ಜಾನಪದ ಕಲೆ ಉಳಿಸಿ ಬೆಳೆಸಿ: ಡಾ.ಕೃಷ್ಣ ಎಸ್.ಭಟ್

KannadaprabhaNewsNetwork |  
Published : Jun 10, 2025, 01:34 AM IST
ಭೂಮಿಕಾ ವೇದಿಕೆ ವತಿಯಿಂದ ಭದ್ರಾವತಿ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯಲ್ಲಿರುವ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಾನಪದ ವೈಭವ `ಚೌಡಿಕೆ ಗೊಂದಲಿಗರ ಪದ' ವಿಶೇಷ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. | Kannada Prabha

ಸಾರಾಂಶ

ಜಾನಪದ ಜನರಿಂದ ಜನರಿಗಾಗಿ ಇರುವ ಕಲೆ. ಇದೊಂದು ಅದ್ಭುತ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ನಗರದ ಭೂಮಿಕಾ ವೇದಿಕೆ ಅಧ್ಯಕ್ಷ ಡಾ.ಕೃಷ್ಣ ಎಸ್.ಭಟ್ ಹೇಳಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಜಾನಪದ ಜನರಿಂದ ಜನರಿಗಾಗಿ ಇರುವ ಕಲೆ. ಇದೊಂದು ಅದ್ಭುತ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ನಗರದ ಭೂಮಿಕಾ ವೇದಿಕೆ ಅಧ್ಯಕ್ಷ ಡಾ.ಕೃಷ್ಣ ಎಸ್.ಭಟ್ ಹೇಳಿದರು.

ಅವರು ಭೂಮಿಕಾ ವೇದಿಕೆಯಿಂದ ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯಲ್ಲಿರುವ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಾನಪದ ವೈಭವ `ಚೌಡಿಕೆ ಗೊಂದಲಿಗರ ಪದ'''''''''''''''' ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾನಪದಕ್ಕೆ ತನ್ನದೇ ಆದ ಮಹತ್ವವಿದೆ. ಕನ್ನಡನಾಡಿನ ಶ್ರೀಮಂತ ಕಲೆಗಳಲ್ಲಿ ಒಂದಾಗಿದೆ. ಇಂದಿನ ಯುವ ಸಮುದಾಯಕ್ಕೆ ಜಾನಪದ ಮಹತ್ವ ತಿಳಿಸಿಕೊಡುವ ಅಗತ್ಯವಿದೆ ಎಂದರು.

ಚೌಡಿಕೆ ಕಲಾವಿದ ಲಕ್ಷ್ಮಣರಾವ್ ಭೋರತ್‌ ಅವರ ತಂಡದಿಂದ ನಡೆದ `ಚೌಡಿಕೆ ಗೊಂದಲಿಗರ ಪದ'''''''''''''''' ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ವೇದಿಕೆ ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್, ಕೋಶಾಧ್ಯಕ್ಷ ಮುನಿರಾಜ್, ಪುಷ್ಪ ತಂಡದವರು ಪ್ರಾರ್ಥಿಸಿ, ಶೋಭಾ ಸ್ವಾಗತಿಸಿದರು. ರೂಪರಾವ್ ನಿರೂಪಿಸಿದರು.

ಕಾರ್ಯಕ್ರಮಕ್ಕೂ ಮೊದಲು ಇತ್ತೀಚೆಗೆ ನಿಧನರಾದ ಕವಿ, ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?