ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಹಳೇಬೀಡು ಗ್ರಾಪಂ ವ್ಯಾಪ್ತಿಯಲ್ಲಿ ಸೋಮವಾರ ಆಯೋಜಿಸಿದ್ದ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭೂ ಮಾಪನ, ಕಂದಾಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಸರ್ಕಾರಿ ಜಾಗ, ಸಾರ್ವಜನಿಕ ರಸ್ತೆ, ಕೆರೆ ಒತ್ತುವರಿ ಎಲ್ಲವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಿದ ಬಳಿಕ ಕಂದಕಗಳನ್ನು ನಿರ್ಮಿಸಿ ರಕ್ಷಿಸುವ ಕೆಲಸ ಮಾಡಲಾಗುವುದು ಎಂದರು.
ಕೆರೆ ಒತ್ತುವರಿ ತೆರವುಗೊಳಿಸಿದ ನಂತರ ರೈತರು, ಗ್ರಾಮಸ್ಥರು ಅದನ್ನು ಪಕ್ಷಾತೀತವಾಗಿ ಉಳಿಸಿಕೊಂಡು ಹೋಗುವ ಕೆಲಸ ಮಾಡಬೇಕು. ಕೆರೆಗಳು ಇಲ್ಲ ಎಂದರೆ ರೈತರು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದು ಎಚ್ಚರಿಸಿದರು.ಈಗಾಗಲೇ ತಾಲೂಕಿನ ಕೆನ್ನಾಳು, ಬನ್ನಂಗಾಡಿ ಹಾಗೂ ಕ್ಷೇತ್ರ ವ್ಯಾಪ್ತಿಯ ಚಂದಗಾಲು ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಕಾರ್ಯಕ್ರಮ ಯಶಸ್ವಿಯಾಗಿದೆ. ಜನ ಕೇವಲ ಪೌತಿ ಖಾತೆ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಮಾತ್ರ ಬರಬೇಕು. ಇತರೆ ಎಲ್ಲಾ ಕೆಲಸಗಳು ಮನೆಯ ಬಾಗಿಲಿಗೆ ತಲುಪಬೇಕು ಎಂಬುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಒತ್ತುವರಿ ತೆರವಿಗಾಗಿ ಜೆಸಿಬಿ ಸದ್ದು:
ಗ್ರಾಪಂ ವ್ಯಾಪ್ತಿಯ ಹೊಸಕೋಟೆ ಗ್ರಾಮದ 128 ಮತ್ತು 129ರ ಸರ್ವೇ ನಂಬರ್ನಲ್ಲಿ ಪರಿಶಿಷ್ಟಜಾತಿ ಕಾಲೋನಿ ನಿರ್ಮಾಣಕ್ಕಾಗಿ 1980ರಲ್ಲಿ 130 ನಿವೇಶನಗಳ ಹಂಚಿಕೆಯಾಗಿತ್ತು. ಈ ಪೈಕಿ 34 ಫಲಾನುಭವಿಗಳಿಗೆ ಮಾತ್ರ ಹಕ್ಕುಪತ್ರ ವಿತರಿಸಿ ಉಳಿಕೆ ನಿವೇಶನಗಳನ್ನು ಕಾಯ್ದಿರಿಸಲಾಗಿತ್ತು ಎಂದರು.
ಈ ವೇಳೆ ತಹಸೀಲ್ದಾರ್ ಎಸ್.ಸಂತೋಷ್, ತಾಪಂ ಇಒ ಲೋಕೇಶ್ಮೂರ್ತಿ, ರೇಷ್ಮೇ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಅರಣ್ಯಾಧಿಕಾರಿ ಜಗದೀಶ್, ಸಿಡಿಪಿಒ ಪೂರ್ಣಿಮ ಇತರರು ಇದ್ದರು.