ರೈತರ ಸಮುದಾಯವನ್ನು ಉಳಿಸಿ ಅಭಿಯಾನ

KannadaprabhaNewsNetwork |  
Published : Apr 01, 2024, 12:45 AM IST
31ಸಿಎಚ್‌ಎನ್‌52ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ರೈತರ ಸಮುದಾಯವನ್ನು ಉಳಿಸಿ ಅಭಿಯಾನ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸುವ ಮೂಲಕ ರೈತ ವಿರೋಧಿ ಸರ್ಕಾರವನ್ನು ಕಿತ್ತೋಗೆದು ರೈತರ ಸಮುದಾಯವನ್ನು ಉಳಿಸಿ ಅಭಿಯಾನವನ್ನು ರಾಜ್ಯಾಧ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ವಿರೋಧಿ ಎನ್‌ಡಿಎ ಒಕ್ಕೂಟವು ಮತ್ತೇ ಅಧಿಕಾರಕ್ಕೆ ಬರದಂತೆ ತಡೆಯಲು ರೈತ ಸಂಘ ತೀರ್ಮಾನಿಸಿದೆ. ಮಾ. 21 ರಂದು ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಎನ್‌ಡಿಎ ಒಕ್ಕೂಟವು ಅಧಿಕಾರಕ್ಕೆ ಬರುವುದನ್ನು ತಡೆಯಲು ಲೋಕಸಭಾ ಚುನಾವಣೆಯಲ್ಲಿ ಬಿ.ಜೆ.ಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ-ರೈತ ಸಮುದಾಯವನ್ನು ಉಳಿಸಿ " ಎಂಬ ಘೋಷಣೆಯಡಿ ಪ್ರಚಾರ ನಡೆಸಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ ಎಂದರು. 10 ವರ್ಷದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಆಡಳಿತದಲ್ಲಿ ರೈತ ಸಮುದಾಯವನ್ನು ನಿರ್ಲಕ್ಷ್ಯ ಮಾಡಿ ಇಡೀ ಕೃಷಿ ಕ್ಷೇತ್ರವನ್ನೇ ಕಾರ್ಪೋರೇಟ್ ವಲಯಕ್ಕೆ ಒಪ್ಪಿಸುವಂತಹ ಕೆಟ್ಟ ನೀತಿಗಳು ರೂಪುಗೊಂಡಿವೆ. ಮತ್ತೇ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಒಕ್ಕೂಟ ಅಧಿಕಾರಕ್ಕೆ ಮರಳಿದಲ್ಲಿ ರೈತ ಕುಲ ಸಂಪೂರ್ಣ ನಾಶವಾಗುತ್ತದೆ. ಈ ಹಿನ್ನಲೆಯಲ್ಲಿ ದಿನಾಂಕ: 14-3-2024ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ರೈತ-ಕಾರ್ಮಿಕ ಮಹಾ ಪಂಚಾಯತ್‌ನಲ್ಲಿ ಎನ್.ಡಿ.ಎ ಅನ್ನು ಅಧಿಕಾರದಿಂದ ಕಿತ್ತೊಗೆಯಲು ದೇಶದ ರೈತರು ನಿರ್ಣಯ ಕೈಗೊಂಡಿದ್ದಾರೆ. ಈ ತೀರ್ಮಾನವನ್ನು ರಾಜ್ಯ ರೈತ ಸಂಘ ಎಲ್ಲಾ ಲೋಕಸಭಾ ಕ್ಷೇತ್ರದ ಪ್ರತಿ ಹಳ್ಳಿ ಹಳ್ಳಿಗಳಿಗೂ, ಪ್ರತಿ ಕುಟುಂಬಕ್ಕೂ ತಲುಪಿಸಿ ಎನ್.ಡಿ.ಎ ವಿರುದ್ಧ ಮತ ಚಲಾಯಿಸಲು ರೈತ ಸಮುದಾಯಕ್ಕೆ ಕರೆ ನೀಡಲಾಗುವುದು ಎಂದು ತಿಳಿಸಿದರು. ಎನ್‌ಡಿಎ ಒಕ್ಕೂಟದಲ್ಲಿರುವ ಜ್ಯಾತ್ಯಾತೀತ ಜನತಾದಳವು ಕೂಡ ರೈತ ಪರ ಪಕ್ಷವಾಗಿ ಉಳಿದಿಲ್ಲ ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಮಾರಕವಾದ ಶಾಸನಕ್ಕೆ ಮತ್ತು ಎ.ಪಿ.ಎಂ.ಸಿ ತಿದ್ದುಪಡಿ ಕಾಯ್ದೆಗೆ ಬೆಂಬಲ ವ್ಯಕ್ತಪಡಿಸಿ ತನ್ನ ರೈತವಿರೋಧಿ ನೀತಿಯನ್ನು ಬಹಿರಂಗವಾಗಿ ಪ್ರದರ್ಶಿಸಿದೆ. ಒಂದು ವರ್ಷಕ್ಕಿಂತಲೂ ಹೆಚ್ಚು ಕಾಲ ದೆಹಲಿ ಸುತ್ತಾಮುತ್ತಾ ನಡೆದ ರೈತ ಆಂದೋಲನವನ್ನು ಬೆಂಬಲಿಸಲಿಲ್ಲ, ಜೆ.ಡಿ.ಎಸ್ ರೈತರ ಪಕ್ಷವೂ ಅಲ್ಲ ಜ್ಯಾತ್ಯಾತೀತ ಪಕ್ಷವೂ ಅಲ್ಲ ಎಂದು ದೂರಿದರು. ಗೋಷ್ಠಿಯಲ್ಲಿ ರೈತ ಸಂಘದ ಉಪಾಧ್ಯಕ್ಷ ಎ.ಎಂ ಮಹೇಶ್ ಪ್ರಭು, ಸರ್ವೋದಯ ಕರ್ನಾಟಕ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್.ಗೌಡ

ಜಿಲ್ಲಾಧ್ಯಕ್ಷ ಶಾಂತಮಲ್ಲಪ್ಪ, ಪ್ರಧಾನ ಕಾರ್ಯದರ್ಶಿ ಭಾಸ್ಕರ್.ಸಿ, ಕಾರ್ಯಾಧ್ಯಕ್ಷರಾದ ಶಿವಪುರ ಮಹದೇವಪ್ಪ, ಶೈಲೇಂದ್ರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ