ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ತಾಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ''''ಒಂದು ಜಗತ್ತು, ಒಂದು ಕುಟುಂಬ, ಜಾಗತಿಕ ಸಾಂಸ್ಕೃತಿಕ ಉತ್ಸವ''''ದ 52ನೇ ದಿನದಂದು ಆಶೀರ್ವಚನ ನೀಡಿ ಮಾತನಾಡಿ, ವೈದ್ಯಕೀಯ ಆರೈಕೆಯಲ್ಲಿ ಸಮಯವು ಅತ್ಯಂತ ಮುಖ್ಯ. ರೋಗಿಗೆ ಸಕಾಲಕ್ಕೆ ಚಿಕಿತ್ಸೆ ಸಿಗಲು ನಮ್ಮ ಆಸ್ಪತ್ರೆ ಸಿಬ್ಬಂದಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಎಂದರು.
ಹೊರ ರೋಗಿಗಳ ವಿಭಾಗದಲ್ಲಿ ಜನಸಂದಣಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೀಗಾಗಿ ಒಪಿಡಿಗಾಗಿ ಹೊರಗೆ ಘಟಕಗಳನ್ನು ಆರಂಭಿಸಲಾಗಿದೆ. ಹೆಚ್ಚಿನ ಚಿಕಿತ್ಸೆ ಅಥವಾ ಸಮಾಲೋಚನೆಯ ಅಗತ್ಯವಿರುವವರು ಮಾತ್ರವೇ ಆಸ್ಪತ್ರೆಯ ಒಳಗೆ ಬರುತ್ತಿದ್ದಾರೆ. ಈ ಕ್ರಮದಿಂದಾಗಿ ರೋಗಿಗಳ ದಟ್ಟಣೆ ಕಡಿಮೆಯಾಗಿದ್ದು, ತುರ್ತು ಸಂದರ್ಭದ ಚಿಕಿತ್ಸೆಗೆ ಆಗುತ್ತಿದ್ದ ಅಡೆತಡೆಗಳು ನಿವಾರಣೆಯಾಗಿವೆ ಎಂದು ಹೇಳಿದರು.ಒಬ್ಬ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದಾಗ ಎರಡು ಬದಿಯಿಂದ ಕಷ್ಟ ಎದುರಿಸಬೇಕಾಗುತ್ತದೆ. ಒಂದೆಡೆ ತಮ್ಮ ಉಳಿತಾಯದ ಮೊತ್ತ ಕರಗಿದರೆ ಮತ್ತೊಂದು ಕಡೆ ಆದಾಯ ಗಳಿಕೆ ಸ್ಥಗಿತವಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿರುವ ವೃದ್ಧರ ಚಿಕಿತ್ಸೆ ನಿಜಕ್ಕೂ ಸವಾಲಾಗಿತ್ತು. ನಮ್ಮ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸಿಗುವುದು ಗ್ರಾಮೀಣ ಪ್ರದೇಶಗಳಲ್ಲಿನ ಎಷ್ಟೋ ಮನೆಗಳು ಉಳಿಯಲು ಕಾರಣವಾಗಿದೆ ಎಂದು ವಿವರಿಸಿದರು.
ಇದೇ ವೇಳೆ ಆರೋಗ್ಯ ಕ್ಷೇತ್ರಕ್ಕೆ ಬೆಂಬಲ ನೀಡುತ್ತಿರುವ ''''ಉಮಾ ಮಹೇಶ್ವರ ರಾವ್ ಆ್ಯಂಡ್ ಕಂಪನಿ''''ಗೆ ''''ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ'''' ನೀಡಿ ಗೌರವಿಸಲಾಯಿತು. ಕಂಪನಿಯ ವ್ಯವಸ್ಥಾಪಕ ಪಾಲುದಾರ ರವಿ ವಡ್ಲಮನಿ ಪ್ರಶಸ್ತಿ ಸ್ವೀಕರಿಸಿದರು. ಇಂಡೋನೇಷ್ಯಾದಲ್ಲಿ ಸಂಗೀತ ಮತ್ತು ಲಲಿತಕಲೆಗೆ ಕೊಡುಗೆ ನೀಡಿರುವ ಹಿರಿಯ ಕಲಾವಿದ ಡಾ. ಜೆ.ವಯಾನ್ ದಿಬಿಯಾ ಅವರಿಗೆ ''''ಒಂದು ಜಗತ್ತು ಒಂದು ಕುಟುಂಬ ಮಾನವೀಯ ಪುರಸ್ಕಾರ’ ನೀಡಿ ಗೌರವಿಸಲಾಯಿತು.
ವಿಜಯ ಸಂಕೇಶ್ವರ ಭೇಟಿ:ವಿಆರ್ಎಲ್ ಸಮೂಹ ಸಂಸ್ಥೆಗಳ ಮಾಲೀಕರಾದ ಪದ್ಮಶ್ರೀ ಪುರಸ್ಕೃತ ವಿಜಯ್ ಸಂಕೇಶ್ವರ ಅವರು ಭೇಟಿ ನೀಡಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರ ಆಶೀರ್ವಾದ ಪಡೆದರು.
ಸರಕು ಸಾಗಣೆ, ದೂರ ಸಂಚಾರಿ ಬಸ್ಗಳು, ದಿನಪತ್ರಿಕೆಯನ್ನು ವಿಆರ್ಎಲ್ ಸಮೂಹವು ನಿರ್ವಹಿಸುತ್ತಿದೆ. ಈ ಹಿಂದೆ ಸಂಸದರಾಗಿದ್ದ ವಿಜಯ್ ಸಂಕೇಶ್ವರ ಅವರು ಸಮಾಜ ಸೇವಾ ಕ್ಷೇತ್ರದಲ್ಲಿ ಇಂದಿಗೂ ಸಕ್ರಿಯರಾಗಿದ್ದಾರೆ. ಸತ್ಯ ಸಾಯಿ ಗ್ರಾಮದಲ್ಲಿ ಅವರು ''''ಒಂದು ಜಗತ್ತು, ಒಂದು ಕುಟುಂಬ, ಜಾಗತಿಕ ಮಾನವೀಯ ಸೇವಾ ಅಭಿಯಾನ'''' ಕುರಿತು ಆಸಕ್ತಿಯಿಂದ ಮಾಹಿತಿ ಪಡೆದುಕೊಂಡರು