಸಂತೋಷ ಬಿರಾದಾರ, ಯಲ್ಲಮ್ಮ ಸಾಲೋಟಗಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.