ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಸಿಎಸ್ ಪುರ ಹೋಬಳಿಯ ಹಿಂಡಿಸಿಗೆರೆ ಗ್ರಾಮದ ದಲಿತ ಕಾಲೋನಿಯ ನಿವಾಸಿಗಳು ಈ ಜಮೀನಿನಲ್ಲಿ ಸುಮಾರು ವರ್ಷಗಳಿಂದಲೂ ಕೃಷಿ ಮಾಡಿಕೊಂಡು ನಮ್ಮ ಜೀವನ ನಡೆಸುತ್ತಿದ್ದೇವೆ ಪ್ರಭಾವಿ ವ್ಯಕ್ತಿಗಳಿಂದ ಜಾಗ ಖಾಲಿ ಮಾಡಿ ಎಂದು ನಮಗೆ ತೊಂದರೆ ಕೊಡುತ್ತಿದ್ದಾರೆ. ಈ ಜಾಗವನ್ನು ನಮಗೆ ಉಳಿಸಿ ಕೊಡಿ ಎಂದು ತಹಸೀಲ್ದಾರ್ ಬಿ. ಆರತಿ ಅವರ ಕಚೇರಿಗೆ ಬಂದು ಕಣ್ಣೀರಿಟ್ಟರು.
ಸರ್ವೇ ನಂಬರ್ 48 ರಲ್ಲಿ 8.13 ಎಕರೆ ಜಾಗದಲ್ಲಿ ಹತ್ತು ವರ್ಷಗಳಿಂದ 10 ದಲಿತ ಕುಟುಂಬದವರು ಕೃಷಿ ನಡೆಸಿಕೊಂಡು ಜೀವನ ನಡೆಸುತ್ತಿದ್ದಾರೆ. ಇದನ್ನು ಸಹಿಸದ ಪ್ರಭಾವಿ ವ್ಯಕ್ತಿಗಳು ದಲಿತ ಕುಟುಂಬದವರನ್ನು ಖಾಲಿ ಮಾಡಿಸಿ ತಮ್ಮ ಹೆಸರಿಗೆ ಮಾಡುವ ಉನ್ನಾರ ನಡೆಸಿದ್ದಾರೆ. ಇದೇ ಜಾಗದಲ್ಲಿ ನಮ್ಮ ದಲಿತ ಕುಟುಂಬದವರು ನಿಧನ ನಂತರ ಅಂತ್ಯ ಸಂಸ್ಕಾರ ಮಾಡಿದ್ದೇವೆ. ಆದ್ದರಿಂದ ನಮ್ಮ ದಲಿತ ಕುಟುಂಬದವರಿಗೆ ಅನ್ಯಾಯ ಆಗದಂತೆ ಜಮೀನನ್ನು ಮಂಜೂರು ಮಾಡಿಕೊಡಬೇಕೆಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ದಲಿತ ಕುಟುಂಬದವರಾದ ಮೂಡಲಗಿರಿಯಪ್ಪ, ವೆಂಕಟೇಶಯ್ಯ, ಮಂಜುನಾಥ್, ತಿಮ್ಮಯ್ಯ, ದೊಡ್ಡಮ್ಮ, ಶಿವಕುಮಾರ, ಸಿದ್ದಯ್ಯ, ಜಯಲಕ್ಷ್ಮಮ್ಮ, ಮಂಗಳಮ್ಮ, ಕೆಂಪಮ್ಮ ಭಾಗವಹಿಸಿದ್ದರು.