ಸಾಸ್ತಾನದ ಕಾರ್ತಿಕೇಯ ಎಸ್ಟೇಟ್ನಲ್ಲಿ ಎಪ್ರಿಲ್ ೧ರಿಂದ ೩ರ ವರೆಗೆ ನಡೆಯುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀನಿವಾಸ ಕಲ್ಯಾಣೋತ್ಸವ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಕನ್ನಡಪ್ರಭ ವಾರ್ತೆ ಕುಂದಾಪುರ
ಇಲ್ಲಿನ ಸಾಸ್ತಾನದ ಕಾರ್ತಿಕೇಯ ಎಸ್ಟೇಟ್ನಲ್ಲಿ ಎಪ್ರಿಲ್ ೧ರಿಂದ ೩ರ ವರೆಗೆ ನಡೆಯುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀನಿವಾಸ ಕಲ್ಯಾಣೋತ್ಸವ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭ ಐರೋಡಿ ವಾಸುಕಿ ಸುಬ್ರಹ್ಮಣ್ಯ ದೇಗುಲದ ಮುಖ್ಯಸ್ಥ ಸುಬ್ರಹ್ಮಣ್ಯ ಮಧ್ಯಸ್ಥ ಮಾತನಾಡಿ, ಲೋಕ ಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಪುಣ್ಯದ ಕಾರ್ಯಕ್ರಮವಾಗಿದೆ. ಇದರಿಂದ ಧಾರ್ಮಿಕ ಪ್ರಜ್ಞೆ ಮೂಡಿ, ಸಮಾಜ ಒಳಿತಿನೆಡೆಗೆ ಸಾಗಲಿ, ಈ ಕಾರ್ಯದಲ್ಲಿ ಪ್ರತಿಯೊಬ್ಬರು ಭಾಗಿಯಾಗಬೇಕು ಎಂದು ಶುಭ ಕೋರಿದರು.ಆಮಂತ್ರಣ ಪತ್ರಿಕೆಯನ್ನು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕೋಟ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇಗುದ ಅಧ್ಯಕ್ಷ ಗಣೇಶ್ ಭಟ್ ಬಿಡುಗಡೆಗೊಳಿಸಿದರು.ಕಾರ್ಯಕ್ರಮದಲ್ಲಿ ಎಸ್ಟೇಟ್ ಮಾಲಿಕ ಸುರೇಶ್ ಬೆಟ್ಟಿನ್, ಚಂದ್ರಶೇಖರ್ ಧನ್ಯ, ಅಘೋರೇಶ್ವರ ದೇಗುಲದ ಧರ್ಮದರ್ಶಿ ಚಂದ್ರಶೇಖರ್ ಕಾರಂತ್, ಗೋಳಿಗರಡಿ ದೈವಸ್ಥಾನದ ಅಧ್ಯಕ್ಷ ಜಿ.ವಿಠ್ಠಲ್ ಪೂಜಾರಿ ಪಾಂಡೇಶ್ವರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಮೇಶ್ ಪಿ.ಕೆ., ಸಾಲಿಗ್ರಾಮ ದೇಗುಲದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್, ಸಮಿತಿಯ ಪ್ರಮುಖರಾದ ಲೀಲಾವತಿ ಗಂಗಾಧರ, ವೇ.ಮೂ ಪ್ರಸನ್ನ ತುಂಗ, ರಘು ಮಧ್ಯಸ್ಥ, ಸುಬ್ರಾಯ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದ ಮಾರ್ಗದರ್ಶಕ ಡಾ.ವಿದ್ವಾನ್ ವಿಜಯ್ ಮಂಜರ್ ಕಲ್ಯಾಣೋತ್ಸವ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ವಹಿಸಿದ್ದರು. ಸಮಿತಿ ಕಾರ್ಯದರ್ಶಿ ಐರೋಡಿ ವಿಠಲ್ ಪೂಜಾರಿ ಸ್ವಾಗತಿಸಿ ಪ್ರಸ್ತಾವನೆ ಸಲ್ಲಿಸಿದರು. ಸಮಿತಿಯ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ ವಂದಿಸಿದರು.
ಸಾಸ್ತಾನದ ಕಾರ್ತಿಕೇಯ ಎಸ್ಟೇಟ್ ಶ್ರೀನಿವಾಸ ಕಲ್ಯಾಣೋತ್ಸವ ಕಚೇರಿಯಲ್ಲಿ ಇದೇ ಬರುವ ಎಪ್ರಿಲ್ ೧ರಿಂದ ೩ನೇ ತಾರೀಕಿನ ತನಕ ನಡೆಯುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕೋಟ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇಗುದ ಅಧ್ಯಕ್ಷ ಗಣೇಶ್ ಭಟ್ ಬಿಡುಗಡೆಗೊಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.