ಸಮಾಜದ ಏಳಿಗೆಗೆ ಸವಿತಾ ಮಹರ್ಷಿ ಆದರ್ಶ ಪಾಲನೆ ಅಗತ್ಯ: ಎಂ ಎ ಗಫೂರ್

KannadaprabhaNewsNetwork |  
Published : Jan 26, 2026, 04:30 AM IST
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ ಎ ಗಫೂರ್ ಸವಿತಾ ಮಹರ್ಷಿ ಜಯಂತಿಯನ್ನು ಉದ್ಘಾಟಿಸಿಜದರು | Kannada Prabha

ಸಾರಾಂಶ

ಸವಿತಾ ಸಮಾಜವು ತಮ್ಮ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ಸೃಜನಶೀಲತೆಯನ್ನು ಹೊಂದುವ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಿದ್ದು, ವೃತ್ತಿಯ ಮೂಲ ಪುರುಷರಾದ ಸವಿತಾ ಮಹರ್ಷಿ ಅವರ ಆದರ್ಶ ಪಾಲನೆ ಸಮಾಜದ ಏಳಿಗೆಗೆ ಅಗತ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್ ಹೇಳಿದರು.

ಉಡುಪಿ: ಸವಿತಾ ಸಮಾಜವು ತಮ್ಮ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ಸೃಜನಶೀಲತೆಯನ್ನು ಹೊಂದುವ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಿದ್ದು, ವೃತ್ತಿಯ ಮೂಲ ಪುರುಷರಾದ ಸವಿತಾ ಮಹರ್ಷಿ ಅವರ ಆದರ್ಶ ಪಾಲನೆ ಸಮಾಜದ ಏಳಿಗೆಗೆ ಅಗತ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್ ಹೇಳಿದರು.

ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಮಾತನಾಡಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಉದಯಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸವಿತಾ ಮಹರ್ಷಿಗಳು ಜೀವನನಿರ್ವಹಣೆಗಾಗಿ ಅನೇಕ ತತ್ವಗಳನ್ನು ಕೊಡುಗೆಯಾಗಿ ನೀಡಿದ್ದು, ಪ್ರಸ್ತುತ ಬದುಕಿನಲ್ಲಿ ಅವುಗಳ ಪಾಲನೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು.

ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ರಾಜು ಸಿ. ಭಂಡಾರಿ ಕಿನ್ನಿಮುಲ್ಕಿ, ಸವಿತಾ ಮಹರ್ಷಿಗಳ ತತ್ವ ಆದರ್ಶಗಳ ಪಾಲನೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿ ನಿತ್ಯದ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಜಿಲ್ಲಾ ಕನ್ನಡ ರಾಜ್ಯೋತ್ಸವ ಸನ್ಮಾನ ಪುರಸ್ಕೃತ ಗೋವಿಂದ ಭಂಡಾರಿ ಬನ್ನಂಜೆ ಸವಿತಾ ಮಹರ್ಷಿ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಶೇಖರ ಸಾಲಿಯಾನ್ ಅದಿಉಡುಪಿ ಇವರನ್ನು ಸನ್ಮಾನಿಸಲಾಯಿತು. ಉಡುಪಿ

ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿ, ಮಹೇಶ್ ನಿರೂಪಿಸಿ, ಶೇಖರ್ ಸಾಲಿಯಾನ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತ್ತೂರು ಬಸಿಲಿಕಾದಲ್ಲಿ ಸಂತ ಲಾರೆನ್ಸ್ ವಾರ್ಷಿಕ ಮಹೋತ್ಸವ ಆರಂಭ
ಯುವಜನತೆಗೆ ಧಾರ್ಮಿಕ ಶಿಕ್ಷಣದ ಅಗತ್ಯವಿದೆ - ಕೇಮಾರು ಶ್ರೀ