ಕಲಾ ರಂಗಭೂಮಿಯನ್ನು ಉಳಿಸಿ, ಪ್ರೋತ್ಸಾಹಿಸಿ: ಮಂಜುನಾಥ್ ಪ್ರಸನ್ನ ಮನವಿ

KannadaprabhaNewsNetwork |  
Published : Dec 15, 2024, 02:01 AM IST
ಕಲಾರಂಗಭೂಮಿಯನ್ನು ಉಳಿಸಿ, ಬೆಳೆಸಿ  ಪ್ರೋತ್ಸಾಹಿಸಿ-ಮಂಜುನಾಥ್ ಪ್ರಸನ್ನ | Kannada Prabha

ಸಾರಾಂಶ

ಇತ್ತೀಚೆಗೆ ಕಲಾ ರಂಗಭೂಮಿ ಸೇರಿದಂತೆ ಸಿನಿಮಾ ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ರಂಗತರಂಗ ಸಂಸ್ಥೆ ಕಳೆದ ೩೦ ವರ್ಷಗಳಿಂದ ರಂಗಭೂಮಿಯಲ್ಲಿ ತನ್ನನ್ನು ತೊಡಗಿಸಿಕೊಂಡು ಹಲವಾರು ಕಲಾವಿದರನ್ನು ಹುಟ್ಟು ಹಾಕುತ್ತಾ ಬಂದಿದೆ, ಕಲಾವಿದರಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಮೂಲಕ ರಂಗತರಂಗ ಟ್ರಸ್ಟ್ ಬೆಳವಣಿಗೆಗೆ ಸಹಕಾರ ನೀಡಬೇಕು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ರಂಗಭೂಮಿಯನ್ನು ಉಳಿಸುವ ಮಹತ್ವದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಾಹಿತಿ, ಜಿಲ್ಲಾ ಪದವಿ ಪೂರ್ವ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಪ್ರಸನ್ನ ಅಭಿಪ್ರಾಯಪಟ್ಟರು.

ನಗರದ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ರಂಗತರಂಗ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರಂಗತರಂಗ ಟ್ರಸ್ಸ್ ನ ೩೦ನೇ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿದ್ದ ರಂಗತರಂಗ, ರಂಗೋತ್ಸವ ಮೂರು ದಿನಗಳ ನಾಟಕೋತ್ಸವವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಇತ್ತೀಚೆಗೆ ಕಲಾ ರಂಗಭೂಮಿ ಸೇರಿದಂತೆ ಸಿನಿಮಾ ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ರಂಗತರಂಗ ಸಂಸ್ಥೆ ಕಳೆದ ೩೦ ವರ್ಷಗಳಿಂದ ರಂಗಭೂಮಿಯಲ್ಲಿ ತನ್ನನ್ನು ತೊಡಗಿಸಿಕೊಂಡು ಹಲವಾರು ಕಲಾವಿದರನ್ನು ಹುಟ್ಟು ಹಾಕುತ್ತಾ ಬಂದಿದೆ, ಕಲಾವಿದರಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಮೂಲಕ ರಂಗತರಂಗ ಟ್ರಸ್ಟ್ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರಂಗತರಂಗ ಟ್ರಸ್ಟ್ ಅಧ್ಯಕ್ಷ ಸೋಮಶೇಖರ್ ಬಿಸಲ್ವಾಡಿ ಮಾತನಾಡಿ, ನಮ್ಮ ಸಂಸ್ಥೆ ವತಿಯಿಂದ ಕಳೆದ ಮೂರು ದಶಕಗಳಿಂದ ಕಾವ್ಯ ಕಮ್ಮಟ, ನೃತ್ಯ, ನಾಟಕ ಶಿಬಿರಗಳನ್ನು ಆಯೋಜಿಸುತ್ತ ಬಂದಿದ್ದೇವೆ. ಪ್ರೇಕ್ಷಕರು ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ಮಾಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಕಲಾವಿದರಾದ ಅಂಬಳೆ ಸಿದ್ದರಾಜು, ಎಸ್ .ಜಿ.ಸುಜಾತ, ಯಡಿಯೂರು ಮಹದೇವ, ಪಿಯು ಡಿಡಿ ಮಂಜುನಾಥ್ ಪ್ರಸನ್ನ ಅವರನ್ನು ಸನ್ಮಾನಿಸಲಾಯಿತು.

ಸಾಲಿಗ್ರಾಮ ಹುಚ್ಚಮ್ಮ ಕಾಳನಿಂಗೇಶ್ವರ ನಾಟಕ ಮಂಡಳಿ ಕಲಾವಿದರಿಂದ ರಾಜಾವಿಕ್ರಮ ಅಥವಾ ಶನಿಪ್ರಭಾವ ನಾಟಕ ಪ್ರದರ್ಶಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ